ಕಲಬುರಗಿ: ನನಗೂ ವಯಸ್ಸಾಗ್ತಿದೆ, ಇದೇ ನನ್ನ ಕೊನೆಯ ಚುನಾವಣೆ ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ.
ಸೇಡಂನಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “9 ಬಾರಿ ಶಾಸಕನಾಗಿ, ಎರಡು ಬಾರಿ ಸಂಸದನಾಗಿ, ಸತತ 11 ಬಾರಿ ಜನ ಆಯ್ಕೆ ಮಾಡಿದ್ದಾರೆ. ಈ ಬಾರಿಯೂ ಗೆದ್ದರೆ ಒಂದು ಡಜನ್ ಬಾರಿ ಗೆದ್ದು ದಾಖಲೆ ಮಾಡಿದಂತಾಗುತ್ತದೆ” ಎಂದು ಹೇಳಿದ್ದಾರೆ.
ಗುರುಮಿಠಕಲ್ ಕ್ಷೇತ್ರ ಬದಲಾವಣೆ ನಂತರವೂ ಜನ ನನ್ನ ಕೈ ಹಿಡಿದಿದ್ದಾರೆ ಎಂದು ಹೇಳಿದ್ದಾರೆ. ಸದ್ಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ್ ಖರ್ಗೆ ಅವರು ರಾಜಕೀಯ ನಿವೃತ್ತಿಯ ಬಗ್ಗೆ ಮಾತನಾಡಿದ್ದಾರೆ.
ಚುನಾವಣೆಯಲ್ಲಿ ಅನುಕಂಪದ ಆಧಾರದಲ್ಲಿ ಮತಗಳ ಸೆಳೆಯಲು ಖರ್ಗೆ ಅವರು ರಾಜಕೀಯ ನಿವೃತ್ತಿ ವಿಚಾರ ಮಾತನಾಡಿದ್ರಾ ಎನ್ನುವ ವಿಚಾರ ಈಗ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv