Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಸ್ರೇಲ್‌ ಯುದ್ಧಕ್ಕೆ ಬೆಚ್ಚಿದ ಜನ – 2.20 ಲಕ್ಷ ಮಂದಿ ಲೆಬನಾನ್‌ನಿಂದ ಸಿರಿಯಾಕ್ಕೆ ಪಲಾಯನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಸ್ರೇಲ್‌ ಯುದ್ಧಕ್ಕೆ ಬೆಚ್ಚಿದ ಜನ – 2.20 ಲಕ್ಷ ಮಂದಿ ಲೆಬನಾನ್‌ನಿಂದ ಸಿರಿಯಾಕ್ಕೆ ಪಲಾಯನ

Latest

ಇಸ್ರೇಲ್‌ ಯುದ್ಧಕ್ಕೆ ಬೆಚ್ಚಿದ ಜನ – 2.20 ಲಕ್ಷ ಮಂದಿ ಲೆಬನಾನ್‌ನಿಂದ ಸಿರಿಯಾಕ್ಕೆ ಪಲಾಯನ

Public TV
Last updated: October 9, 2024 10:16 am
Public TV
Share
2 Min Read
Lebanon
SHARE

ಬೈರೂತ್‌: ಇಸ್ರೇಲ್‌ ದಿನದಿಂದ ದಿನಕ್ಕೆ ಯುದ್ಧದ ತೀವ್ರತೆಯನ್ನು ಹೆಚ್ಚಿಸುತ್ತಿರುವ ಹಿನ್ನೆಲೆಯಲ್ಲಿ ಲೆಬನಾನ್‌ ಜನ ಸಂಕಷ್ಟಕ್ಕೀಡಾಗಿ ದೇಶ ತೊರೆದಿದ್ದಾರೆ. ಇಸ್ರೇಲ್‌ ಜೊತೆಗಿನ ಸಂಘರ್ಷದಿಂದಾಗಿ ಲೆಬನಾನ್‌ನ 12 ಲಕ್ಷ ಮಂದಿ ಸಂಕಷ್ಟಕ್ಕೀಡಾಗಿದ್ದಾರೆ. ಇದರಿಂದಾಗಿ ಸುಮಾರು 2.20 ಲಕ್ಷ ಮಂದಿ ಲೆಬನಾನ್‌ನಿಂದ ಸಿರಿಯಾಕ್ಕೆ ವಲಸೆ (Civilians Migrate) ಹೋಗಿದ್ದಾರೆ ಎಂದು ವರದಿಯಾಗಿದೆ.

ಇತ್ತೀಚಿನ ದಿನಗಳಲ್ಲಿ ಇಸ್ರೇಲ್‌ನ ಯುದ್ಧ ವಿಮಾನಗಳು (Israeli Fighter Jets) ಲೆಬನಾನ್‌ನ ಬೆಕಾ ಪ್ರದೇಶ ಮತ್ತು ಬೈರೂತ್‌ನಲ್ಲಿ ವ್ಯಾಪಕವಾದ ವೈಮಾನಿಕ ದಾಳಿಗಳನ್ನು ನಡೆಸಿದೆ. ಮೂಲಸೌಕರ್ಯ ತಾಣಗಳು, ಲಾಂಚರ್‌ಗಳು, ಕಮಾಂಡ್ & ಕಂಟ್ರೋಲ್ ಸೆಂಟರ್‌ಗಳು ಹಾಗೂ ಶಸ್ತ್ರಾಸ್ತ್ರಗಳ ಸಂಗ್ರಹಣಾ ಸೌಲಭ್ಯ ಕೇಂದ್ರಗಳನ್ನು ಗುರಿಯಾಗಿಸಿ ದಾಳಿ ನಡೆಸಿವೆ. ಅಲ್ಲದೇ ಮೂರು ದಿನಗಳ ಹಿಂದೆಯಷ್ಟೇ ಕೇವಲ 1 ಗಂಟೆ ಅವಧಿಯಲ್ಲಿ 120ಕ್ಕೂ ಹೆಚ್ಚು ಹಿಜ್ಬುಲ್ಲಾ (Hezbollah) ಉಗ್ರ ನೆಲೆಗಳನ್ನು ಧ್ವಂಸ ಮಾಡಿದೆ. ಅಲ್ಲದೇ ಸದ್ಯಕ್ಕೆ ಕದನ ವಿರಾಮ ಘೋಷಣೆಯಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಇದರಿಂದ ಭಯಭೀತರಾಗಿರುವ 2.20 ಲಕ್ಷ ಮಂದಿ ಸಿರಿಯಾಕ್ಕೆ ಪಲಾಯನ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.

Israel 1

ಯುದ್ಧದಿಂದ ಹಿಂದೆ ಸರಿಯುವಂತೆ ಲೆಬನಾನ್‌ಗೆ ಎಚ್ಚರಿಕೆ:
ದಕ್ಷಿಣ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ನಡೆಸಿದ ಕೆಲ ಗಂಟೆಗಳ ನಂತರ ನೆತನ್ಯಾಹು (Benjamin Netanyahu) ವೀಡಿಯೋವೊಂದರಲ್ಲಿ ಮಾತನಾಡಿದ್ದಾರೆ. ಒಂದು ಕಾಲದಲ್ಲಿ ಪ್ರಾಕೃತಿಕ ಸೌಂದರ್ಯ, ಸಹಿಷ್ಣುತೆಗೆ ಹೆಸರುವಾಸಿಯಾಗಿದ್ದ ಮಧ್ಯಪ್ರಾಚ್ಯ ಈಗ ಹಿಜ್ಬುಲ್ಲಾ ಮದ್ದು ಗುಂಡುಗಳನ್ನು ಸಂಗ್ರಹಿಸಿದ್ದು, ಇರಾನಿನ ಮಿಲಿಟರಿ ನೆಲೆಯಾಗಿ ಮಾರ್ಪಟ್ಟಿದೆ. ಹಾಗಾಗಿ ಕೂಡಲೇ ನಿಮ್ಮ ದೇಶವನ್ನು ಕೂಡಲೇ ಹಿಂತೆಗೆದುಕೊಳ್ಳಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ಈಗಲೂ ಸಮಯವಿದೆ ಹಿಂದೆ ಸರಿದುಬಿಡಿ – ಲೆಬನಾನ್‌ಗೆ ಇಸ್ರೇಲ್‌ ಪ್ರಧಾನಿ ಎಚ್ಚರಿಕೆ

Israeli Airstrike On Mosque In Gaza Kills 26

ಇದು ಲೆಬನಾನ್ ಜನತೆಗೆ ನಮ್ಮ ಸಂದೇಶ. ನಿಮ್ಮ ದೇಶವನ್ನು ಮಧ್ಯಪ್ರಾಚ್ಯದ ಮುತ್ತು ಎಂದು ಕರೆಯುತ್ತಿದ್ದದ್ದು ನೆನಪಿದೆಯಾ? ಈಗ ಲೆಬನಾನ್‌ಗೆ ಏನಾಯಿತು? ನಿರಂಕುಶಾಧಿಕಾರಿಗಳು ಮತ್ತು ಭಯೋತ್ಪಾದಕರ ಗುಂಪು ಅದನ್ನು ನಾಶಪಡಿಸಿದರು. ಒಂದು ಕಾಲದಲ್ಲಿ ಲೆಬನಾನ್ ಸಹನೆ, ಸೌಂದರ್ಯಕ್ಕೆ ಹೆಸರುವಾಸಿಯಾಗಿತ್ತು. ಇಂದು ಅದು ಅವ್ಯವಸ್ಥೆಯ ಸ್ಥಳವಾಗಿದೆ, ಯುದ್ಧದ ಕೇಂದ್ರವಾಗಿದೆ ಎಂದು ಹೇಳಿದ್ದಾರೆ.

Israel

ನಾವು ಗಾಜಾದಲ್ಲಿ ನೋಡುವಂತೆ ವಿನಾಶ ಮತ್ತು ದುಃಖಕ್ಕೆ ಕಾರಣವಾಗುವ ಸುದೀರ್ಘ ಯುದ್ಧದ ಪ್ರಪಾತಕ್ಕೆ ಬೀಳುವ ಮೊದಲು ಎಚ್ಚೆತ್ತುಕೊಳ್ಳಬೇಕು. ಈಗಲೂ ಲೆಬನಾನ್‌ ತಮ್ಮ ರಾಷ್ಟ್ರವನ್ನು ಉಳಿಸಿಕೊಳ್ಳಬಹುದು. ನೀವು ನಿಮ್ಮ ಹಿಂತಿರುಗಿದರೆ, ಯುದ್ಧವನ್ನು ನಿಲ್ಲಿಸಿದ್ರೆ, ಶಾಂತಿ ಸಮೃದ್ಧ ಹಾದಿಗೆ ಮರಳಬಹುದು. ನೀವು ಮಾಡದಿದ್ದರೆ, ಹಿಜ್ಬುಲ್ಲಾ ಮಂದುವರಿಯುತ್ತದೆ. ನಿಮ್ಮ ನೇತೃತ್ವ ಖರ್ಚು ವೆಚ್ಚದಲ್ಲಿ ಇಸ್ರೇಲ್‌ ವಿರುದ್ಧ ಹೋರಾಡಲು ಪ್ರಯತ್ನಿಸಿ, ಲೆಬನಾನ್‌ ಅನ್ನು ಯುದ್ಧಕ್ಕೆ ಎಳೆದು ತರುತ್ತಾರೆ. ಆದ್ದರಿಂದ ಈಗಲೇ ಎಚ್ಚೆತ್ತುಕೊಳ್ಳಿ ಎಂದು ಖಡಕ್ಕಾಗಿ ಹೇಳಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ ಕೆಣಕಿ ತಪ್ಪು ಮಾಡಿತೇ ಇರಾನ್‌? – ಉಭಯ ರಾಷ್ಟ್ರಗಳ ಸೇನಾ ಸಾಮರ್ಥ್ಯ ನೋಡಿದ್ರೆ ಮೈ ನಡುಗುತ್ತೆ!

ಇಸ್ರೇಲ್ ಯುದ್ಧವನ್ನು ಕೊನೆಗಾಣಿಸಲು ನಿರ್ಧರಿಸಿದೆ. ನಮ್ಮ ಜನರನ್ನು ಸುರಕ್ಷಿತವಾಗಿ ಅವರ ಮನೆಗಳಿಗೆ ಹಿಂದಿರುಗಿಸಲು ಅಗತ್ಯವಿರುವ ಎಲ್ಲವನ್ನೂ ಮಾಡಲು ನಾವು ನಿರ್ಧರಿಸಿದ್ದೇವೆ. ಇಸ್ರೇಲ್‌ಗೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕಿದೆ. ಇಸ್ರೇಲ್‌ಗೆ ಗೆಲ್ಲುವ ಛಲವೂ ಇದೆ, ಗೆಲ್ಲುತ್ತದೆ ಎಂದಿರುವ ಅವರು, ಹಿಜ್ಬುಲ್ಲಾವನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವ ಪ್ರತಿಜ್ಞೆ ಮಾಡಿದ್ದಾರೆ.

TAGGED:Benjamin NetanyahuCivilians MigrateHezbollahIsraeli strikesLebanonSyriaಇಸ್ರೇಲ್‌ ಸ್ಟ್ರೈಕ್‌ಲೆಬನಾನ್ಸಿರಿಯಾ
Share This Article
Facebook Whatsapp Whatsapp Telegram

Cinema news

Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories

You Might Also Like

Mamata Banerjee SIR ECI
Latest

ಬಂಗ ಭವನದಲ್ಲಿ ಎಸ್‌ಐಆರ್ ಸಂತ್ರಸ್ತ ಕುಟುಂಬಗಳ ಮೇಲೆ ದೌರ್ಜನ್ಯ: ಮಮತಾ ಬ್ಯಾನರ್ಜಿ

Public TV
By Public TV
52 seconds ago
Haveri Farmers
Districts

ಬರೋಬ್ಬರಿ 4,685 ಹೆಕ್ಟೇರ್‌ನಲ್ಲಿ ದ್ವಿದಳ ಧಾನ್ಯ ಬೆಳೆದ ಹಾವೇರಿ ರೈತರು – ಜನ ಮೆಚ್ಚುಗೆ

Public TV
By Public TV
1 hour ago
Mandya Exam Result
Districts

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಂಡ್ಯ ಮಹಿಳಾ ಸರ್ಕಾರಿ ಕಾಲೇಜು

Public TV
By Public TV
1 hour ago
air india flight bomb threat
Latest

ಫ್ಯೂಯಲ್ ಕಂಟ್ರೋಲ್‌ ಸ್ವಿಚ್‌ನಲ್ಲಿ ದೋಷ; ಬೆಂಗಳೂರಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾರಾಟ ಸ್ಥಗಿತ

Public TV
By Public TV
2 hours ago
chicken momos
Crime

ಫ್ರೀ ಮೋಮೋಸ್ ಆಮಿಷ – ಮನೆಯಲ್ಲಿದ್ದ 85 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದ ಬಾಲಕ

Public TV
By Public TV
2 hours ago
Chikkaballapura
Chikkaballapur

ಚಿಕ್ಕಬಳ್ಳಾಪುರದಲ್ಲಿ ಚಿನ್ನದ ನಿಕ್ಷೇಪಕ್ಕಾಗಿ ಶೋಧ – ಹೆಲಿಕಾಪ್ಟರ್ ಮೂಲಕ ಏರಿಯಲ್ ಸರ್ವೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?