ಚಿತ್ರದುರ್ಗ: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಮೂವರ ಮೇಲೆ ಸ್ಟೀಲ್ ಕಟರ್ನಿಂದ ಹಲ್ಲೆ ನಡೆಸಿದ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಉಡುಸಲಮ್ಮ ದೇವಿಯ ಜಾತ್ರೆ ನಡೆಯುತ್ತಿತ್ತು. ಈ ವೇಳೆ ಬೇರೆ ಬೇರೆ ಕಡೆಯಿಂದ ಗ್ರಾಮಕ್ಕೆ ಜನ ಬಂದಿದ್ದರು. ಇದೇ ವೇಳೆ ವಿರೇಶ್ ಎಂಬಾತ ಕುಡಿದು ಗಲಾಟೆ ಆರಂಭಿಸಿದ್ದಾನೆ. ಬಳಿಕ ದೇವಾಲಯದ ಬಳಿ ಇದ್ದ ಮೂವರು ಅದೇ ಗ್ರಾಮದ ಯುವಕರಿಗೆ ಸ್ಟೀಲ್ ಇರಿದಿದ್ದಾನೆ. ಇದನ್ನೂ ಓದಿ: ಕಲಬುರಗಿ ಅಂಬೇಡ್ಕರ್ ಪ್ರತಿಮೆಗೆ ಅವಮಾನ ಮಾಡಿದ ಕೇಸ್ನಲ್ಲಿ ನಾಲ್ವರ ಬಂಧನ: ಪರಮೇಶ್ವರ್
ಗ್ರಾಮದ ಪವನ್, ಮಾರುತಿ ಹಾಗೂ ಮಂಜುನಾಥ್ ಎಂಬವರ ಮೇಲೆ ಹಲ್ಲೆ ನಡೆದಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಿಂದಿನಿಂದಲೂ ವೀರೇಶ್ ಹಾಗೂ ಹಲ್ಲೆಗೊಳಗಾದ ಮೂವರು ಯುವಕರ ನಡುವೆ ಜಾತಿ ವೈಷಮ್ಯ ಇತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ಸ್ಟೀಲ್ ಕಟರ್ನಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಅಯೋಧ್ಯೆಗೆ ಬರೋ ಮುನ್ನ ಮೈಸೂರಿನ ಚಿಣ್ಣರ ಮೇಳದಲ್ಲಿ ಸಮಯ ಕಳೆದಿದ್ದೆ- ಶಿಲ್ಪಿ ಅರುಣ್ ಯೋಗಿರಾಜ್ ಬಿಚ್ಚಿಟ್ಟ ಸತ್ಯ