ಭುವನೇಶ್ವರ್: ವಿಷಕಾರಿ ಹಾವು (Snake) ಕಚ್ಚಿ ಮೂವರು ವಿದ್ಯಾರ್ಥಿಗಳು (Students) ಸಾವನ್ನಪ್ಪಿದ ಘಟನೆ ಒಡಿಶಾದ (Odisha) ಕಿಯೋಂಜಾರ್ನ ಖಾಸಗಿ ಹಾಸ್ಟೆಲ್ನಲ್ಲಿ ನಡೆದಿದೆ. ಓರ್ವ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಗೆ ನೀಡಲಾಗುತ್ತಿದೆ.
ರಾಜಾ ನಾಯಕ್ (12), ಶೆಹಶ್ರೀ ನಾಯಕ್ (11) ಮತ್ತು ಎಲಿನಾ ನಾಯಕ್ (12) ಮೃತಪಟ್ಟ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಆಕಾಶ್ ನಾಯಕ್ (12) ಎಂಬಾತನನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿಗಳು ಮಲಗಿದ್ದ ವೇಳೆ ಹಾವು ಕಚ್ಚಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪತಿಯ ಮುಂದೆಯೇ ಸೋದರ ಸಂಬಂಧಿಯನ್ನು ವರಿಸಿದ ಪತ್ನಿ!
ವಿದ್ಯಾರ್ಥಿಗಳು ಖಾಸಗಿ ಕೋಚಿಂಗ್ ಸೆಂಟರ್ನ ಹಾಸ್ಟೆಲ್ನಲ್ಲಿ ತಂಗಿದ್ದರು. ನಾಲ್ವರು ವಿದ್ಯಾರ್ಥಿಗಳು ನೆಲದ ಮೇಲೆ ಮಲಗಿದ್ದಾಗ ಈ ಘಟನೆ ನಡೆದಿದೆ. ನಿದ್ರೆಯಲ್ಲಿದ್ದ ಕಾರಣ ವಿದ್ಯಾರ್ಥಿಗಳಿಗೆ ಹಾವು ಕಚ್ಚಿರುವುದು ಅರಿವಿಗೆ ಬಂದಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ನಂತರ ಅವರ ಆರೋಗ್ಯದಲ್ಲಿ ಬದಲಾವಣೆಯಾಗಿದ್ದು, ಕೂಡಲೇ ನಾಲ್ವರು ವಿದ್ಯಾರ್ಥಿಗಳನ್ನು ಕಿಯೋಂಜಾರ್ನಲ್ಲಿರುವ ಜಿಲ್ಲಾ ಪ್ರಧಾನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಬಳಿಕ ಗಂಭೀರ ಸ್ಥಿತಿಯಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿಯನ್ನು ಚಿಕಿತ್ಸೆಗಾಗಿ ಎಸ್ಸಿಬಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಆನ್ಲೈನ್ ಗೇಮ್ನಲ್ಲಿ 5 ಕೋಟಿ ಗೆದ್ದು, 58 ಕೋಟಿ ಕಳೆದುಕೊಂಡ ಉದ್ಯಮಿ!
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]