Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಕೆಜಿಎಫ್ ಸಿನಿಮಾ ಆಗೋಕೆ ಮೂವರು ಮಹಿಳೆಯರು ಕಾರಣ: ವಿಜಯ್ ಕಿರಗಂದೂರು

Public TV
Last updated: March 28, 2022 11:41 am
Public TV
Share
2 Min Read
FotoJet 8 8
SHARE

ದೇಶಾದ್ಯಂತ ಇದೀಗ ಕೆಜಿಎಫ್ 2 ಹವಾ ಕ್ರಿಯೇಟ್ ಆಗಿದೆ. ನೆನ್ನೆಯಷ್ಟೇ ರಿಲೀಸ್ ಆಗಿರುವ ಚಿತ್ರದ ಟ್ರೈಲರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಭಾರತೀಯ ಸಿನಿಮಾ ರಂಗದ ಬಹುತೇಕ ಸ್ಟಾರ್ ನಟರು ಟ್ರೈಲರ್ ಮೆಚ್ಚಿಕೊಂಡು, ಅದನ್ನು ಸೋಷಿಯಲ್ ಮೀಡಿಯಾಗಳಲ್ಲೂ ಹಂಚಿಕೊಳ್ಳುತ್ತಿದ್ದಾರೆ. ಅಭಿಮಾನಿಗಳಂತೂ ಹಬ್ಬದ ರೀತಿಯಲ್ಲೇ ಸಂಭ್ರಮಿಸುತ್ತಿದ್ದಾರೆ. ಈಗ ಕನ್ನಡದ ಚಿತ್ರವೊಂದು ಬಾಲಿವುಡ್ ದಾಟಿಕೊಂಡು ಹಾಲಿವುಡ್ ಅಂಗಳಕ್ಕೆ ಪಾದಾರ್ಪಣೆ ಮಾಡಿದೆ. ಇದನ್ನೂ ಓದಿ : ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ವೇದಿಕೆಯಲ್ಲೇ ಕಪಾಳಮೋಕ್ಷ: ಅತ್ಯುತ್ತಮ ನಟ ಆಸ್ಕರ್ ವಿಜೇತ ವಿಲ್ ಸ್ಮಿತ್ ಉಗ್ರತಾಪ

FotoJet 7 14

ಹಲವು ದಾಖಲೆಗಳನ್ನು ಬರೆದಿರುವ ಮತ್ತು ತಾನೇ ಬರೆದ ದಾಖಲೆಯನ್ನು ಮುರಿದಿರುವ ‘ಕೆಜಿಎಫ್’ ಸಿನಿಮಾ ಶುರುವಾಗಿದ್ದು 2015ರಂದು. ನಟ ಯಶ್ ‘ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ’ ಸಿನಿಮಾದ ಗೆಲುವಿನಲ್ಲಿದ್ದರು. ನಿರ್ದೇಶಕ ಪ್ರಶಾಂತ್ ನೀಲ್ ‘ಉ್ರಗಂ’ ಚಿತ್ರದ ಮೂಲಕ ಭರವಸೆಯ ನಿರ್ದೇಶಕರಾಗಿದ್ದರು. ಪುನೀತ್ ರಾಜ್ ಕುಮಾರ್ ನಟನೆಯ ‘ನಿನ್ನಿಂದಲೇ’ ಚಿತ್ರದ ಮೂಲಕ ಹೊಂಬಾಳೆ ಫಿಲ್ಮ್ ಬ್ಯಾನರ್ ಸಿನಿಮಾ ರಂಗ ಪ್ರವೇಶ ಮಾಡಿತ್ತು. ಈ ಮೂವರು ಸೇರಿ ಮೊದಲು ‘ಕೆಜಿಎಫ್’ ಕನಸು ಕಂಡವರು. ಇದನ್ನೂ ಓದಿ: ಹೊಸ ದಾಖಲೆ ಬರೆದ ಕೆಜಿಎಫ್ 2 ಟ್ರೈಲರ್ – ರಿಲೀಸ್ ಆದ ಕೆಲವೇ ನಿಮಿಷದಲ್ಲಿ ಲಕ್ಷಾಂತರ ವ್ಯೂ

FotoJet 112

21 ಡಿಸೆಂಬರ್ 2018ರಲ್ಲಿ ತೆರೆಕಂಡ ‘ಕೆಜಿಎಫ್’ ಸಿನಿಮಾ ಐತಿಹಾಸಿಕ ದಾಖಲೆ ಮಾಡಿತು. ಪ್ಯಾನ್ ಇಂಡಿಯಾ ಪರಿಕಲ್ಪನೆಯ ಪಕ್ಕಾ ಸಿನಿಮಾ ಎನಿಸಿತು. ಬಾಕ್ಸ್ ಆಫೀಸಿನಲ್ಲಿ ನೂರಾರು ಕೋಟಿ ಬಾಚಿತು. ಯಶ್ ಎಂಬ ಕನ್ನಡದ ಹುಡುಗ ಪ್ಯಾನ್ ಇಂಡಿಯಾ ನಾಯಕನಾಗಿ ಹೊರಹೊಮ್ಮಿದರು. ಭಾರತೀಯ ಸಿನಿಮಾ ರಂಗವೇ ಈ ಸಿನಿಮಾವನ್ನು ಬೆರಗಿನಿಂದ ನೋಡಿತ್ತು. ನಿರ್ದೇಶಕ ಪ್ರಶಾಂತ್ ನೀಲ್ ಕೂಡ ಈ ಸಿನಿಮಾದಿಂದ ಕೇವಲ ಕನ್ನಡಕ್ಕೆ ಮಾತ್ರ ಸೀಮಿತವಾಗಲಿಲ್ಲ. ತೆಲುಗಿಗೂ ಹಾರಿದರು. ಇಷ್ಟೆಲ್ಲ ಗೆಲುವಿಗೆ ಇಂಬು ಕೊಟ್ಟಿದ್ದು ‘ಕೆಜಿಎಫ್ 2’ ಚಿತ್ರ.  ಇದನ್ನೂ ಓದಿ: ಕೆಜಿಎಫ್-2 ಟ್ರೈಲರ್ ರಿಲೀಸ್ ಮಾಡಿದ ಶಿವಣ್ಣ- ರಾಕಿಬಾಯ್ ಅಬ್ಬರ ಶುರು

FotoJet 6 17

2018ರಲ್ಲೇ ‘ಕೆಜಿಎಫ್ 2’ ಸಿನಿಮಾದ ಕೆಲಸ ಶುರುವಾದವು. ಇದೀಗ ಸಿನಿಮಾ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದೆ. ಈ ಸಿನಿಮಾ ಕೂಡ ಭಾರತದ ಸಹಿತ 70 ದೇಶಗಳಲ್ಲಿ ಬಿಡುಗಡೆ ಆಗುತ್ತಿರುವುದು ಮತ್ತೊಂದು ಹೆಮ್ಮೆಯ ಸಂಗತಿ. ಬರೋಬ್ಬರಿ ಎಂಟು ವರ್ಷಗಳ ಕಾಲ ಯಶ್, ಪ್ರಶಾಂತ್ ನೀಲ್ ಮತ್ತು ನಿರ್ಮಾಪಕ ವಿಜಯ್ ಕಿರಗಂದೂರು ಈ ಸಿನಿಮಾಗಾಗಿ ಕೆಲಸ ಮಾಡಿದ್ದಾರೆ. ಇದನ್ನೂ ಓದಿ: ಪುನೀತ್ ರಾಜ್‌ಕುಮಾರ್ ಮನೆಗೆ ಭೇಟಿ ನೀಡಿದ ಸಂಜಯ್ ದತ್

FotoJet 2 83

ಎಂಟು ವರ್ಷಗಳ ಕಾಲ ಯಶ್ ಯಾವುದೇ ಸಿನಿಮಾ ಒಪ್ಪಿಕೊಳ್ಳದೇ ‘ಕೆಜಿಎಫ್’ನಲ್ಲೇ ಮುಳುಗಿದ್ದಾರೆ. ಪ್ರಶಾಂತ್ ನೀಲ್ ತೆಲುಗಿನಲ್ಲಿ ಸಿನಿಮಾ ಮಾಡುತ್ತಿದ್ದರೂ, ಕೆಜಿಎಫ್ 2 ಸಿನಿಮಾದ ಕೆಲಸ ಮುಗಿದ ನಂತರವೇ ಮತ್ತೊಂದು ಕೆಲಸಕ್ಕೆ ಕೈ ಹಾಕಿದ್ದಾರೆ. ಹೊಂಬಾಳೆ ಫಿಲ್ಮ್ ಬೇರೆ ಬೇರೆ ಚಿತ್ರಗಳನ್ನೂ ಮಾಡಿದರೂ, ಕೆಜಿಎಫ್ ಟೆನ್ಷನ್ ಮಾತ್ರ ಹಾಗೆಯೇ ಇತ್ತು. ಇವರೆಲ್ಲ ಇಷ್ಟೊಂದು ನಿರಾಳತೆಯಿಂದ ಕೆಲಸ ಮಾಡಲು ಕಾರಣ ಅವರ ಪತ್ನಿಯರು ಎನ್ನುವುದು ವಿಶೇಷ. ಕೆಜಿಎಫ್ 2 ಸಿನಿಮಾದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಸ್ವತಃ ನಿರ್ಮಾಪಕ ವಿಜಯ್ ಕಿರಗಂದೂರ ಅವರೇ ಈ ಮಾತನ್ನು ಹೇಳಿದ್ದಾರೆ.

FotoJet 5 26

“ಪ್ರಶಾಂತ್ ನೀಲ್ ಪತ್ನಿ ಲಿಖಿತ, ಯಶ್ ಪತ್ನಿ ರಾಧಿಕಾ ಪಂಡಿತ್ ಮತ್ತು ನನ್ನ (ವಿಜಯ ಕಿರಗಂದೂರ) ಪತ್ನಿ ಸಹಕಾರದಿಂದಾಗಿ ಎಂಟು ವರ್ಷಗಳ ಕಾಲ ಒಂದೇ ಸಿನಿಮಾದ ಬಗ್ಗೆ ಅಷ್ಟೂ ಶಕ್ತಿಯನ್ನು ವ್ಯಹಿಸಿದ್ದೇವೆ. ನಾವು ಕೂಲ್ ಆಗಿ ಕೆಲಸ ಮಾಡಿದ್ದೇವೆ ಎಂದರೆ, ಅದರ ಅಷ್ಟೂ ಕ್ರೆಡಿಟ್ಸ್ ಅವರಿಗೆ ಸಲ್ಲಬೇಕು’ ಎಂದಿದ್ದಾರೆ ವಿಜಯ್ ಕಿರಗಂದೂರ.

TAGGED:kgfKGF-2Prashant NealRadhika PanditteaserTrialVijay KiriganduraWritingYashಕೆಜಿಎಫ್ಕೆಜಿಎಫ್-2ಟೀಸರ್ಟ್ರೈರಲ್ಪ್ರಶಾಂತ್ ನೀಲ್ಯಶ್ರಾಧಿಕಾ ಪಂಡಿತ್ಲಿಖಿತವಿಜಯ್ ಕಿರಗಂದೂರ
Share This Article
Facebook Whatsapp Whatsapp Telegram

Cinema Updates

Benglauru Stampede Ramya Tweet
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ
40 minutes ago
Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
1 day ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
1 day ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
1 day ago

You Might Also Like

Narendra Modi 1
Bengaluru City

ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ | ಇದು ಹೃದಯ ವಿದ್ರಾವಕ ಘಟನೆ – ಮೃತರಿಗೆ ಮೋದಿ ಸಂತಾಪ

Public TV
By Public TV
23 seconds ago
d.k.shivakumar KPCC
Bengaluru City

ಅನ್ ಕಂಟ್ರೋಲ್ಡ್ ಕ್ರೌಡ್ ಆಯ್ತು: ಕಾಲ್ತುಳಿತದ ಬಗ್ಗೆ ಡಿಕೆಶಿ ರಿಯಾಕ್ಷನ್

Public TV
By Public TV
44 minutes ago
Vidhasoudha RCB Honour
Bengaluru City

ಮೈಸೂರು ಪೇಟಾ ತೊಡಿಸಿ, ಶಾಲು ಹೊದಿಸಿ ಆರ್‌ಸಿಬಿ ಆಟಗಾರರನ್ನು ಸನ್ಮಾನಿಸಿದ ಸಿಎಂ, ಡಿಸಿಎಂ

Public TV
By Public TV
1 hour ago
BY Vijayendra
Bengaluru City

ಸರ್ಕಾರದ ಪ್ರಚಾರದ ಹುಚ್ಚಿಗೆ ಜನ ಬಲಿಯಾಗಿದ್ದಾರೆ: ವಿಜಯೇಂದ್ರ ಆಕ್ರೋಶ

Public TV
By Public TV
1 hour ago
Namma Metro Purple Line
Bengaluru City

ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಎರಡು ನಿಲ್ದಾಣಗಳಲ್ಲಿ ಮೆಟ್ರೋ ಸೇವೆ ಸ್ಥಗಿತ

Public TV
By Public TV
2 hours ago
bengaluru stambede rcb
Bengaluru City

ಆರ್‌ಸಿಬಿ ವಿಜಯೋತ್ಸವದ ವೇಳೆ ಯಡವಟ್ಟು – ಕಾಲ್ತುಳಿತಕ್ಕೆ 10 ಆರ್‌ಸಿಬಿ ಫ್ಯಾನ್ಸ್‌ ದುರ್ಮರಣ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?