ಕದ್ದು ಪರಾರಿಯಾಗುತ್ತಿದ್ದವನನ್ನು ಹಿಡಿದು ಥಳಿಸಿದ ಸ್ಥಳೀಯರು – ಕಳ್ಳ ಸಾವು

crim 1

ನವದೆಹಲಿ: ಮನೆಯೊಂದರಲ್ಲಿ ಕಳ್ಳತನ ಮಾಡಲು ಯತ್ನಿಸಿದ 30 ವರ್ಷದ ವ್ಯಕ್ತಿಯನ್ನು ಸ್ಥಳೀಯರು ಥಳಿಸಿದ್ದರಿಂದ ಆತ ಸಾವನ್ನಪ್ಪಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.

crim

ಸೆಕ್ಟರ್ 63 ಪೊಲೀಸ್ ಠಾಣೆ ವ್ಯಾಪ್ತಿಯ ಚೋಟ್‍ಪುರ್ ಗ್ರಾಮದಲ್ಲಿ ಜನರು ಕಳ್ಳನನ್ನು ಹಿಡಿದು ಬೆಳಿಗ್ಗೆ 5.30 ರ ಸುಮಾರಿಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಳ್ಳನನ್ನು ವಶಕ್ಕೆ ಪಡೆದು, ಆತನ ಬಳಿಯಿದ್ದ ಒಂದು ಪಿಸ್ತೂಲ್ ಮತ್ತು ಕೆಲವು ಕದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ತೀವ್ರವಾಗಿ ಗಾಯಗೊಂಡಿದ್ದರಿಂದ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ವ್ಯಕ್ತಿ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಮಲೆಮಹದೇಶ್ವರ ಜಾತ್ರಾಮಹೋತ್ಸವ – ಪೂರ್ವಸಿದ್ಧತೆಗಳ ಕುರಿತಂತೆ ಸಭೆ ನಡೆಸಿದ ಸೋಮಣ್ಣ

crime

ಮೃತ ವ್ಯಕ್ತಿಯನ್ನು ಪಂಕಜ್ ಸಿಂಗ್ ಎಂದು ಗುರುತಿಸಲಾಗಿದ್ದು, ಈತ ಕನ್ನೌಜ್ ಜಿಲ್ಲೆಯ ನಿವಾಸಿಯಾಗಿದ್ದಾನೆ. ಚೋಟ್‍ಪುರ ಗ್ರಾಮದ ಮನೆಯೊಂದರಲ್ಲಿ ಕಳ್ಳತನ ಮಾಡಿ ಜಿಗಿಯುತ್ತಿದ್ದ ವೇಳೆ ಶಬ್ಧ ಕೇಳಿಸಿಕೊಂಡ ಕೆಲವು ಸ್ಥಳೀಯ ನಿವಾಸಿಗಳು ಶೀಘ್ರವೇ ಆತನನ್ನು ಹಿಡಿದಿದ್ದಾರೆ. ಈ ವೇಳೆ ಕಳ್ಳ ತನ್ನ ಬಳಿ ಇದ್ದ ಪಿಸ್ತೂಲ್ ಹೊರ ತೆಗೆದಿದ್ದಾನೆ. ಆಗ ಅಲ್ಲಿದ್ದ ಸ್ಥಳೀಯರು ಆತನನ್ನು ಚೆನ್ನಾಗಿ ಥಳಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣ ಸಂಬಂಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಇದನ್ನೂ ಓದಿ: ಆಮ್ ಆದ್ಮಿ, ಕಾಂಗ್ರೆಸ್ ಪಕ್ಷದ Xerox copy: ಮೋದಿ ವ್ಯಂಗ್ಯ

Comments

Leave a Reply

Your email address will not be published. Required fields are marked *