ಬೀದರ್: ವನ್ಯಜೀವಿಗಳ ಹಲ್ಲು, ಉಗುರು, ಅಂಗಾಂಗಗಳು, ಚರ್ಮ ಹಾಗೂ ಕೊಂಬುಗಳನ್ನು ಇಟ್ಟುಕೊಂಡವರು 2 ರಿಂದ 3 ತಿಂಗಲ್ಲಿ ವಾಪಸ್ ಮಾಡಬೇಕು ಎಂಬ ತೀರ್ಮಾನ ಮಾಡಿದ್ದೇವೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwara Khandre) ಹೇಳಿಕೆ ನೀಡಿದ್ದಾರೆ.
ಹಲವು ವರ್ಷಗಳಿಂದ ವನ್ಯಜೀವಿಗಳ (Wild Animal) ಉತ್ಪನ್ನಗಳನ್ನಿಟ್ಟುಕೊಂಡವರಿಗೆ ಬೀದರ್ನಲ್ಲಿ ಅರಣ್ಯ ಸಚಿವರು ಡೆಡ್ಲೈನ್ ನೀಡಿದ್ದಾರೆ. ಈಗಾಗಲೇ ಎಲ್ಲಾ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ಮಾಡಿದ್ದು ಡೆಡ್ಲೈನ್ ಬಗ್ಗೆ ಕರಡು ಪ್ರತಿ ರೆಡಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಜನರಿಗೆ ಈ ಬಗ್ಗೆ ಅರಿವು ಇಲ್ಲ. ಹೀಗಾಗಿ ಅವುಗಳನ್ನು ತಮ್ಮಲ್ಲಿಯೇ ಇರಿಸಿಕೊಂಡಿದ್ದು, ಅವುಗಳನ್ನು ಅರಣ್ಯ ಇಲಾಖೆಗೆ ವಾಪಸ್ ಕೊಡಲು ಒಂದು ಅವಕಾಶ ನೀಡುತ್ತಿದ್ದೇವೆ. ಸಿಎಂ ಜೊತೆ ಚರ್ಚೆ ಮಾಡಿ ತಿರ್ಮಾನ ಮಾಡಿದ್ದು, ನವೆಂಬರ್ 9ಕ್ಕೆ ಸಚಿವ ಸಂಪುಟದ ಸಭೆಯಲ್ಲಿ ಮಂಡನೆ ಮಾಡಿ ಜಾರಿಗೆ ತರುತ್ತೇವೆ ಎಂದರು. ಇದನ್ನೂ ಓದಿ: ದರ್ಶನ್ ವಿರುದ್ಧ ದೂರು ದಾಖಲಿಸಿದ್ದ ಮಹಿಳೆಗೆ ಪೊಲೀಸರಿಂದ ನೋಟಿಸ್
ಕಳ್ಳಬೇಟೆ ಮಾಡೋದು ಅಪರಾಧವಿದೆ. ಅದನ್ನು ನಮ್ಮ ಇಲಾಖೆ ತಡೆಯುತ್ತದೆ ಎಂದು ಬೀದರ್ನಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ವನ್ಯಜೀವಿಗಳ ಉತ್ಪನ್ನ ಬಳಸುತ್ತಿರುವವರಿಗೆ ಶಾಕ್ ನೀಡಿದ್ದಾರೆ. ಇದನ್ನೂ ಓದಿ: ಡಿಕೆಶಿ ನಿಷ್ಠಾವಂತರು, ಸಿಎಂ ಆಗಲು ಅರ್ಹರಿದ್ದಾರೆ – ಸಚಿವ ಕೆ.ಎನ್ ರಾಜಣ್ಣ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]