ಬೆಂಗಳೂರು: `ಥರ್ಡ್ ಕ್ಲಾಸ್’ ಚಿತ್ರದ ಶೂಟಿಂಗ್ ವೇಳೆ ಕಣ್ಣಿಗೆ ಮಣ್ಣು ಬಿದ್ದು ನಾಯಕ ನಟ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಜಗದೀಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ನಟರಾಗಿದ್ದು, ಇವರೊಂದಿಗೆ ಎಂಟು ಜನರ ಕಣ್ಣಿಗೂ ಗಾಯಗಳಾಗಿವೆ.
ನಡೆದಿದ್ದೇನು?: ಘಾಟಿ ಸುಬ್ರಹ್ಮಣ್ಯದಲ್ಲಿ ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಫೈಟಿಂಗ್ ವೇಳೆ ನಾಯಕ ನಟ ಕಣ್ಣಿಗೆ ಮಣ್ಣು ಬಿದ್ದಿದೆ. ಹೀಗಾಗಿ ಕಳೆದ ಮೂರು ದಿನಗಳಿಂದ ನಟ ಕಣ್ಣು ತೆರೆಯಲಾರದೆ ನೋವಿನಲ್ಲೇ ಒದ್ದಾಡುತ್ತಿದ್ದರು. ಇವರೊಂದಿಗೆ ಫೈಟ್ ನಲ್ಲಿದ್ದ 8 ಮಂದಿಯ ಕಣ್ಣಿಗೂ ಸ್ವಲ್ಪ ಮಟ್ಟಿನ ಗಾಯಗಳಾಗಿವೆ ಎಂದು ಹೇಳಲಾಗುತ್ತಿದೆ. ಜಗದೀಶ್ ಸದ್ಯ ನಗರದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಥರ್ಡ್ ಕ್ಲಾಸ್ ಸಿನಿಮಾಕ್ಕೆ ಅಶೋಕ್ ಆಕ್ಷನ್ ಕಟ್ ಹೇಳಿದ್ದು, ಚಿತ್ರಕ್ಕೆ ಮಾಜಿ ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪರಿಂದ ಕ್ಲಾಪ್ ಮಾಡಲಾಗಿತ್ತು.