ಧಾರವಾಡ: ಕೆರೆಗೆ (Lake) ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಧಾರವಾಡ (Dharwad) ತಾಲೂಕಿನ ಸಿಂಗನಹಳ್ಳಿ (Singanahalli) ಗ್ರಾಮದಲ್ಲಿ ನಡೆದಿದೆ.
ಸುಭಾನಿ ಬಾಬೊಜಿಕೊಪ್ಪ (12), ಮೆಹಬೂಬ ಒಟ್ನಾಳ (16), ಅನ್ವರ್ ಒಟ್ನಾಳ (14) ಸಾವನ್ನಪ್ಪಿದ ಬಾಲಕರು. ಮಧ್ಯಾಹ್ನ ಗ್ರಾಮದ ಪಕ್ಕದಲ್ಲಿ ಇರುವ ಕೆರೆಗೆ ಮೂವರು ಬಾಲಕರು ಈಜಲು ಹೋಗಿದ್ದರು. ಈ ವೇಳೆ ಕೆರೆಯ ಮಧ್ಯಭಾಗದಲ್ಲಿ ಹೋಗಿದ್ದ ಬಾಲಕರು ಈಜಲು ಆಗದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಜನಮನದಲ್ಲಿ ಉಳಿಯುವ ನಾಯಕನಿಗೆ ವಿದಾಯ ಇರಲ್ಲ: ಸಿದ್ದರಾಮಯ್ಯ ಆಡಳಿತ ನೆನೆದು ಹೆಬ್ಬಾಳ್ಕರ್ ಭಾವನಾತ್ಮಕ ಪೋಸ್ಟ್
ಸದ್ಯ ಮೂವರು ಬಾಲಕರ ಮೃತದೇಹವನ್ನು ನೀರಿನಿಂದ ಹೊರತೆಗೆಯಲಾಗಿದೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಪಾಕ್ನಿಂದ ಅಫ್ಘಾನ್ ನಿರಾಶ್ರಿತರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಪಲ್ಟಿ – 22 ಮಂದಿ ಸಾವು, 36 ಮಂದಿಗೆ ಗಾಯ
