ತಿರುವನಂಪುರಂ: ತೊಡುಪುಳ ಠಾಣೆಯಲ್ಲಿ ಪೊಲೀಸರ ವಶದಲ್ಲಿದ್ದ ಆರೋಪಿಯೊಬ್ಬ ಲಾಕಪ್ನಿಂದ ತಪ್ಪಿಸಿಕೊಂಡು ಹೋಗುವ ವೇಳೆ ಪಕ್ಕದ ನದಿಗೆ ಹಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಶಫೀ(35) ಮೃತ ದುರ್ದೈವಿಯಾಗಿದ್ದಾನೆ. ಪೊಲೀಸ್ ಠಾಣೆಯ ಪಕ್ಕದಲ್ಲಿ ತೊಡುಪುಳ ನದಿ ಹರಿಯುತ್ತದೆ ಎಂದು ಪೊಲೀಸರು ಹೇಳಿದ್ದಾರೆ.
ಲಾಕ್ಅಪ್ ಅನ್ನು ಸರಿಯಾಗಿ ಲಾಕ್ ಮಾಡಿರಲಿಲ್ಲ. ಹೀಗಾಗಿ ಆರೋಪಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ. ನದಿಗೆ ಹಾರಿದ್ದ ಶಫಿಯನ್ನು ಸ್ಥಳೀಯರೊಂದಿಗೆ ಸೇರಿ ಪೊಲೀಸರು ದಡದ ಮೂಲಕ ಅಟ್ಟಿಸಿಕೊಂಡು ಹೋಗಿದ್ದರು. ಈ ವೇಳೆ ಸುಮಾರು ಒಂದು ಕಿಲೋಮೀಟರ್ ಈಜಿದನು. ಅಷ್ಟರಲ್ಲಿ ಅಲ್ಲಿಗೆ ಅಗ್ನಿಶಾಮಕ ದಳವೂ ಬಂದಿತ್ತು. ನಾವೆಲ್ಲರೂ ಅವನನ್ನು ದಡಕ್ಕೆ ಬರುವಂತೆ ಮನವಿ ಮಾಡಿದ್ದೇವು. ಆದರೆ ಅವನು ನಿರಾಕರಿಸಿದನು. ಸ್ವಲ್ಪ ಸಮಯದ ನಂತ ನೀರಿನಲ್ಲಿ ಮುಳುಗಿದನು ಎಂದು ಪೊಲೀಸರು ಹೇಳಿದರು. ಇದನ್ನೂ ಓದಿ: ಓಮಿಕ್ರಾನ್ ಬಗ್ಗೆ ಆತಂಕ ಬೇಡ- ಸೋಂಕಿತನ ಅಭಯ
ಶಫಿ ವಿರುದ್ಧ ಸುಮಾರು 18 ಅಥವಾ 19 ಪ್ರಕರಣಗಳು ದಾಖಲಾಗಿದ್ದು, ಹಲ್ಲೆ ಪ್ರಕರಣದಲ್ಲಿ ಆತನನ್ನು ಬಂಧಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಐ ಡೋಂಟ್ ಕೇರ್, ಐ ಡೋಂಟ್ ಲೈಕ್ – ಲಸಿಕೆ ಬೇಡವೆಂದು ಹಠ ಹಿಡಿದ ವೃದ್ಧ