ಶಿವಮೊಗ್ಗ: ಕಾರು ಮತ್ತು ಕೆಎಸ್ಆರ್ಟಿಸಿ ಬಸ್ (KSRTC Bus) ನಡುವೆ ಡಿಕ್ಕಿ ಸಂಭವಿಸಿ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ (Thirthahalli) ತಾಲೂಕಿನ ಭಾರತೀಪುರ ಕ್ರಾಸ್ ಬಳಿ ನಡೆದಿದೆ.
ರಿಯಾಜ್ ಅಹಮದ್ ಹಾಗೂ ಫಾತಿಮಾ ಮೃತರು. ಮಗು, ಕಾರಿನ ಚಾಲಕ ಮತ್ತು ಪಕ್ಕದ ಸೀಟಿನಲ್ಲಿದ್ದ ಮಹಿಳೆ ಮೃತಪಟ್ಟಿದ್ದು ಕಾರಿನಲ್ಲಿದ್ದ ಉಳಿದ ಮೂವರು ಗಂಭೀರ ಗಾಯಗೊಂಡಿದ್ದಾರೆ.
ಚೆನ್ನಗಿರಿಯಿಂದ ಶೃಂಗೇರಿ ಕಡೆಗೆ ಸ್ವಿಫ್ಟ್ ಕಾರಿನಲ್ಲಿ (Swift Car) 6 ಜನರು ತೆರಳುತ್ತಿದ್ದರೆ ಮಂಗಳೂರಿನಿಂದ ರಾಯಚೂರು ಕಡೆಗೆ ಕೆಎಸ್ಆರ್ಟಿಸಿ ಬಸ್ ಹೋಗುತ್ತಿತ್ತು. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದರೆ ಬಸ್ಸಿನ ಮುಂಭಾಗಕ್ಕೆ ಹಾನಿಯಾಗಿದೆ. ಇದನ್ನೂ ಓದಿ: ಸಿಎಂ, ಡಿಸಿಎಂ ಜೊತೆ ರಾಹುಲ್ ಪ್ರತ್ಯೇಕ ಮಾತುಕತೆ – ತಿಂಗಳಾಂತ್ಯಕ್ಕೆ ದೆಹಲಿಗೆ ಬುಲಾವ್ ಭರವಸೆ

