Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಟುಂಬ ರಾಜಕಾರಣಕ್ಕೆ ಮಹತ್ವ ಸಿಗಲ್ಲ, ಕೆಲವೇ ದಿನಗಳಲ್ಲಿ ಬಂಗಾಳದಲ್ಲಿ ಅಧಿಕಾರಕ್ಕೆ- ಶಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕುಟುಂಬ ರಾಜಕಾರಣಕ್ಕೆ ಮಹತ್ವ ಸಿಗಲ್ಲ, ಕೆಲವೇ ದಿನಗಳಲ್ಲಿ ಬಂಗಾಳದಲ್ಲಿ ಅಧಿಕಾರಕ್ಕೆ- ಶಾ

Latest

ಕುಟುಂಬ ರಾಜಕಾರಣಕ್ಕೆ ಮಹತ್ವ ಸಿಗಲ್ಲ, ಕೆಲವೇ ದಿನಗಳಲ್ಲಿ ಬಂಗಾಳದಲ್ಲಿ ಅಧಿಕಾರಕ್ಕೆ- ಶಾ

Public TV
Last updated: May 24, 2019 10:38 pm
Public TV
Share
3 Min Read
Amit Shah Modi
SHARE

ನವದೆಹಲಿ: ಲೋಕಸಭಾ ಚುನಾವಣೆ ಇಂದು ಹೊರ ಬಿದ್ದಿದ್ದು, ಅನೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಶೂನ್ಯ ಸಂಪಾದನೆ ಮಾಡಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವ್ಯಂಗ್ಯವಾಡಿದ್ದಾರೆ.

ಪಕ್ಷದ ಕೇಂದ್ರ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಜನ ಪ್ರಿಯ ನಾಯಕರು. ವಿಜಯೋತ್ಸವಕ್ಕೆ ಕಾರಣವಾದ ಬಿಜೆಪಿಯ ಕೋಟ್ಯಂತರ ಕಾರ್ಯಕರ್ತರು ಹಾಗೂ ದೇಶದ ಜನರಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ. ಇದು ಪಕ್ಷದ ಕಾರ್ಯಕರ್ತರ ಪರಿಶ್ರಮದ ಪ್ರತಿಫಲವಾಗಿದೆ. ಅಷ್ಟೇ ಅಲ್ಲ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ತತ್ವದ ಜಯವಾಗಿದೆ ಎಂದು ಬಣ್ಣಿಸಿದರು.

ದೇಶದ ಜನರ ಬಡತನ ನಿವಾರಣೆಗೆ ಬಿಜೆಪಿ ನೇತೃತ್ವದ ಸರ್ಕಾರವು ಶ್ರಮಿಸಿದೆ. ಹೀಗಾಗಿ ಮತದಾರರು ನಮ್ಮನ್ನು ಮತ್ತೆ ಆಯ್ಕೆ ಮಾಡಿದ್ದಾರೆ. ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದು 5 ವರ್ಷ ಆಡಳಿತ ನಡೆಸಿ, ಮತ್ತೆ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದು ಇತಿಹಾಸ ಬರೆದಿದ್ದೇವೆ ಎಂದು ಹೇಳಿದರು.

ಮಹಾಮೈತ್ರಿ ಮೂಲಕ ನಮ್ಮನ್ನು ಸೋಲಿಸಲು ಪ್ರತಿಪಕ್ಷಗಳು ಒಂದಾಗಿದ್ದವು. ಆದರೆ ಈಗ ದೇಶದ ಎಲ್ಲ ರಾಜ್ಯದಲ್ಲಿಯೂ ಬಿಜೆಪಿಗೆ ಆಶೀರ್ವಾದ ಸಿಕ್ಕಿದೆ. ಉತ್ತರ ಪ್ರದೇಶ, ದೆಹಲಿ, ಚಂಡೀಗಢ, ಹರಿಯಾಣ, ಹಿಮಾಚಲ ಪ್ರದೇಶ, ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರಾಖಂಡ, ಮಹಾರಾಷ್ಟ್ರ, ಬಿಹಾರ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಶೇ.50ಕ್ಕೂ ಹೆಚ್ಚು ಮತಗಳನ್ನು ನಾವು ಪಡೆದಿದ್ದೇವೆ ಎಂದು ತಿಳಿಸಿದರು.

ದೇಶದಿಂದ ಕಾಂಗ್ರೆಸ್ ಕಿತ್ತೆಸೆಯಲು ಬಿಜೆಪಿ ಎಲ್ಲ ಕಡೆಯೂ ಪ್ರಯತ್ನಿಸಿ ಯಶಸ್ವಿಯಾಗಿದೆ. ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ದೆಹಲಿ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ, ಮಣಿಪುರ, ಮಿಜೋರಾಮ್, ಒಡಿಶಾ, ರಾಜಸ್ಥಾನ, ಸಿಕ್ಕಿಂ, ತ್ರಿಪುರಾ, ಉತ್ತರಾಖಂಡ, ಅಂಡಮಾನ್-ನಿಕೋಬಾರ್, ಚಂಡೀಗಢ, ದಾದ್ರಾ-ನಗರ್ ಹವೇಲಿ, ದೀಯು-ದಮನ್ ಹಾಗೂ ಲಕ್ಷ ದ್ವೀಪದಲ್ಲಿ ಕಾಂಗ್ರೆಸ್ ಬಿಗ್ ಜೀರೋ (ಸೊನ್ನೆ) ಸಿಕ್ಕಿದೆ. ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ಕಾಂಗ್ರೆಸ್ ತನ್ನ ಖಾತೆಯನ್ನು ಮುಚ್ಚಿಕೊಂಡಿದೆ ಎಂದು ವ್ಯಂಗ್ಯವಾಡಿದರು.

ಉತ್ತರ ಪ್ರದೇಶದಲ್ಲಿ ಬಿಜೆಪಿ ವಿರುದ್ಧ ಮೈತ್ರಿ ಮಾಡಿಕೊಂಡರು. ಆದರೆ ಜನರು ಅವರನ್ನು ಕೈಬಿಟ್ಟು, ಬಿಜೆಪಿಯನ್ನು ಬೆಂಬಲಿಸಿದರು. ಈ ಮೂಲಕ ದೇಶದಲ್ಲಿ ಕುಟುಂಬ ರಾಜಕಾರಣವನ್ನು ಕಿತ್ತು ಹಾಕಿ ಬಿಜೆಪಿಗೆ ಜಯ ಸಿಕ್ಕಿದೆ. ಇನ್ನು ಮುಂದೆ ದೇಶದಲ್ಲಿ ಕುಟುಂಬ ರಾಜಕಾರಣ ಮಾಡುವ ಪಕ್ಷಗಳಿಗೆ ಯಾವುದೇ ಮಹತ್ವ ಇರುವುದಿಲ್ಲ ಎಂದು ಗುಡುಗಿದರು.

ಎಕ್ಸಿಟ್ ಪೋಲ್ ಸಮೀಕ್ಷೆಗಳು ಸುಳ್ಳು ಎಂದು ವಿಪಕ್ಷ ನಾಯಕರು ಟೀಕೆ ಮಾಡಿದರು. ಅಷ್ಟೇ ಅಲ್ಲ ತಕ್ಷಣವೇ ದೆಹಲಿಯಲ್ಲಿ ಅಲೆದಾಡಿ ಮೈತ್ರಿ ಮಾತುಕತೆ ನಡೆಸಿದರು. ಕುಟುಂಬ ರಾಜಕಾರಣ ನಡೆಸುವ ಪಕ್ಷಗಳನ್ನು ಒಂದು ಕಡೆ ಸೇರಿಸಲು ಓಡಾಡಿದರು. ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಮಹಾಮೈತ್ರಿ ನಾಯಕರನ್ನು ಸೇರಿ ಸಲು ಭಾರೀ ಪರಿಶ್ರಮ ಪಟ್ಟರು. ಆದರೆ ರಾಜ್ಯದಲ್ಲಿಯೇ ಅಧಿಕಾರ ಕಳೆದುಕೊಂಡರು ಎಂದು ವ್ಯಂಗ್ಯವಾಡಿದರು.

ಲೋಕಸಭಾ ಚುನಾವಣೆ ಜೊತೆ ಜೊತೆಗೆ ವಿಧಾನಸಭಾ ಚುನಾವಣೆಗಳು ಕೂಡ ನಡೆದವು. ಇಂದು ಬಂದ ಫಲಿತಾಂಶದ ಪ್ರಕಾರ ಆಂಧ್ರಪ್ರದೇಶದಲ್ಲಿ ವೈಎಸ್‍ಆರ್ ಕಾಂಗ್ರೆಸ್ ಪಕ್ಷದ ಬಹುಮತ ಸಾಧಿಸಿದೆ. ಈ ಮೂಲಕ ಜಗನ್‍ಮೋಹನ್ ರೆಡ್ಡಿ ಆಂಧ್ರಪ್ರದೇಶವನ್ನು ಮುನ್ನಡೆಸಲಿದ್ದು, ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಒಡಿಶಾದಲ್ಲಿ ನವೀನ್ ಪಟ್ನಾಯಕ್ ಹಾಗೂ ಸಿಕ್ಕಿಂನಲ್ಲಿ ಪವನ್ ಕುಮಾರ್ ಜಾಮ್ಲಿಂಗ್ ಅವರು ಭರ್ಜರಿ ಜಯ ಸಾಧಿಸಿದ್ದಾರೆ. ಅವರಿಗೂ ಅಭಿನಂದನೆ ತಿಳಿಸುತ್ತೇನೆ. ಅರುಣಾಚಲ ಪ್ರದೇಶದಲ್ಲಿ ಬಿಜೆಪಿಗೆ ಮೊದಲ ಬಾರಿ ಸಂಪೂರ್ಣ ಬಹುಮತ ಸಿಕ್ಕಿದೆ ಎಂದು ಸಂತೋಷ ವ್ಯಕ್ತಪಡಿಸಿದರು.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದರು, ಪ್ರಚಾರಕ್ಕೆ ಅಡ್ಡಿ ಉಂಟುಮಾಡಿದರೂ ನಾವು 18 ಸ್ಥಾನ ಪಡೆದಿದ್ದೇವೆ. ಈ ಮೂಲಕ ಪಶ್ಚಿಮ ಬಂಗಾಳದಲ್ಲಿ ಸಂಪೂರ್ಣವಾಗಿ ಬಿಜೆಪಿ ಸರ್ಕಾರ ಬರುವುದಕ್ಕೆ ಕೆಲವೇ ದಿನಗಳು ಬಾಕಿ ಇವೆ ಎಂದು ಹೇಳುವ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಏರುತ್ತೇವೆ ಎಂದು ಭವಿಷ್ಯ ನುಡಿದರು.

TAGGED:Amit ShahbjpLok Sabha Electionspm narendra modiPublic TVಅಮಿತ್ ಶಾನರೇಂದ್ರ ಮೋದಿಪಬ್ಲಿಕ್ ಟಿವಿಫಲಿತಾಂಶಬಿಜೆಪಿಲೋಕದಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

NAMMA METRO 4
Bengaluru City

IPL ಪಂದ್ಯದ ದಿನ ತಡರಾತ್ರಿ 2ರವರೆಗೆ ಸಂಚಾರ ಅವಧಿ ವಿಸ್ತರಿಸಿದ ʻನಮ್ಮ ಮೆಟ್ರೋʼ

Public TV
By Public TV
31 minutes ago
Bengaluru Police
Bengaluru City

ಬೆಂಗಳೂರಿಂದ ತಿರುಪತಿಗೆ ಹೋರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು

Public TV
By Public TV
32 minutes ago
Udupi Fishing 2
Districts

ಮೀನುಗಾರಿಕೆಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ; ಇಂಧನ ಸಂಕಷ್ಟ, ಆಳ ಸಮುದ್ರ ಮೀನುಗಾರಿಕೆಗೆ ಆತಂಕ

Public TV
By Public TV
56 minutes ago
Petrol Bunk 4
Bengaluru City

ಬೆಂಗಳೂರಿನಲ್ಲಿ ಪೆಟ್ರೋಲ್ ಅಭಾವ ವದಂತಿ – ಬಾಟಲ್‌, ಕ್ಯಾನ್‌ ಹಿಡಿದು ಬಂಕ್‌ಗಳಿಗೆ ಮುಗಿಬಿದ್ದ ಜನ

Public TV
By Public TV
1 hour ago
Gangavathi Inscription
Districts

ಗಂಗಾವತಿಯಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ಶಿಲಾಶಾಸನ ಪತ್ತೆ

Public TV
By Public TV
2 hours ago
Donald Trump 2
Latest

ಆಕ್ರಮಿಸಿಕೊಳ್ತೇನೆ, ಇಲ್ಲವೇ ಸ್ವತಂತ್ರಗೊಳಿಸುತ್ತೇನೆ – ವೆನೆಜುವೆಲಾ, ಇರಾನ್‌ ಬಳಿಕ ಮತ್ತೊಂದು ದೇಶದ ಮೇಲೆ ಟ್ರಂಪ್‌ ಕಣ್ಣು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?