Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 5 ಸ್ಟಾರ್‌ ಹೋಟೆಲ್‌ಗಳಲ್ಲೇ ಇರುವವರು ಜಾತಿ ಆಧಾರದಲ್ಲಿ ಬಡವರನ್ನ ಒಡೆಯುತ್ತಿದ್ದಾರೆ: ರಾಗಾಗೆ ಮೋದಿ ಚಾಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 5 ಸ್ಟಾರ್‌ ಹೋಟೆಲ್‌ಗಳಲ್ಲೇ ಇರುವವರು ಜಾತಿ ಆಧಾರದಲ್ಲಿ ಬಡವರನ್ನ ಒಡೆಯುತ್ತಿದ್ದಾರೆ: ರಾಗಾಗೆ ಮೋದಿ ಚಾಟಿ

Latest

5 ಸ್ಟಾರ್‌ ಹೋಟೆಲ್‌ಗಳಲ್ಲೇ ಇರುವವರು ಜಾತಿ ಆಧಾರದಲ್ಲಿ ಬಡವರನ್ನ ಒಡೆಯುತ್ತಿದ್ದಾರೆ: ರಾಗಾಗೆ ಮೋದಿ ಚಾಟಿ

Public TV
Last updated: October 8, 2024 11:11 pm
Public TV
Share
3 Min Read
NARENDRA MODI RAHUL GANDHI
SHARE

– ಭಾರತದ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆದಿದೆ
– ಬಿಜೆಪಿ ಬಡವರ ಸೇವೆಗೆ ಬದ್ಧ

ನವದೆಹಲಿ: ಹುಟ್ಟುತ್ತಲೇ ಬೆಳ್ಳಿ ಸ್ಪೂನ್‌ ಹಿಡಿದವರು, ಪಂಚತಾರಾ ಹೋಟೆಲ್‌ಗಳಲ್ಲೇ ಇರುವವರು ಜಾತಿ ಆಧಾರದಲ್ಲಿ ಬಡಜನರನ್ನು ಒಡೆಯುತ್ತಿದ್ದಾರೆ ಎಂದು ಪರೋಕ್ಷವಾಗಿ ರಾಹುಲ್‌ ಗಾಂಧಿ (Rahul Gandhi) ವಿರುದ್ಧ ಪ್ರಧಾನಿ ಮೋದಿ (Narendra Modi) ವಾಗ್ದಾಳಿ ನಡೆಸಿದ್ದಾರೆ.

ದೆಹಲಿಯಲ್ಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ವಿಜಯೋತ್ಸವದ ವೇಳೆ ಮಾತನಾಡಿದ ಮೋದಿ, ಚುನಾವಣೋತ್ತರ ಸಮೀಕ್ಷೆಗಳು ಹರಿಯಾಣದಲ್ಲಿ ಕಾಂಗ್ರೆಸ್‌ ಬಹುಮತ ಪಡೆಯಲಿದೆ ಎಂದು ಭವಿಷ್ಯ ನುಡಿದಿದ್ದವು. ಆದರೆ, ಮತದಾರರು ಕಾಂಗ್ರೆಸ್‌ಗೆ ‘ನೋ ಎಂಟ್ರಿ’ ಬೋರ್ಡ್‌ ತೋರಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ಸತತ 3ನೇ ಬಾರಿಗೆ ಅಧಿಕಾರ ನೀಡಿ ಹರಿಯಾಣ ಇತಿಹಾಸ ಬರೆದಿದೆ: ಮೋದಿ ಸೆಲ್ಯೂಟ್‌

narendra modi 1

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಅಪರೂಪ. 13 ವರ್ಷಗಳ ಹಿಂದೆ ಅಸ್ಸಾಂನಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದಿತು. 60 ವರ್ಷಗಳಿಂದ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರದ ಕೆಲವು ರಾಜ್ಯಗಳಿವೆ ಎಂದು ಮೋದಿ ಕುಟುಕಿದ್ದಾರೆ.

ಹುಟ್ಟುತ್ತಲೇ ಬೆಳ್ಳಿ ಚಮಚ ಹಿಡಿದು, ಪಂಚತಾರಾ ಹೋಟೆಲ್‌ಗಳಲ್ಲಿ ಜೀವನ ನಡೆಸುತ್ತಿರುವವರು ಬಡವರು ಜಾತಿ ವಿಚಾರದಲ್ಲಿ ತಮ್ಮ ತಮ್ಮಲ್ಲೇ ಜಗಳ ಮಾಡಿಕೊಳ್ಳಬೇಕೆಂದು ಬಯಸುತ್ತಾರೆ. ನಮ್ಮ ದಲಿತ ಸಮುದಾಯ ಇದನ್ನು ಮರೆಯಬಾರದು ಎಂದು ಪ್ರಧಾನಿ ಎಚ್ಚರಿಸಿದ್ದಾರೆ. ಇದನ್ನೂ ಓದಿ: ಹರಿಯಾಣ ಚುನಾವಣೆ ಫಲಿತಾಂಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಕಾಂಗ್ರೆಸ್‌

modi and bjp senior leaders

ದಲಿತ ಓಬಿಸಿ ಮೀಸಲಾತಿ ಕಸಿದು ತನ್ನ ವೋಟ್‌ಬ್ಯಾಂಕ್‌ಗೆ ನೀಡಲು ಸಂಚು ಮಾಡಿತ್ತು. ಹರಿಯಾಣದಲ್ಲೂ ಇದನ್ನೇ ಮಾಡಲು ಹೊರಟಿದ್ದರು. ಕಾಂಗ್ರೆಸ್ ಅರಾಜಕತೆ ಸೃಷ್ಟಿಸಿ ದೇಶವನ್ನು ಬಲಹೀನಗೊಳಿಸುತ್ತದೆ. ನಮ್ಮ ಸೇನೆಯ ಬಗ್ಗೆಯೂ ಅಪಪ್ರಚಾರ ಮಾಡಿತು. ನಮ್ಮ ಯುವಕರೂ ಇದಕ್ಕೆ ಸರಿಯಾದ ಉತ್ತರ ನೀಡಿದ್ದಾರೆ. ದೇಶಭಕ್ತರನ್ನು ಒಡೆಯುವ ಕಾಂಗ್ರೆಸ್ ಪ್ರಯತ್ನವನ್ನು ಹರಿಯಾಣ ಜನರು ವಿಫಲಗೊಳಿಸಿದ್ದಾರೆ. ಭಾರತದ ವಿರುದ್ಧ ಅಂತಾರಾಷ್ಟ್ರೀಯ ಷಡ್ಯಂತ್ರ ನಡೆದಿದೆ. ಕಾಂಗ್ರೆಸ್ ಸೇರಿದಂತೆ ಅದರ ಇತರೆ ಪಕ್ಷಗಳು ಇದರಲ್ಲಿ ಶಾಮೀಲಾಗಿವೆ. ನಾನು ಇದನ್ನು ಬಹಳಷ್ಟು ಜವಬ್ದಾರಿಯಿಂದ ಹೇಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ನಾವು ಇಂತಹ ಕುತಂತ್ರ ಸಫಲವಾಗಲು ಬಿಟ್ಟಿಲ್ಲ. ಕಾಂಗ್ರೆಸ್ ಈಗ ಪರ ಜೀವಿ ಪಕ್ಷವಾಗಿದೆ. ಹರಿಯಾಣದಲ್ಲಿ ಒಂದೇಯಾಗಿತ್ತು, ಅದಕ್ಕೆ ಹೀನಾಯ ಸೋಲಾಯಿತು. ಜಮ್ಮು ಕಾಶ್ಮೀರದಲ್ಲಿ ಎನ್‌ಸಿ ಜೊತೆಗೆ ಮೈತ್ರಿ ಮಾಡಿಕೊಂಡಿದೆ. ಕಾಂಗ್ರೆಸ್‌ನಿಂದ ನಷ್ಟವಾಗಿದೆ ಎಂದು ಈ ಹಿಂದೆ ಎನ್‌ಸಿ ಹೇಳಿತ್ತು. ಈಗ ಕಾಶ್ಮೀರದಲ್ಲಿ ಅದೇ ಆಗಿದೆ. ಯಾರು ಕಾಂಗ್ರೆಸ್ ಮೇಲೆ ಭರವಸೆ ಇಟ್ಟಿದ್ದರೋ, ಅವರ ದೋಣಿಯೇ ಮುಳುಗಿದೆ. ಬಿಜೆಪಿ ಸರ್ಕಾರ ಎರಡು ರಾಜ್ಯಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡಲಿದೆ. ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ರೋಡ್ ಮ್ಯಾಪ್ ಸಿದ್ಧಪಡಿಸಿದೆ. ಮಹಿಳೆಯರ ಸಶಕ್ತಿಕರಣಕ್ಕಾಗಿ ಬಿಜೆಪಿ ಫೋಕಸ್ ಮಾಡುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Jammu Kashmir Results | ಚುನಾವಣೆಯಲ್ಲಿ ಸೋತರೂ ಮತಗಳಿಕೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ

ದೇಶವೇ ಮೊದಲ ಎನ್ನುವ ಸಂಕಲ್ಪ ಬಿಜೆಪಿ ಹೊಂದಿದೆ. ಬಿಜೆಪಿ ಬಡವರ ಸೇವೆಗೆ ಬದ್ಧವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಮೇಲೆ ಕಳೆದ ಹತ್ತು ವರ್ಷದಲ್ಲಿ ಭ್ರಷ್ಟಾಚಾರ ಒಂದೇ ಒಂದು ಕಳಂಕ ಇಲ್ಲ. ನಾವು ಸಮರ್ಪಣ ಭಾವದಿಂದ ಕೆಲಸ ಮಾಡಿದ್ದೇವೆ. ನಾನು ಸಿಎಂ ಮನೋಹರ ಲಾಲ್ ಕಟ್ಟರ್ ಮತ್ತು ಸೈನಿಗೆ ಶ್ಲಾಘಿಸುತ್ತೇನೆ. ನಮ್ಮ ನೀತಿ ನಿಯತ್ತಿಗೆ ಬೆಂಬಲ ಸಿಕ್ಕಾಗ, ಕೆಲಸ ಮಾಡಲು ದ್ವಿಗುಣ ಶಕ್ತಿ ಬರುತ್ತದೆ. ಜಮ್ಮು ಕಾಶ್ಮೀರ ಅಭಿವೃದ್ಧಿಯಾಗುತ್ತದೆ, ಭಾರತ ಅಭಿವೃದ್ಧಿಯಾಗುತ್ತದೆ. ನಮ್ಮ ಎಲ್ಲ ಹೋರಾಟದ ಹಿಂದೆ ಕಾರ್ಯಕರ್ತರ ಶ್ರಮವಿದೆ. ಹೆಜ್ಜೆಗೆ ಹೆಜ್ಜೆ ಹಾಕಿ ಭುಜಕ್ಕೆ ಭುಜ ಕೊಟ್ಟು ನಡೆಯುವ ನಮ್ಮ ಕಾರ್ಯಕರ್ತರು ಯಾವುದಕ್ಕೂ ಬಗ್ಗುವುದಿಲ್ಲ ಎಂದು ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸಿದ್ದಾರೆ.

TAGGED:Haryanajammu kashmirnarendra modiPM ModiRahul Gandhiನರೇಂದ್ರ ಮೋದಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
46 minutes ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
48 minutes ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
1 hour ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
1 hour ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?