ಬೆಂಗಳೂರು: ದೇವರ ಉತ್ಸವದಲ್ಲಿ ಡಾನ್ಸ್ ಮಾಡುತ್ತಿದ್ದ ವೇಳೆ ಮೈ ತಾಕಿದ್ದಕ್ಕೆ ಯುವಕನನ್ನ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬ್ಯಾಟರಾಯನಪುರ ಪೊಲೀಸರು (Byatarayanapura Police) ಬಂಧಿಸಿದ್ದಾರೆ.
ಬೈಕ್ ಸರ್ವೀಸ್ ಸೆಂಟರ್ನಲ್ಲಿ (Bike Service Center) ಕೆಲಸ ಮಾಡುತ್ತಿದ್ದ 23 ವರ್ಷದ ಯುವಕ ಯೋಗೀಶ್ನನ್ನು ಹತ್ಯೆಗೈದ ಆರೋಪಿಗಳನ್ನ ಬಂಧಿಸಿದ್ದಾರೆ. ಕೊಲೆ ಆರೋಪಿಗಳನ್ನು ಚೇತನ್, ರಂಗ, ಪವನ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಬ್ಯಾಡಗಿಯಲ್ಲಿ ಸಿಡಿದ ರೈತರು – ಮೆಣಸಿನ ಮಾರುಕಟ್ಟೆ ಕಚೇರಿ, ಅಗ್ನಿಶಾಮಕ ವಾಹನಕ್ಕೆ ಬೆಂಕಿ
ಕಳೆದ ಮೂರು ದಿನಗಳ ಹಿಂದೆಯಷ್ಟೇ ನಡೆದ ದೇವರ ಉತ್ಸವದಲ್ಲಿ ಡಾನ್ಸ್ ಮಾಡುತ್ತಿದ್ದ ವೇಳೆ ಯೋಗೀಶ್ ಮೈ ತಾಕಿಸಿದ್ದಾನೆ. ಈ ವಿಚಾರಕ್ಕೆ ಯೋಗೀಶ್ ಮತ್ತು ಆರೋಪಿಗಳ ನಡುವೆ ಗಲಾಟೆ ನಡೆದು ವಿಕೋಪಕ್ಕೆ ತಿರುಗಿದೆ. ನಂತರ ಚೇತನ್, ರಂಗ, ಪವನ್ ಸೇರಿ ಕೊಲೆ ಮಾಡಿ, ಎಸ್ಕೇಪ್ ಆಗಿದ್ದರು. ಮೂವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಹಳೆಯ ದ್ವೇಷಕ್ಕೆ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆಯಾದ ಯೋಗೀಶ್ ಹಾಗೂ ಆರೋಪಿಗಳ ನಡುವೆ ಈ ಹಿಂದೆ ಗಲಾಟೆ ನಡೆದಿತ್ತು. ಅದಕ್ಕಾಗಿಯೇ ಯೋಗೀಶ್ನನ್ನ ಕೊಲೆ ಮಾಡೋದಕ್ಕೆ ಸಂಚು ರೂಪಿಸಿದ್ದರು ಎಂಬುದಾಗಿ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ತನಿಖೆ ಮುಂದುವರಿದಿದೆ. ಇದನ್ನೂ ಓದಿ: PublicTV Explainer: ಕರ್ನಾಟಕದಲ್ಲಿ ಕಲರ್ ಕಾಟನ್ ಕ್ಯಾಂಡಿ ಬ್ಯಾನ್; ‘ಕಲರ್’ ಗೋಬಿ, ಪಾನಿಪುರಿ, ಕಬಾಬ್ ಖಾದ್ಯಗಳಿಗೂ ಬ್ರೇಕ್ – ಯಾಕೆ ಗೊತ್ತಾ?