Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ದೇವರನ್ನು ಗೊಂಬೆ ಎನ್ನುವ ಕಾಂಗ್ರೆಸ್ ಪಕ್ಷದ ಅವನತಿಗೆ ಈ ಹೇಳಿಕೆಯೇ ಅಡಿಗಲ್ಲು: ಆರ್.ಅಶೋಕ್
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೇವರನ್ನು ಗೊಂಬೆ ಎನ್ನುವ ಕಾಂಗ್ರೆಸ್ ಪಕ್ಷದ ಅವನತಿಗೆ ಈ ಹೇಳಿಕೆಯೇ ಅಡಿಗಲ್ಲು: ಆರ್.ಅಶೋಕ್

Bengaluru City

ದೇವರನ್ನು ಗೊಂಬೆ ಎನ್ನುವ ಕಾಂಗ್ರೆಸ್ ಪಕ್ಷದ ಅವನತಿಗೆ ಈ ಹೇಳಿಕೆಯೇ ಅಡಿಗಲ್ಲು: ಆರ್.ಅಶೋಕ್

Public TV
Last updated: January 17, 2024 6:10 pm
Public TV
Share
3 Min Read
R.ASHOK
SHARE

ಬೆಂಗಳೂರು: ದೇವರನ್ನು ಆಟಿಕೆ ಎನ್ನುವ ಮೂಲಕ ಕಾಂಗ್ರೆಸ್ ಪಕ್ಷ ಬಾಲಿಶತನ ತೋರಿದೆ. ಮಾತಿನಲ್ಲಿ ಹಿಡಿತವಿಲ್ಲದೆ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದು ಕಾಂಗ್ರೆಸ್‌ನ (Congress) ಅವನತಿಗೆ ಅಡಿಗಲ್ಲಾಗಲಿದೆ. ಇದು ಮಾರಣಾಂತಿಕ ಕಲ್ಲಾಗಲಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಎಚ್ಚರಿಕೆ ನೀಡಿದ್ದಾರೆ.

ಸಚಿವ ಕೆ.ಎನ್.ರಾಜಣ್ಣ (KN Rajanna) ಹೇಳಿಕೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ನವರಿಗೆ ರಾಮ, ಸೀತೆ ಎಲ್ಲರೂ ಟೂರಿಂಗ್ ಟಾಕೀಸ್ ಬೊಂಬೆಗಳಂತೆಯೇ ಕಾಣುತ್ತಾರೆ. ಹಿಂದೆ ಇವರೇ ರಾಮನನ್ನು ಕಾಲ್ಪನಿಕ ವ್ಯಕ್ತಿ, ಜನ್ಮ ಪ್ರಮಾಣ ಪತ್ರ ಇಲ್ಲ ಎಂದಿದ್ದರು. ಗುಜರಾತ್‌ನ ಸೋಮನಾಥ ದೇವಾಲಯ ಪುನರುಜ್ಜೀವನಗೊಂಡಾಗ ಅದಕ್ಕೆ ಪ್ರಧಾನಿ ನೆಹರು ಹೋಗಲಿಲ್ಲ. ಮುಸ್ಲಿಮರನ್ನು ವೋಟ್ ಬ್ಯಾಂಕ್ ಮಾಡಿಕೊಂಡು, ಹಿಂದೂಗಳನ್ನು ಎರಡನೇ ದರ್ಜೆಯ ಪ್ರಜೆಗಳನ್ನಾಗಿಸುವ ಗುಣ ಕಾಂಗ್ರೆಸ್‌ನ ರಕ್ತದಲ್ಲೇ ಇದೆ. ವಕೀಲರಾಗಿರುವ ಸಿಎಂ ಸಿದ್ದರಾಮಯ್ಯ ಅವರೇ ಸುಪ್ರಿಂ ಕೋರ್ಟ್ ತೀರ್ಪಿಗೆ ಬೆಲೆ ಕೊಡುವುದಿಲ್ಲ ಎನ್ನುತ್ತಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ತೆಲಂಗಾಣದಲ್ಲಿ 12,400 ಕೋಟಿ ಹೂಡಿಕೆ: ಅದಾನಿ ಗ್ರೂಪ್‌ ಘೋಷಣೆ

KN Rajanna

ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿಮಾನ ನಿಲ್ದಾಣದ ಕಾರ್ಯಕ್ರಮದಲ್ಲಿ ಆರಾಮವಾಗಿ ಗೊರಕೆ ಹೊಡೆಯುತ್ತಿದ್ದರು. ಸಿದ್ದರಾಮಯ್ಯ ನಿದ್ರೆ ಮಾಡುವ ವ್ಯಂಗ್ಯಚಿತ್ರಗಳು ಹರಿದಾಡುತ್ತಿವೆ. ಆದರೆ ಪ್ರಧಾನಿ ಎಲ್ಲೂ ನಿದ್ರೆ ಮಾಡುವುದಿಲ್ಲ. ಮುಖ್ಯಮಂತ್ರಿ ಬರ ಪ್ರದೇಶಗಳಿಗೆ ಹೋಗಿ ಕೆಲಸ ಮಾಡಿಲ್ಲ. ಸಿಎಂ ಸಿದ್ದರಾಮಯ್ಯ ತಾವು ನಿದ್ರೆ ಮಾಡುವ ಚಿತ್ರವನ್ನು ಫ್ರೇಮ್ ಮಾಡಿಕೊಂಡು ಮನೆ ಮುಂದೆ ಹಾಕಿಕೊಳ್ಳಲಿ. ಇವರ ಹೆಸರೇ ನಿದ್ದೆರಾಮಯ್ಯ ಎಂದು ಬ್ರ‍್ಯಾಂಡ್ ಆಗಿದೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಮೂರ್ಖರಿಗೆ ಜನರು ಚಪ್ಪಾಳೆ ತಟ್ಟಬಾರದು- ಅನಂತ್ ಕುಮಾರ್ ವಿರುದ್ಧ ಸಿಎಂ ಕಿಡಿ

ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಮಣಿಸಬೇಕಿದೆ. ಕಳೆದ ಏಳು ತಿಂಗಳಲ್ಲಿ ಕೊಲೆ, ಸುಲಿಗೆ ಹೆಚ್ಚಿದ್ದು, ಅಪರಾಧಿಗಳಿಗೆ ಪ್ರೀತಿ ತೋರಿಸಲಾಗುತ್ತಿದೆ. ಡಿ.ಕೆ.ಶಿವಕುಮಾರ್ (DK Shivakumar) ಅವರೇ ಕುಕ್ಕರ್ ಬಾಂಬ್ ಸ್ಫೋಟ ಮಾಡಿದವರನ್ನು ಬ್ರದರ್ ಎಂದು ಹೇಳಿಕೊಳ್ಳುತ್ತಾರೆ. ಕೆಜಿ ಹಳ್ಳಿ, ಡಿಜೆ ಹಳ್ಳಿ ಪ್ರಕರಣ ವಾಪಸ್‌ನಂತಹ ಘಟನೆ ನಡೆಯುತ್ತಿದೆ. ಕಾಂಗ್ರೆಸ್‌ನ ಮೃದು ಧೋರಣೆಯಿಂದ ಅಪರಾಧಿಗಳು ಎದ್ದು ಕುಳಿತಿದ್ದಾರೆ. ಹಾನಗಲ್‌ನ ಅತ್ಯಾಚಾರ ಪ್ರಕರಣದಲ್ಲೂ ಕಠಿಣ ಕ್ರಮ ವಹಿಸಿಲ್ಲ. ಕಾನೂನು ಸುವ್ಯವಸ್ಥೆಯ ನಿರ್ವಹಣೆಯಲ್ಲಿ ಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಜ.18ರಂದು ಚಿಕ್ಕಬಳ್ಳಾಪುರದಲ್ಲಿ T20I ಲೀಗ್ – ಕಣದಲ್ಲಿ ಅಬ್ಬರಿಸಲಿದ್ದಾರೆ ಸಚಿನ್, ಯುವಿ, ಜಯಸೂರ್ಯ

Yathindra Siddaramaiah

ಒಂದು ಕಡೆ ಡಿ.ಕೆ.ಶಿವಕುಮಾರ್, ಮತ್ತೊಂದು ಕಡೆ ಜಿ.ಪರಮೇಶ್ವರ್, ಇನ್ನೊಂದೆಡೆ ಸತೀಶ್ ಜಾರಕಿಹೊಳಿಗೆ ಜೈ ಎನ್ನುವ ಗ್ಯಾಂಗ್ ಇದೆ. ಅಭಿವೃದ್ಧಿಯ ಕಾರ್ಯ ಇಲ್ಲದೆ ಜನರು ರೊಚ್ಚಿಗೆದ್ದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಮಗ ಶಾಸಕರೂ ಅಲ್ಲ. ಅವರು ತಂದೆಯ ಬಗ್ಗೆ ಕುರುಡು ಪ್ರೇಮ ತೋರಿಸಬೇಕಿಲ್ಲ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಹುಬ್ಬಳ್ಳಿ-ಪುಣೆ-ಹುಬ್ಬಳ್ಳಿ: ವಾರದಲ್ಲಿ 4 ಬಾರಿ ವಿಮಾನ ಸಂಚಾರ ಆರಂಭ – ಜೋಶಿ ಮಾಹಿತಿ

ಸರ್ಕಾರದ ಖಜಾನೆ ಖಾಲಿಯಾಗಿದ್ದು, ಎಲ್ಲಾ ಯೋಜನೆ ಮುಂದೂಡಲಾಗುತ್ತಿದೆ. ನೌಕರರ ವೇತನ ಹೆಚ್ಚಳ ಕೂಡ ಮಾಡಿಲ್ಲ. ಸರ್ಕಾರ ದಿವಾಳಿಯಾಗಿ ಜನರು ಇನ್ನಷ್ಟು ಕಷ್ಟ ಪಡಬೇಕಾಗುತ್ತದೆ. ಯುಪಿಎ ಸರ್ಕಾರವಿದ್ದಾಗ ಪರಿಹಾರ ಸಿಗಲು ಬಹಳ ತಡವಾಗಿದ್ದು, ಆಗ ಮಾತ್ರ ಕಾಂಗ್ರೆಸ್ ನಾಯಕರು ಸುಮ್ಮನಿದ್ದರು. ಈಗ ಕೇಂದ್ರದ ಮೇಲೆ ದೂರು ಹೇಳುತ್ತಿದ್ದಾರೆ. ಹಿಂದಿನ ಯುಪಿಎಗೆ ಹೋಲಿಸಿದರೆ ಮೋದಿ ಸರ್ಕಾರ ಶೇ.243 ರಷ್ಟು ಹೆಚ್ಚು ಪರಿಹಾರ ನೀಡಿದೆ ಎಂದರು. ಇದನ್ನೂ ಓದಿ: ಕೇರಳದ ಶ್ರೀಕೃಷ್ಣ ದೇವಾಲಯದಲ್ಲಿ ಪ್ರಧಾನಿ ಮೋದಿ ಪ್ರಾರ್ಥನೆ

ವರಿಷ್ಠರೊಂದಿಗೆ ಚರ್ಚೆ:
ರಾಜ್ಯದಲ್ಲಿ 28 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಕುರಿತು ನೀಲಿನಕ್ಷೆ ತಯಾರಾಗಿದೆ. ಹಿರಿಯ ನಾಯಕರು ಇದಕ್ಕೆ ಅಗತ್ಯ ಕ್ರಮಗಳನ್ನು ವಹಿಸಿದ್ದಾರೆ. ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ಈ ಕುರಿತು ಚರ್ಚಿಸಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಮುದ್ದಹನುಮೇಗೌಡ ಕಾಂಗ್ರೆಸ್ ‌ಸೇರ್ಪಡೆ ದಿನಾಂಕ ಹೈಕಮಾಂಡ್ ತೀರ್ಮಾನ ಮಾಡುತ್ತೆ: ಸಚಿವ ಪರಮೇಶ್ವರ್

 

TAGGED:Ayodhyabengalurucongressr ashokRam Mandirಅಯೋಧ್ಯಆರ್ ಅಶೋಕ್ಕಾಂಗ್ರೆಸ್ಬೆಂಗಳೂರುರಾಮ ಮಂದಿರ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Mamata Banerjee West Bengal Suvendu Adhikari
Latest

ಮಮತಾಗೆ 15,000ಕ್ಕೂ ಹೆಚ್ಚು ಮತಗಳಿಂದ ಹೀನಾಯ ಸೋಲು – ಸುವೆಂದು ಅಧಿಕಾರಿಗೆ ಜಯ

Public TV
ByPublic TV
3 minutes ago
Pinarayi Vijayan
Latest

ಕೇರಳ‌ ಸಿಎಂ ಪಿಣರಾಯಿ ವಿಜಯನ್ ರಾಜೀನಾಮೆ

Public TV
ByPublic TV
39 minutes ago
Ratna Debnath Mother Of RG Kar Victim
Latest

West Bengal: ಬಿಜೆಪಿಯಿಂದ ಕಣಕ್ಕಿಳಿದಿದ್ದ ಆರ್‌ಜಿ ಕರ್‌ ಅತ್ಯಾಚಾರ ಸಂತ್ರಸ್ತೆ ತಾಯಿಗೆ ಜಯ

Public TV
ByPublic TV
46 minutes ago
Modi 1
Latest

ಸಂತ್ತಿನಲ್ಲಿ ಮೀಸಲಾತಿ ವಿರೋಧಿಸಿದ ವಿಪಕ್ಷಗಳನ್ನ ಮಹಿಳೆಯರು ಚುನಾವಣೆಯಲ್ಲಿ ಶಿಕ್ಷಿಸಿದ್ದಾರೆ: ಮೋದಿ ಸಿಡಿಮಿಡಿ

Public TV
ByPublic TV
53 minutes ago
Vijay Rahul Gandhi
Latest

ತಮಿಳುನಾಡಿನಲ್ಲಿ ಟಿವಿಕೆ ಗೆಲುವು – ವಿಜಯ್‌ಗೆ ಶುಭಹಾರೈಸಿದ ರಾಹುಲ್ ಗಾಂಧಿ

Public TV
ByPublic TV
1 hour ago
ಸಾಂದರ್ಭಿಕ ಚಿತ್ರ
Latest

ಬಂಗಾಳದಲ್ಲಿ ಕೇಸರಿ ಸುನಾಮಿ – ಮಮತಾ ಆಡಳಿತಕ್ಕೆ ಅಂತ್ಯ ಹಾಡಲು ಆರ್‌ಎಸ್‌ಎಸ್ ‘ಸೈಲೆಂಟ್ ಆಪರೇಷನ್’ ಯಶಸ್ವಿ!

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?