ಕೊಪ್ಪಳ: ಪೆಟ್ರೋಲ್ (Petrol) ಹಾಕಿ ದುಡ್ಡು ಕೇಳಿದ್ದಕ್ಕೆ ಪಂಪ್ ಸಿಬ್ಬಂದಿ ಮೇಲೆ ಮೂವರು ಸೇರಿ ಹಲ್ಲೆ ನಡೆಸಿರುವ ಘಟನೆ ಗಂಗಾವತಿ (Gangavathi) ಹೊರವಲಯದ ಸಾಯಿ ನಗರದಲ್ಲಿನ ಭಾರತ ಪೆಟ್ರೋಲ್ ಪಂಪ್ನಲ್ಲಿ ನಡೆದಿದೆ.ಇದನ್ನೂ ಓದಿ:ಆರಾಧನಾ ಸ್ಥಳಗಳ ಕಾಯ್ದೆ ಪ್ರಶ್ನಿಸಿ ರಿಟ್ – ಹೊಸ ಅರ್ಜಿ ವಿಚಾರಣೆಗೆ ನಿರಾಕರಿಸಿದ ಸುಪ್ರೀಂ
ಸೋಮವಾರ ಸಂಜೆ ಈ ಘಟನೆ ನಡೆದಿದ್ದು, 50 ರೂ. ಪೆಟ್ರೋಲ್ ಹಾಕಿಸಿಕೊಂಡು ಗಲಾಟೆ ಮಾಡಿದ್ದಾರೆ. ಬಳಿಕ ಕೈಗೆ ಸಿಕ್ಕ ವಸ್ತುಗಳಿಂದ ಹಲ್ಲೆ ಮಾಡಿದ್ದಾರೆ. ಪೆಟ್ರೋಲ್ ಪಂಪ್ ಸಿಬ್ಬಂದಿ ಶ್ರೀಕಾಂತ ಹಾಗೂ ಅನಿಲ್ ಎಂಬುವವರ ಮೇಲೆ ಮೂವರು ಪುಂಡರು ಸೇರಿ ಹಲ್ಲೆ ನಡೆಸಿದ್ದಾರೆ. ಜೊತೆಗೆ ಗಲಾಟೆ ಬಿಡಿಸಲು ಹೋದವರ ಮೇಲೆಯೂ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಹಲ್ಲೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸದ್ಯ ಹಲ್ಲೆಗೊಳಗಾದ ಪೆಟ್ರೋಲ್ ಪಂಪ್ ಸಿಬ್ಬಂದಿ ಗಂಗಾವತಿ ಗ್ರಾಮೀಣ ಠಾಣೆಗೆ ದೂರು ದಾಖಲಿಸಿದ್ದು, ಗಂಗಾವತಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ:ಎರಡು ಅವಧಿಗೆ ಸಿಡ್ನಿ ಸಿಕ್ಸರ್ ಪರ ಆಡಲಿದ್ದಾರೆ ಕೊಹ್ಲಿ!