Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಜಮ್ಮು ಕಾಶ್ಮೀರಕ್ಕೆ ದಿಢೀರ್ 10 ಸಾವಿರ ಸೈನಿಕರ ಸ್ಥಳಾಂತರ – ಸ್ಪಷ್ಟನೆ ಕೊಟ್ಟ ಸರ್ಕಾರ

Public TV
Last updated: July 28, 2019 4:15 pm
Public TV
Share
3 Min Read
indian army
SHARE

ನವದೆಹಲಿ: ಭಯೋತ್ಪಾದಕರು ಜಮ್ಮು-ಕಾಶ್ಮೀರದರಲ್ಲಿ ಭಾರೀ ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂಬ ಗುಪ್ತಚರ ದಳದ ಖಚಿತ ಮಾಹಿತಿ ಮೇರೆಗೆ 10 ಸಾವಿರ ಸೈನಿಕರನ್ನು ಕಾಶ್ಮೀರಕ್ಕೆ ಸ್ಥಳಾಂತರಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಕೇಂದ್ರ ಸರ್ಕಾರ ರಾತ್ರೋರಾತ್ರಿ ದೇಶದ ವಿವಿಧ ಭಾಗಗಳಲ್ಲಿದ್ದ ಸುಮಾರು 10 ಸಾವಿರ ಸೈನಿಕರನ್ನು ಕಾಶ್ಮೀರಕ್ಕೆ ಸ್ಥಳಾಂತರಿಸಿತ್ತು. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿ ಮರಳಿದ ನಂತರ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿತ್ತು. ಅಜಿತ್ ದೋವಲ್ ಅವರು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದರು. ನಂತರ ಕೇಂದ್ರ ಗೃಹ ಸಚಿವಾಲಯಕ್ಕೆ ಮಾಹಿತಿ ನೀಡಿ, ಕಾಶ್ಮೀರದ ಪರಿಸ್ಥಿತಿ ನಿಭಾಯಿಸಲು ಹೆಚ್ಚುವರಿ ಸೈನಿಕರ ಅಗತ್ಯವಿದೆ ಎಂದು ತಿಳಿಸಿದ್ದರು.

indian army women

ಈ ಹಿನ್ನೆಲೆ ಕೇಂದ್ರ ಸರ್ಕಾರ 10 ಸಾವಿರ ಸೈನಿಕರನ್ನು ರಾತ್ರೋ ರಾತ್ರಿ ಸ್ಥಳಾಂತರಿಸಿ ಆದೇಶ ಹೊರಡಿಸಿತ್ತು. ಇದೀಗ ಕೇಂದ್ರ ಸರ್ಕಾರದ ಈ ನಿರ್ಧಾರದ ಕುರಿತು ವಿವಿಧ ರೀತಿಯ ಚರ್ಚೆ ನಡೆಯುತ್ತಿದ್ದು, ಭಯೋತ್ಪಾದನಾ ದಾಳಿ ನಡೆಯಲಿದೆ ಎಂಬ ಗುಪ್ತಚರ ದಳದ ಖಚಿತ ಮಾಹಿತಿ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ತಡರಾತ್ರಿ 10 ಸಾವಿರ ಸೈನಿಕರನ್ನು ಸ್ಥಳಾಂತರಿಸಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡ ನಂತರ ಹಲವು ರೀತಿ ಚರ್ಚೆಗಳು ನಡೆದಿದ್ದವು. ಇದರ ಭಾಗವಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ಆರ್ಟಿಕಲ್ 35ಎ ಅಡಿ ನೀಡಿರುವ ವಿಶೇಷ ಸ್ಥಾನಮಾನವನ್ನು ತೆರವುಗೋಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 10 ಸಾವಿರ ಸೈನಿಕರನ್ನು ಸ್ಥಳಾಂತರಿಸಿದೆ ಎನ್ನುವ ಚರ್ಚೆ ಕೇಳಿ ಬಂದಿತ್ತು.

indian army

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಕಾಶ್ಮೀರ ಕಣಿವೆಯಲ್ಲಿನ ಆರ್ಟಿಕಲ್ 35ಎ ತೆರವುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರ ಬೆಂಕಿಯೊಂದಿಗೆ ಸರಸವಾಡುತ್ತಿದೆ. ಒಂದು ವೇಳೆ ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನ ರದ್ದು ಮಾಡಿದರೆ ಈಗಾಗಲೇ ಸುರಿಯುತ್ತಿರುವ ಬೆಂಕಿಗೆ ಪೌಡರ್ ಹಾಕಿದಂತಾಗುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಕಾಶ್ಮೀರದ ಕಣಿವೆಯಲ್ಲಿ ಭಯೋತ್ಪಾದನಾ ದಾಳಿ ನಡೆಸಲು ಭಾರೀ ಸಂಚು ರೂಪಿಸಲಾಗುತ್ತಿದೆ. ಹೀಗಾಗಿ ಭಯೋತ್ಪಾದನಾ ಚಟುವಟಿಕೆಗಳನ್ನು ಹತ್ತಿಕ್ಕಲು ಹೆಚ್ಚುವರಿಯಾಗಿ 10 ಸಾವಿರ ಸೈನಿಕರನ್ನು ಸ್ಥಳಾಂತರಿಸಲಾಗಿದೆ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮ ಒಂದು ವರದಿ ಮಾಡಿದೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಕಾಶ್ಮೀರ ಕಣಿವೆಯ ಎರಡು ದಿನಗಳ ಭೇಟಿಯಿಂದ ಹಿಂದಿರುಗಿದ ನಂತರ ಈ ನಿರ್ಧಾರ ಕೈಗೊಂಡಿದ್ದು, ಸೈನ್ಯವನ್ನು ಕಳುಹಿಸುವ ಕುರಿತು ನಿರ್ಧರಿಸಲಾಗಿದೆ. ದೋವಲ್ ಅವರು ಕಾಶ್ಮೀರ ಕಣಿವೆಗೆ ಭೇಟಿ ನೀಡಿದ ವೇಳೆ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿದ್ದು, ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆಯ ಸ್ಥಿತಿಗತಿ ಕುರಿತು ವಿವರ ಪಡೆದಿದ್ದರು.

indian army

ಭಯೋತ್ಪಾದಕರ ದಾಳಿಗೆ ಪ್ರತಿದಾಳಿ ನಡೆಸಲು ಹಾಗೂ ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚುವರಿ ಸೇನಾ ಪಡೆಯನ್ನು ನಿಯೋಜಿಸಲಾಗುತ್ತಿದೆ ಎಂದು ಗೃಹ ಸಚಿವಾಲಯ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿತ್ತು. ಅಲ್ಲದೆ, ದೇಶದ ವಿವಿಧ ಭಾಗಗಳಲ್ಲಿರುವ ಸೈನಿಕರನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಕಳುಹಿಸಲಾಗುತ್ತಿದೆ ಎಂದು ಹೇಳಲಾಗಿತ್ತು.

ಈ ಕುರಿತು ಜಮ್ಮು ಮತ್ತು ಕಾಶ್ಮೀರದ ಡಿಜಿ ದಿಲ್ಬಾಗ್ ಸಿಂಗ್ ಅವರು ಸ್ಪಷ್ಟಪಡಿಸಿ, 10 ಸಾವಿರ ಅರೆ ಸೇನಾ ಪಡೆಯನ್ನು ಉತ್ತರ ಕಾಶ್ಮೀರ ಭಾಗಕ್ಕೆ ನಿಯೋಜನೆಗೊಳಿಸುವಂತೆ ಈಗಾಗಲೇ ಮನವಿ ಮಾಡಲಾಗಿತ್ತು ಎಂದು ತಿಳಿಸಿದ್ದರು.

ಉತ್ತರ ಕಾಶ್ಮೀರದಲ್ಲಿ ಸೈನಿಕರ ಕೊರತೆ ಇದ್ದು, ಹೀಗಾಗಿ ನಮಗೆ ಹೆಚ್ಚುವರಿ ಸೈನ್ಯದ ಅಗತ್ಯವಿದೆ. ಈ ಹಿಂದೆ 100 ಕಂಪನಿಗಳನ್ನು ಸಾಗಿಸಲಾಗಿದ್ದು, ಅದನ್ನೇ ನಾವು ಮರಳಿ ಕೇಳಿದ್ದೇವೆ ಎಂದು ದಿಲ್ಬಾಗ್ ಸಿಂಗ್ ತಿಳಿಸಿದ್ದರು. ಒಂದು ಕಂಪನಿ 100 ಸೈನಿಕರನ್ನು ಒಳಗೊಂಡಿರುತ್ತದೆ.

crpf 4

ಇತ್ತೀಚೆಗೆ ಅಮರನಾಥ ಯಾತ್ರೆಯ ಭದ್ರತೆಗಾಗಿ ಹೆಚ್ಚುವರಿಯಾಗಿ ಸುಮಾರು 40 ಸಾವಿರ ಕೇಂದ್ರ ಅರೆಸೈನಿಕ ಪಡೆಗಳನ್ನು ಕಳುಹಿಸಲಾಗಿದೆ. ಫೆ.24ರಂದು ಕೇಂದ್ರ ಅರೆಸೈನಿಕ ಪಡೆಯ ಸುಮಾರು 100 ಕಂಪನಿಗಳನ್ನು ಕಣಿವೆ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ. ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಗೆ ಸೈನಿಕರನ್ನು ನಿಯೋಜಿಸಲಾಗಿದೆ ಎಂದು ಸರ್ಕಾರ ತಿಳಿಸಿತ್ತು.

ಇದಾದ ನಂತರ ಜಮಾತ್-ಇ-ಇಸ್ಲಾಮಿ ಮೇಲೆ ನಿಷೇಧ ಹೇರಲಾಯಿತು. ಅಲ್ಲದೆ, ರಾಜ್ಯದ ನಾಯಕರು ಮತ್ತು ಬೆಂಬಲಿಗರ ಮೇಲೆ ಹೆಚ್ಚು ದಬ್ಬಾಳಿಕೆಗಳು ನಡೆದಿದ್ದವು ಎಂದು ದಿಲ್ಬಾಗ್ ಸಿಂಗ್ ಮಾಹಿತಿ ನೀಡಿದ್ದರು.

TAGGED:Central Governmentindian armyPublic TVsoldiersterrorismಕೇಂದ್ರ ಸರ್ಕಾರಪಬ್ಲಿಕ್ ಟಿವಿಭಯೋತ್ಪಾದನೆಭಾರತೀಯ ಸೇನೆಸೈನಿಕರು
Share This Article
Facebook Whatsapp Whatsapp Telegram

Cinema Updates

Sydney Sweeney 4
I’m Loving It – ಕೊನೆಗೂ ಬ್ರೇಕಪ್ ಬಗ್ಗೆ ಮೌನಮುರಿದ ಸಿಡ್ನಿ ಸ್ವೀನಿ!
2 hours ago
Kamal Haasan Praveen Shetty Thug Life Movie
ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಮಾಡಿದ್ರೆ ಬೆಂಗಳೂರು ಬಂದ್: ಪ್ರವೀಣ್ ಶೆಟ್ಟಿ ಎಚ್ಚರಿಕೆ
7 hours ago
kamal haasan thug life
‘ಥಗ್‌ ಲೈಫ್‌’ ಟೀಂ ಉದ್ಧಟತನ ಬಟಾಬಯಲು – ಕನ್ನಡ ಬಿಟ್ಟು 4 ಭಾಷೆಗಳಿಗೆ ಸಿನಿಮಾ ಡಬ್‌
16 hours ago
Trisha
ಥಗ್‌ ಲೈಫ್ ಚಿತ್ರಕ್ಕೆ ʻಶುಗರ್‌ ಬೇಬಿʼ ಪಡೆದ ಸಂಭಾವನೆ ಎಷ್ಟು ಗೊತ್ತಾ?
17 hours ago

You Might Also Like

Arun Kumar Puthila
Dakshina Kannada

ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಗಡೀಪಾರು ನೋಟಿಸ್

Public TV
By Public TV
31 minutes ago
Chikkaballapura Birthday Celebration Arrest
Chikkaballapur

Chikkaballapura | ಲಾಂಗ್‌ನಲ್ಲಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಣೆ – ಆಟೋ ಚಾಲಕ ಅರೆಸ್ಟ್

Public TV
By Public TV
54 minutes ago
Glenn Maxwell 1
Cricket

ಏಕದಿನಕ್ಕೆ ಆಸೀಸ್‌ ಆಲ್‌ರೌಂಡರ್‌ ಮ್ಯಾಕ್ಸ್‌ವೆಲ್‌ ದಿಢೀರ್‌ ನಿವೃತ್ತಿ

Public TV
By Public TV
1 hour ago
Volodymyr Zelenskyy
Latest

ರಷ್ಯಾ ವಾಯುನೆಲೆ ಮೇಲೆ ಉಕ್ರೇನ್ ಡ್ರೋನ್ ದಾಳಿ – ಅದ್ಭುತ ಕಾರ್ಯಾಚರಣೆ ಎಂದು ಶ್ಲಾಘಿಸಿದ ಝೆಲೆನ್ಸ್ಕಿ

Public TV
By Public TV
1 hour ago
Covid Positive
Latest

4,000 ಸಕ್ರಿಯ ಕೊರೊನಾ ಕೇಸ್‌ಗಳ ಸನಿಹದಲ್ಲಿ ಭಾರತ – ಕೇರಳದಲ್ಲಿಯೇ 1,400 ಪ್ರಕರಣ

Public TV
By Public TV
1 hour ago
shreyas iyer Rajat Patidar
Cricket

ಈ ಬಾರಿ ಐಪಿಎಲ್‌ನಲ್ಲಿ ಹೊಸ ಚಾಂಪಿಯನ್‌ – ಹಿಂದಿನ ಆರ್‌ಸಿಬಿ, ಪಂಜಾಬ್‌ ಫೈನಲ್‌ ಪಂದ್ಯಗಳು ಹೇಗಿತ್ತು?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?