ಕಾರವಾರ: ವಿದ್ಯುತ್ ತಂತಿ ತಗುಲಿ ಪ್ರತ್ಯೇಕ ಕಡೆ ಮೂವರು ಸಾವನ್ನಪ್ಪಿದ ಘಟನೆ ಯಲ್ಲಾಪುರ ನಗರ ಹಾಗೂ ದುಂಡ್ಯಾನಕೊಪ್ಪ ಗ್ರಾಮದಲ್ಲಿ ನಡೆದಿದೆ.
ನಾಗರಾಜ್ ಚನ್ನಪ್ಪ ಕಲಸೂರು(35) ಮೃತಪಟ್ಟ ಕಾರ್ಮಿಕ. ನಾಗರಾಜ್ ಮೂಲತಃ ಕಲಘಟಗಿ ತಾಲೂಕಿನ ತಂಬೂರು ಗ್ರಾಮದವರಾಗಿದ್ದಾರೆ ಎಂದು ತಿಳಿದು ಬಂದಿದೆ. ಕಾರ್ಮಿಕ ಯಲ್ಲಾಪುರ ನಗರದ ಅರಣ್ಯ ಇಲಾಖೆ ಕಟ್ಟಡ ನಿರ್ಮಾಣದ ವೇಳೆ ಕಟ್ಟಡದ ಮೇಲ್ಭಾಗದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗೋಪಾಲ ಭಟ್ (60) ಹಾಗೂ ಗೋಪಾಲಕೃಷ್ಣ ರಾಮಚಂದ್ರ ಹೆಗಡೆ (50) ಮೃತ ರೈತರಾಗಿದ್ದಾರೆ.ಇವರು ಯಲ್ಲಾಪುರ ತಾಲೂಕಿನ ಡುಂಡ್ಯಾನಕೊಪ್ಪ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡಿ ಬರುತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಯಲ್ಲಾಪುರದಲ್ಲಿ ಪ್ರತ್ಯೇಕ ವಿದ್ಯುತ್ ತಂತಿ ಸ್ಪರ್ಶಿಸಿ ಮೂವರು ಸಾವನ್ನಪ್ಪಿದ್ದು, ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.