ಒಣ ಹುಲ್ಲಿಗೆ ಬಿದ್ದ ಬೆಂಕಿ- ಸುಟ್ಟು ಕರಕಲಾದ 3 ಮಕ್ಕಳು

Public TV
1 Min Read
straw fire

ಲಕ್ನೋ: ಒಣ ಹುಲ್ಲಿಗೆ ಬೆಂಕಿ ಬಿದ್ದು, 3ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಮಿರ್ಜಾಪುರ ಜಿಲ್ಲೆಯ ಮಡಿಹಾನ್‍ನಲ್ಲಿ ನಡೆದಿದೆ.

ರಾಣಿ (3), ಹರ್ಷಿತ್ (5), ಸುನೈನಾ (7) ಮೃತ ಮಕ್ಕಳಾಗಿದ್ದಾರೆ. ಒಣ ಹುಲ್ಲಿಗೆ ಬೆಂಕಿ ಬಿದ್ದವೇಳೆ ಅಲ್ಲಿ ಇದ್ದ ಮಕ್ಕಳು ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿದ್ದಾರೆ. ಪುಟ್ಟ ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ಇದನ್ನೂ ಓದಿ: ನಾನ್ ಬೆಡ್‍ಶೀಟ್, ತಲೆದಿಂಬು- ಬೆಡ್‍ರೂಮ್ ಫೋಟೋ ವೈರಲ್

baby 2 1

ಒಣಹುಲ್ಲಿನ ಬಣವೆಯಲ್ಲಿ ಮಕ್ಕಳು ಆಟವಾಡುತ್ತಿದ್ದರು. ಆಗ ದಿಢೀರ್ ಅಂತಾ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಅಲ್ಲಿ ಆಟವಾಡುತ್ತಾ ಕುಳಿತಿದ್ದ ಮಕ್ಕಳ ಅರಿಗೆ ಇದು ಬಾರದೆ ಇರುವುದರಿಂದ ದುರ್ಘಟನೆಯಲ್ಲಿ ಮೂವರು ಮಕ್ಕಳು ಸುಟ್ಟು ಕರಕಲಾಗಿದ್ದಾರೆ.  ಇದನ್ನೂ ಓದಿ: ಫೋಟೋಶೂಟ್‌ಗಾಗಿ ಬಂದಿದ್ದ ಮಹಿಳೆ ಮೇಲೆ ಲಾಡ್ಜ್‌ನಲ್ಲಿ ಗ್ಯಾಂಗ್‌ರೇಪ್

POLICE JEEP

ಈ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಬೆಂಕಿ ಹೊತ್ತಿದ ಕುರಿತು ತನಿಖೆ ಮಾಡಲಾಗುತ್ತಿದೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ತುಮಕೂರಿನಲ್ಲಿ ಮತ್ತೆ ಕೊರೊನಾ ಭೀತಿ – 42 ಪುಟ್ಟ ಮಕ್ಕಳಿಗೆ ವಕ್ಕರಿಸಿದ ಕೋವಿಡ್

Share This Article
Leave a Comment

Leave a Reply

Your email address will not be published. Required fields are marked *