ನವದೆಹಲಿ: ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿಗಳನ್ನು (Street dogs) ಹಿಡಿದು ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ಸೂಚಿಸಿದ ಸುಪ್ರೀಂಕೋರ್ಟ್ (Supreme Court) ನಿರ್ದೇಶನವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿರೋಧಿಸಿದ್ದಾರೆ.
The SC’s directive to remove all stray dogs from Delhi-NCR is a step back from decades of humane, science-backed policy.
These voiceless souls are not “problems” to be erased.
Shelters, sterilisation, vaccination & community care can keep streets safe – without cruelty.
Blanket…
— Rahul Gandhi (@RahulGandhi) August 12, 2025
ಈ ಕುರಿತು ಎಕ್ಸ್ನಲ್ಲಿ ಪ್ರತಿಕ್ರಿಯಿಸಿದ ಅವರು, ಈ ನಿರ್ಧಾರವು ಹಲವು ವರ್ಷಗಳಿಂದ ಅನುಸರಿಸುತ್ತಿರುವ ಮಾನವೀಯ ಹಾಗೂ ವಿಜ್ಞಾನಾಧಾರಿತ ನೀತಿಯಿಂದ ಹಿಂದಕ್ಕೆ ಸರಿದಂತಾಗಿದೆ. ಮೂಖ ಜೀವಿಗಳು ಅಳಿಸಬೇಕಾದ ಸಮಸ್ಯೆಗಳಲ್ಲ. ಶಸ್ತ್ರಚಿಕಿತ್ಸೆ, ಲಸಿಕೆ ಹಾಗೂ ಸಮುದಾಯದ ಕಾಳಜಿ ಮೂಲಕ ಬೀದಿಗಳನ್ನು ಕ್ರೂರತೆ ಇಲ್ಲದೆ ಸುರಕ್ಷಿತವಾಗಿರಿಸಬಹುದು ಎಂದಿದ್ದಾರೆ. ಇದನ್ನೂ ಓದಿ: ನಗರಗಳಲ್ಲಿನ ಬೀದಿನಾಯಿ, ಅನಾಥ ಪ್ರಾಣಿಗಳ ತೆರವಿಗೆ ವಿಶೇಷ ಅಭಿಯಾನ – ರಾಜಸ್ಥಾನ ಹೈಕೋರ್ಟ್
ಸಾಮೂಹಿಕವಾಗಿ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವುದು ಕ್ರೂರ, ದೂರದೃಷ್ಟಿಯಿಲ್ಲದ ಕ್ರಮವಾಗಿದೆ. ಸುಪ್ರೀಂಕೋರ್ಟ್ ಮಾನವೀಯತೆ ಹಾಗೂ ಸಹಾನುಭೂತಿಯಿಲ್ಲದ ಕಾನೂನನ್ನು ಪಕ್ಕಕ್ಕೆ ಸರಿಸಿದೆ. ಸಾರ್ವಜನಿಕ ಸುರಕ್ಷತೆ ಮತ್ತು ಪ್ರಾಣಿಗಳ ಕಾಳಜಿ ಎರಡನ್ನೂ ಒಟ್ಟಿಗೆ ಮಾಡಬಹುದು ಎಂದು ಹೇಳಿದ್ದಾರೆ.
ಬೀದಿ ನಾಯಿ ಕಡಿತ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದ ನ್ಯಾಯಮೂರ್ತಿಗಳಾದ ಪಾರ್ದಿವಾಲಾ ಮತ್ತು ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠವು, ನಗರದ ಹೊರವಲಯವನ್ನು ಬೀದಿನಾಯಿಗಳಿಂದ ಮುಕ್ತಗೊಳಿಸುವುದು ಮೊಟ್ಟ ಮೊದಲ ಆದ್ಯತೆಯಾಗಬೇಕು. ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಹೇಳಿತ್ತು.