ನೆಲಮಂಗಲ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತದಲ್ಲಿ ಆ್ಯಂಬುಲೆನ್ಸ್ ಜಖಂಗೊಂಡಿದ್ದಲ್ಲದೇ ಟ್ರಾಫಿಕ್ ಜಾಮ್ ಆಗಿ ಜನರು ಪರದಾಡಿದ ನಡೆಯಿತು.
ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಮಾದನಾಯಕನಹಳ್ಳಿ ಬಳಿ ಘಟನೆ ನಡೆದಿದ್ದು, ಅಪಘಾತದಲ್ಲಿ ಮೂರು ಕಾರು ಹಾಗೂ ಒಂದು ಆ್ಯಂಬುಲೆನ್ಸ್ ಜಖಂಗೊಂಡಿವೆ. ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋ ಮೀಟರ್ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತು. ಇದನ್ನೂ ಓದಿ: ನನಗೆ ಜನರ ಪ್ರೀತಿಯೇ ದೊಡ್ಡ ಪ್ರಶಸ್ತಿ: ಸೋನು ಸೂದ್
ನಿಂತಿದ್ದ ಕಾರೊಂದಕ್ಕೆ ಎರಡು ಕಾರು ಹಾಗೂ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದಿವೆ. ಸದ್ಯ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತುಮಕೂರು-ಬೆಂಗಳೂರು ಮಾರ್ಗದಲ್ಲಿ ಅಪಘಾತ ಸಂಭವಿಸಿದ್ದು, ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: 6 ದಿನ ನಡೆಯಲಿದೆ ಕತ್ರಿನಾ, ವಿಕ್ಕಿ ಮದುವೆ – ಯಾರಿಗೆಲ್ಲ ಇದೆ ಆಮಂತ್ರಣ?