ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ಪಟ್ಟಣದ ಬಳಿ ಪ್ರತ್ಯೇಕ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.
ತಮಿಳುನಾಡು ಮೂಲದ ಕೇಶವನ್(35), ಮಂಜುನಾಥ್(30) ಮತ್ತು ಗುರುಪ್ರಸಾದ್(40) ಮೃತ ದುರ್ದೈವಿಗಳು. ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಲಾರಿಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಪರಿಣಾಮ ಕೇಶವನ್ ಮೃತಪಟ್ಟಿದ್ದಾರೆ.
ಇತ್ತ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಮತ್ತು ಟಿಟಿ ವಾಹನ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದಾರೆ. ಟಿಟಿ ವಾಹನದಲ್ಲಿ ಬೆಂಗಳೂರಿನಿಂದ ಶಿರಸಿಗೆ ತೆರಳುತ್ತಿದ್ದರು. ಈ ವೇಳೆ ಲಾರಿ ಮತ್ತು ಟಿಟಿ ವಾಹನ ಮುಖಾಮುಖಿ ಡಿಕ್ಕಿ ಹೊಡೆದಿವೆ. ಪರಿಣಾಮ ಮಂಜುನಾಥ್ ಮತ್ತು ಗುರುಪ್ರಸಾದ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈ ಅಪಘಾತದಲ್ಲಿ ಟಿಟಿ ವಾಹನದಲ್ಲಿದ್ದ ಐವರಿಗೆ ಗಂಭೀರವಾಗಿ ಗಾಯವಾಗಿದ್ದು, ಗಾಯಾಳುಗಳನ್ನು ಹಿರಿಯೂರು ಮತ್ತು ತುಮಕೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಗ್ಗೆ ಮಾಹಿತಿ ತಿಳಿದ ಹಿರಿಯೂರು ಪೊಲೀಸ್ ಠಾಣೆಯ ಸಿಪಿಐ ಗುರುರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ಹಿರಿಯೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv