ಬೆಂಗಳೂರು: ಬೆಳ್ಳಂದೂರು ಸಮೀಪದ ಅರಳೂರು ಕೆರೆಯಲ್ಲಿ ಸಾವಿರಾರು ಮೀನುಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಶ್ರೀನಿವಾಸ್ ಎಂಬವರು ಗುತ್ತಿಗೆ ಪಡೆದು ಮೀನುಗಳನ್ನ ಸಾಕಾಣಿಕೆ ಮಾಡುತ್ತಿದ್ದರು. ನಗರದಲ್ಲಿ ಕಳೆದ ಹಲವು ದಿನಗಳಿಂದ ಮಳೆ ನಿರಂತರವಾಗಿ ಸುರಿಯುತ್ತಿರುವ ಪರಿಣಾಮ ಮಳೆ ನೀರಿನ ಜೊತೆ ಕಾರ್ಖಾನೆಗಳ ಹಾಗೂ ಒಳಚರಂಡಿ ನೀರನ್ನು ಕೆರೆಗೆ ಬಿಟ್ಟಿರುವುದರಿಂದ ಮೀನುಗಳು ಸಾವನ್ನಪ್ಪಿವೆ ಎಂದು ಶ್ರೀನಿವಾಸ್ ಹೇಳಿದ್ದಾರೆ.
ಮೀನುಗಳ ಸಾವಿನಿಂದ ಗುತ್ತಿಗೆದಾರ ಶ್ರೀನಿವಾಸ್ ಅವರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಆದರೆ ಸಾವಿರಾರು ಮೀನುಗಳು ಸಾವನ್ನಪ್ಪಿದರೂ ಇನ್ನೂ ಕಾರ್ಖಾನೆಗಳ ಕಲುಷಿತ ನೀರು ಕೆರೆಗಳಿಗೆ ಸೇರುವುದು ನಿಂತಿಲ್ಲ ಎಂಬುದು ವಿಪರ್ಯಾಸವಾಗಿದೆ.