ಕಳ್ಳತನಕ್ಕೆ ಬಂದು ಹಣ, ಬಂಗಾರ ದೋಚಿದ್ದಲ್ಲದೇ ಊಟ ಮಾಡಿ ಹೋದ ಕಳ್ಳರು!

Public TV
1 Min Read
Haveri Ranebennur

ಹಾವೇರಿ: ಮನೆಯೊಂದರಲ್ಲಿ ಕಳ್ಳತನಕ್ಕೆ (Theft) ಬಂದು ಚಿನ್ನಾಭರಣವನ್ನು ದೋಚಿದ್ದಲ್ಲದೇ ಅದೇ ಮನೆಯಲ್ಲಿ ಊಟವನ್ನೂ ಮಾಡಿ ಕಳ್ಳರು ಪರಾರಿಯಾಗಿರುವ ಘಟನೆ ಹಾವೇರಿ (Haveri) ಜಿಲ್ಲೆಯ ರಾಣೇಬೆನ್ನೂರು (Ranebennur) ತಾಲೂಕಿನ ಚೌಡಯ್ಯದಾನಪುರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಪರಸಪ್ಪ ಎರೆಸೀಮೆ ಅವರ ಮನೆಯಲ್ಲಿ 10 ಗ್ರಾಂ ಬೆಳ್ಳಿಯ ಆಭರಣ, 10 ಗ್ರಾಂ ಚಿನ್ನದ ಆಭರಣ ಜೊತೆಗೆ 50 ಸಾವಿರ ರೂ. ಹಣ ದೊಚಿ ಕಳ್ಳರು (Thieves) ಪರಾರಿಯಾಗಿದ್ದಾರೆ. ಮನೆಯ ಸದಸ್ಯರು ಕೆಲಸದ ನಿಮಿತ್ತ ಬೇರೆ ಊರಿಗೆ ಹೋಗಿದ್ದರು. ಈ ವೇಳೆ ಮನೆಯ ಬಾಗಿಲನ್ನು ಗುದ್ದಲಿಯಿಂದ ಒಡೆದು, ಮನೆಯೊಳಗೆ ನುಗ್ಗಿ ವಸ್ತುಗಳನ್ನೆಲ್ಲಾ ಚೆಲ್ಲಾಪಿಲ್ಲಿ ಮಾಡಿ, ಚಿನ್ನಾಭರಣವನ್ನು ಕದ್ದಿದ್ದಲ್ಲದೇ ಮನೆಯಲ್ಲಿ ತಯಾರಿಸಿಟ್ಟಿದ್ದ ಊಟವನ್ನು ಮಾಡಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: KPSC ಬೋರ್ಡ್ ಮುಂದೆ ನೂರಾರು ಪತ್ರಗಳನ್ನು ಚೆಲ್ಲಿ ಅಭ್ಯರ್ಥಿ ಹೈಡ್ರಾಮಾ

ಕಷ್ಟಪಟ್ಟು ದುಡಿದು ಮುಂದಿನ ಜೀವನಕ್ಕಾಗಿ ಇಟ್ಟುಕೊಂಡಿದ್ದ ಹಣ, ಒಡವೆಯನ್ನು ಖತರ್ನಾಕ್ ಕಳ್ಳರು ದೋಚಿಕೊಂಡು ಹೋಗಿದ್ದಾರೆ. ಕಳ್ಳರ ಚಲನವಲನಗಳು ಪಕ್ಕದ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ರಾಣೇಬೆನ್ನೂರು ಗ್ರಾಮೀಣ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಇದನ್ನೂ ಓದಿ: ಸಿಪಿವೈ ಬಾವ ನಾಪತ್ತೆ ಪ್ರಕರಣ – ಕಾರು ಪತ್ತೆ, ಕಿಡ್ನ್ಯಾಪ್ ಶಂಕೆಗೆ ಪುಷ್ಠಿ ನೀಡಿದ ರಕ್ತದ ಕಲೆ!

Share This Article