ರಾಯಚೂರು: ಕಳ್ಳನೊಬ್ಬ ಔಷಧಿ ಅಂಗಡಿ ಬೀಗ ಮುರಿದು ಕಳ್ಳತನ ಮಾಡಿ ಪರಾರಿಯಾದ ಘಟನೆ ದೇವದುರ್ಗ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಬಸ್ ನಿಲ್ದಾಣದ ಬಳಿಯ ಸಂತೋಷ ಕುಮಾರ್ ಎಂಬವರ ಬನದೇಶ್ವರ ಔಷಧಿ ಅಂಗಡಿಯಲ್ಲಿ ಕಳ್ಳತನ ನಡೆದಿದೆ. ಸ್ಕ್ರೂಡ್ರೈವರ್ನಿಂದ ದುಡ್ಡಿನ ಪೆಟ್ಟಿಗೆಯನ್ನ ಮುರಿದು 23 ಸಾವಿರ ರೂ. ನಗದು ಸೇರಿ 45 ಸಾವಿರ ರೂ. ಮೌಲ್ಯದ ವಸ್ತುಗಳನ್ನ ಕಳ್ಳತನ ಮಾಡಿದ್ದಾನೆ.
ಸಿಸಿ ಕ್ಯಾಮೆರಾದಲ್ಲಿ ಕಳ್ಳರ ಕರಾಮತ್ತು ಬಯಲಾಗಿದೆ. ರಾತ್ರಿ ವೇಳೆ ಅಂಗಡಿ ಬೀಗ ಮುರಿದಿದ್ದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಅಂಗಡಿ ಮಾಲೀಕರಾದ ಸಂತೋಷ ಕುಮಾರ್ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.
ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಪೊಲೀಸರು ಕಳ್ಳನ ಪತ್ತೆಗೆ ಮುಂದಾಗಿದ್ದಾರೆ.