ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಬೆದರಿಕೆ ಪತ್ರವೊಂದು ಬಂದಿದೆ.
ಅನಾಮಧೇಯ ವ್ಯಕ್ತಿಯಿಂದ ಈ ಬೆದರಿಕೆ ಪತ್ರ ಬಂದಿದ್ದು, ಮಾಜಿ ಸಚಿವರ ಶಿವಮೊಗ್ಗದ ನಿವಾಸಕ್ಕೆ ಪೋಸ್ಟ್ ಮೂಲಕ ಪತ್ರ ರವಾನೆಯಾಗಿದೆ. ಸದ್ಯ ಬೆದರಿಕೆ ಪತ್ರ ಬಂದ ಬೆನ್ನಲ್ಲೇ ಈಶ್ವರಪ್ಪ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ್ ಅವರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿಯಲ್ಲಿ ಟಿಕೆಟ್ ಫೈಟ್- ಹುಟ್ಟುಹಬ್ಬ ಆಚರಿಸಿಕೊಂಡು ಶಕ್ತಿ ಪ್ರದರ್ಶನ
ಪತ್ರದಲ್ಲೇನಿದೆ..?: ಸ್ವಾತಂತ್ರ್ಯ ಸೇನಾನಿಯಾದ ನಮ್ಮ ಸಮಾಜದ ಟಿಪ್ಪು ಸುಲ್ತಾನ್ ಬಗ್ಗೆ ನಿನ್ನ ಬಾಯಿಂದ ”ಮುಸ್ಲಿಂ ಗೂಂಡಾ” ಅಂತಾ ಹೇಳಿದ್ದೀಯಲ್ಲ, ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನ ಕಾಲೇಜಿಗೆ ಕಟ್ಟಡ ಕಟ್ಟಲು ನಮ್ಮ ಮುಸ್ಲಿಂ ಸಿಮೆಂಟ್ ಬ್ರಿಕ್ಸ್ ಬೇಕು ನಿನಗೆ. ಆದರೆ ಮುಸ್ಲಿಮರು ಮಾತ್ರ ಬೇಡ ಮಗನೆ ನಾಚಿಕೆಯಾಗಬೇಕು. ನಾಲಿಗೆ ಕಟ್ ಮಾಡುತ್ತೇವೆ ಹುಷಾರ್ ಮಗನೆ ಬಾಲ ಬಿಚ್ಚಬೇಡ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.