Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: PublicTV Explainer: ಆಧುನಿಕ ಭಾರತದ ಮೊದಲ ಸಾಂಕ್ರಾಮಿಕ ರೋಗ ಯಾವುದು ಗೊತ್ತಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Explainer | PublicTV Explainer: ಆಧುನಿಕ ಭಾರತದ ಮೊದಲ ಸಾಂಕ್ರಾಮಿಕ ರೋಗ ಯಾವುದು ಗೊತ್ತಾ?

Explainer

PublicTV Explainer: ಆಧುನಿಕ ಭಾರತದ ಮೊದಲ ಸಾಂಕ್ರಾಮಿಕ ರೋಗ ಯಾವುದು ಗೊತ್ತಾ?

Public TV
Last updated: March 13, 2023 11:38 am
Public TV
Share
4 Min Read
CORONA 1
SHARE

-ಕೊರೊನಾ ಅಷ್ಟೇ ಅಲ್ಲ ಪ್ಲೇಗ್ ಕೂಡ ಚೀನಾದಿಂದ್ಲೆ ಹರಡಿತ್ತು

ಕೋವಿಡ್-19 (Corona) ಇಡೀ ಜಗತ್ತನ್ನೇ ಹಿಂಡಿಹಿಪ್ಪೆ ಮಾಡಿದ ಸಾಂಕ್ರಾಮಿಕ. ವಿಶ್ವದಾದ್ಯಂತ ಕೋಟ್ಯಂತರ ಮಂದಿ ಬಲಿಯಾದರು. ಸೋಂಕು ತಗುಲುವ ಭೀತಿಯಿಂದ ಜನರು ಮನೆಯಲ್ಲೇ ಬಂಧಿಯಾಗಿ ಜೈಲುವಾಸ ಅನುಭವಿಸಿದರು. ಇಡೀ ಜಗತ್ತು ಲಾಕ್ ಡೌನ್ ಆಗಿ ಆರ್ಥಿಕ ಸಂಕಷ್ಟ ಎದುರಿಸಿತು. ಇಷ್ಟೆಲ್ಲ ಭೀಕರತೆಯ ನಡುವೆ ಕೊರೊನಾ ವೈರಸ್ ಅನ್ನು ಸಾಂಕ್ರಾಮಿಕ ರೋಗವೆಂದು 2020ರ ಮಾರ್ಚ್ ತಿಂಗಳಲ್ಲಿ WHO ಘೋಷಿಸಿತು. ಇಂತಹ ಅನೇಕ ಸಾಂಕ್ರಾಮಿಕಗಳು ಮನುಕುಲವನ್ನು ಕಾಡಿ ಹೋಗಿವೆ. ಕೊರೊನಾ ವೈರಸ್ ಹುಟ್ಟಿಗೆ ಕಾರಣವಾಗಿ ಚೀನಾ ಕುಖ್ಯಾತಿ ಪಡೆಯಿತು. ಕೋವಿಡ್ ಅಷ್ಟೇ ಅಲ್ಲ, ಮತ್ತೊಂದು ರಾಕ್ಷಸ ಸಾಂಕ್ರಾಮಿಕ ಪ್ಲೇಗ್ ಹುಟ್ಟಿಗೂ ಚೀನಾ ದೇಶವೇ ಕಾರಣ.

ಪ್ಲೇಗ್ (Plague) ಸಾಂಕ್ರಾಮಿಕ ಇತರೆ ದೇಶಗಳಿಗಿಂತ ಭಾರತವನ್ನೇ (India) ಕಾಡಿದ್ದು ಹೆಚ್ಚು. ಅದಕ್ಕಾಗಿ ಇದನ್ನು ಆಧುನಿಕ ಭಾರತದ ಮೊದಲ ಸಾಂಕ್ರಾಮಿಕ ಎಂದೇ ಕರೆಯಲಾಗುತ್ತೆ. ಏನಿದು ಪ್ಲೇಗ್? ಇದು ಹುಟ್ಟಿದ್ದೆಲ್ಲಿ? ಭಾರತಕ್ಕೆ ಕಾಲಿಟ್ಟಿದ್ದು ಹೇಗೆ? ಪ್ಲೇಗ್‌ನಿಂದ ದೇಶದಲ್ಲಾದ ದುರಂತ ಕಥನಗಳ ಬಗ್ಗೆ ತಿಳಿಯೋಣ.

plague

ಪ್ಲೇಗ್ ಹುಟ್ಟಿದ್ದೆಲ್ಲಿ?: 1855ರಲ್ಲಿ ಚೀನಾದ (China) ಯುನಾನ್‍ನಲ್ಲಿ ಕಾಣಿಸಿಕೊಂಡ ಪ್ಲೇಗ್, ಸಾಂಕ್ರಾಮಿಕ ರೋಗವಾಗಿ 1959ರಲ್ಲಿ ವಿಶ್ವದಾದ್ಯಂತ ಹಬ್ಬಿತ್ತು. ಅಷ್ಟೇ ಅಲ್ಲದೇ ವಿಶ್ವಾದ್ಯಂತ ವರ್ಷಕ್ಕೆ 200ಕ್ಕಿಂತ ಹೆಚ್ಚು ಸಾವು ನೋವು ಸಂಭವಿಸಿತ್ತು. ಈ ಅವಧಿಯಲ್ಲಿ ಪ್ರಪಂಚದಾದ್ಯಂತ 12-25 ಮಿಲಿಯನ್ ಜನರು ಸಾವನ್ನಪ್ಪಿದ್ದರು. ಸ್ಯಾನ್ ಫ್ರಾನ್ಸಿಸ್ಕೋ, ಗ್ಲಾಸ್ಗೋ ಮತ್ತು ಪೋರ್ಟೊದಂತೆಯೇ ಹಾಂಗ್ ಕಾಂಗ್ ಮತ್ತು ಮುಂಬೈಯಂತಹ ನಗರಗಳ ಮೇಲೂ ಪ್ಲೇಗ್ ದುಷ್ಪರಿಣಾಮ ಬೀರಿತ್ತು.

ಏನಿದು ಪ್ಲೇಗ್? ಬುಬೊನಿಕ್ ಪ್ಲೇಗ್ ಯೆರ್ಸಿನಿಯಾ ಪೆಸ್ಟಿಸ್ ಎಂಬ ಬ್ಯಾಕ್ಟೀರಿಯಾದಿಂದ ಈ ಪ್ಲೇಗ್ ರೋಗ ಕಾಣಿಸಿಕೊಂಡಿದೆ. ಈ ರೋಗ ಒಬ್ಬರಿಂದ ಮತ್ತೊಬ್ಬರಿಗೆ ಹೆಚ್ಚು ಹರಡುತ್ತದೆ. ಪ್ಲೇಗ್ ಬಂದವರಿಗೆ ಮೊದಲಿಗೆ ಜ್ವರ, ಶೀತ ಹಾಗೂ ತಲೆನೋವು ಕಾಣಿಸಿಕೊಳ್ಳುತ್ತದೆ. ನಂತರ ಸೋಂಕು ಹೆಚ್ಚಾದಂತೆ ಆಯಾಸ, ಹೆಚ್ಚು ನೋವು ಕಾಣಿಸಿಕೊಳ್ಳುತ್ತದೆ. ಅದಾದ ನಂತರ ಒಂದು ವಾರದೊಳಗೆ ಬಹು ಅಂಗಾಗ ವೈಫಲ್ಯದಿಂದಾಗಿ ಸೋಂಕಿತ ವ್ಯಕ್ತಿ ಮೃತಪಡಬಹುದು.

Rat 3

ಜನವರಿ 1897ರಲ್ಲಿ ಮೊದಲ ಬಾರಿಗೆ ವಿಜ್ಞಾನಿಗಳು ಈ ರೋಗವು ಇಲಿಗಳಲ್ಲಿ ಕಂಡುಬಂದಿದೆ ಎಂದು ಪತ್ತೆಹಚ್ಚಿದರು. ಅದಾದ ಬಳಿಕ ಇದೊಂದು ಸಾಂಕ್ರಾಮಿಕ ರೋಗವೆಂದು ಎಚ್ಚರಿಕೆಯನ್ನು ನೀಡಿದರು.

ಭಾರತಕ್ಕೆ ಹೇಗೆ ಬಂತು ಪ್ಲೇಗ್?: ಪ್ಲೇಗ್ ಚೀನಾದಲ್ಲಿ ಪ್ರಾರಂಭವಾಯಿತಾದರೂ ಸಮುದ್ರದ ಮೂಲಕ ಭಾರತಕ್ಕೆ ಬಂತು. ಆ ಸಮಯದಲ್ಲಿ ಬ್ರಿಟಿಷ್ ಅಧಿಕಾರಿಗಳು ಹಾಂಗ್‍ಕಾಂಗ್‍ನಿಂದ ಬರುವ ಹಡಗುಗಳಿಗೆ ಏಕಾಏಕಿ ಕ್ವಾರಂಟೈನ್ ವಿಧಿಸಿದ್ದರು. ಆದರೆ ಕ್ವಾರಂಟೈನ್ ನಿಯಮವನ್ನು ಸಡಿಲಗೊಳಿಸುತ್ತಿದ್ದಂತೆ ಭಾರತದಲ್ಲಿ ಪ್ಲೇಗ್ ಹೆಚ್ಚಾಗಿ ಕಾಣಿಸಿಕೊಳ್ಳಲು ಪ್ರಾರಂಭಿಸಿತು. ಅದರಲ್ಲೂ ಕೋಲ್ಕತ್ತಾ, ಮುಂಬೈ, ಕರಾಚಿ ಹಾಗೂ ಪುಣೆಯಲ್ಲಿ ಹೆಚ್ಚಾಗಿ ಕೇಸ್‍ಗಳು ದಾಖಲಾದವು. ತಜ್ಞರ ಪ್ರಕಾರ 19ನೇ ಶತಮಾನದ ಆರಂಭದಲ್ಲಿಯೇ ದೇಶದ ವಿವಿಧ ಭಾಗಗಳಲ್ಲಿ ಪ್ಲೇಗ್ ಏಕಾಏಕಿ ಕಾಣಿಸಿಕೊಂಡಿತು. ಆದರೆ ಆ ಸಮಯದಲ್ಲಿ ಕಾಲರಾ ನಿಯಂತ್ರಣದ ಮೇಲೆ ಹೆಚ್ಚು ಕಾಳಜಿಯನ್ನು ವಹಿಸಲಾಗಿತ್ತು.

ಪ್ಲೇಗ್‍ನಿಂದಾಗೋ ತೊಂದರೆ ಏನು?: ಪ್ಲೇಗ್ ಭೀತಿಯು ಜಾಗತಿಕವಾಗಿ ಕಾಡ್ಗಿಚ್ಚಿನಂತೆ ಹಬ್ಬಿತ್ತು. ಮುಂಬೈನಲ್ಲಿ ಪ್ಲೇಗ್ ಹೆಚ್ಚಾಗಿ ಕಾಣಿಸಿಕೊಂಡಿತು. ಇದರಿಂದಾಗಿ ಮುಂಬೈ ಅನ್ನು ಪ್ಲೇಗ್ ನಗರ ಎಂದು ಕರೆಯಲಾಯಿತು. 1897ರಲ್ಲಿ ಮುಂಬೈನಲ್ಲಿ ಸುಮಾರು 8,50,000 ಜನಸಂಖ್ಯೆಯಿತ್ತು. ಆದರೆ ಪ್ಲೇಗ್‍ನಿಂದಾಗಿ ಸುಮಾರು 3,80,000 ಜನರು ಗ್ರಾಮೀಣ ಪ್ರದೇಶಗಳಿಗೆ ವಲಸೆ ಹೋದರು. ಇದರಿಂದಾಗಿ ಗ್ರಾಮದ ಮೂಲೆ ಮೂಲೆಗಳಲ್ಲೂ ಪ್ಲೇಗ್ ಹರಡಿತು.

ಅಷ್ಟೇ ಅಲ್ಲದೇ ಧಾನ್ಯದ ವ್ಯಾಪಾರದಿಂದಲೂ ಪ್ಲೇಗ್ ಹರಡಿತು. ಧಾನ್ಯದ ಅಂಗಡಿಗಳಿಗೆ ಇಲಿಗಳು ಮುತ್ತಿಗೆ ಹಾಕುತ್ತಿದ್ದವು. ಇದರಿಂದಾಗಿ 1897ರ ಅಂತ್ಯದ ವೇಳೆಗೆ ಪ್ಲೇಗ್ ಪಂಜಾಬ್‍ನವರೆಗೂ ಹಬ್ಬಿತ್ತು. ಅಷ್ಟೇ ಅಲ್ಲದೇ ಪಂಜಾಬ್‍ನಲ್ಲಿ ಹೆಚ್ಚಿನ ಸಾವು- ನೋವುಗಳು ಸಂಭವಿಸಿದವು.

ಹೇಗಿತ್ತು ಬ್ರಿಟಿಷ್ ಅಧಿಕಾರಿಗಳ ಸ್ಪಂದನೆ: ಪ್ಲೇಗ್ ಮುಂಬೈನಲ್ಲಿ ವ್ಯಾಪಕವಾಗಿ ಹಬ್ಬುತ್ತಿದ್ದಂತೆ ಸ್ವಚ್ಛತೆ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಲು ಪ್ರಾರಂಭಿಸಿದರು. ನಂತರ ಸ್ಥಳೀಯರಿಗೆ ಬಲವಂತವಾಗಿ ತಪಾಸಣೆ ಮಾಡಿಸುವುದು, ಪ್ಲೇಗ್ ಕಂಡುಬಂದಲ್ಲಿ ಆಸ್ಪತ್ರೆಗೆ ಸೇರಿಸಲಾಯಿತು. ಈ ವಿಚಾರವಾಗಿ ಕೆಲವೊಮ್ಮೆ ಅಧಿಕಾರಿಗಳು ಹಾಗೂ ಸ್ಥಳೀಯರ ನಡುವೆ ಘರ್ಷಣೆಯೂ ನಡೆಯಿತು. ಅಲ್ಲದೇ ಅಧಿಕಾರಿಗಳು ಎಲ್ಲಾ ರೈಲು ನಿಲ್ದಾಣ ಹಾಗೂ ಬಂದರುಗಳಲ್ಲಿ ವೈದ್ಯಕೀಯ ತಪಾಸಣೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ದೇಶದಲ್ಲಿ ಅನೇಕ ಕಡೆಗಳಲ್ಲಿ ಗಲಭೆಗಳು ಉಂಟಾಯಿತು.

rAT 2

ಆದರೆ 1900ರ ಹೊತ್ತಿಗೆ ಪರಿಸ್ಥಿತಿ ಬದಲಾಗತೊಡಗಿತು. ಈ ಸಂದರ್ಭದಲ್ಲಿ ಪ್ಲೇಗ್ ವಿರುದ್ಧ ಹೋರಾಡಲು ಅನೇಕ ಔಷಧಿ, ಚುಚ್ಚುಮದ್ದುಗಳನ್ನು ಕಂಡುಹಿಡಿಯಲಾಯಿತು. ಆದರೆ ಈ ಲಸಿಕೆಯನ್ನು ಸಾರ್ವಜನಿಕರಿಗೆ ನೀಡುವುದು ಅಷ್ಟು ಸುಲಭವಾಗಿರಲಿಲ್ಲ. ಲಸಿಕೆ ಬಗ್ಗೆ ಅನೇಕ ವದಂತಿಗಳು ಹರಡಿತ್ತು. ಲಸಿಕೆಯಿಂದಾಗಿ ಜನರ ಲೈಂಗಿಕ ಶಕ್ತಿಗಳು ನಾಶವಾಗುತ್ತದೆ ಎಂಬ ವದಂತಿ ಹೆಚ್ಚಾಗಿ ಹರಡಿತು. ಇದನ್ನೂ ಓದಿ: PublicTV Explainer: ಇರಾನ್‌ನಲ್ಲಿ ಹಿಜಬ್‌ ವಿರುದ್ಧದ ಹೋರಾಟದ ಹೊತ್ತಲ್ಲೇ ನೂರಾರು ಶಾಲಾ ವಿದ್ಯಾರ್ಥಿನಿಯರಿಗೆ ವಿಷವಿಕ್ಕಿದ ದುರುಳರು – ಏನಾಗ್ತಿದೆ ಅಲ್ಲಿ?

ಪ್ಲೇಗ್ ಕ್ಷೀಣಿಸಿದ್ದು ಹೇಗೆ?: ಭಾರತದಲ್ಲಿ 20ನೇ ಶತಮಾನದ ಆರಂಭದಲ್ಲಿ ಅದು ಸಂಪೂರ್ಣವಾಗಿ ಕಣ್ಮರೆಯಾಯಿತು. 1990ರ ನಂತರ ರಷ್ಯನ್ ಫ್ರೆಂಚ್ ಬ್ಯಾಕ್ಟೀರಿಯಾಲಜಿಸ್ಟ್ ವಾಲ್ಡೆಮರ್ ಹಾಫ್ಕಿನ್ ಅಭಿವೃದ್ಧಿ ಪಡಿಸಿದ ಲಸಿಕೆಯೂ ಹೆಚ್ಚಾಗಿ ಪ್ರಚಲಿತಕ್ಕೆ ಬಂತು. ಮರಣ ಪ್ರಮಾಣವನ್ನು ಸುಮಾರು 80 ಪ್ರತಿಶತದಷ್ಟು ಕಡಿಮೆ ಮಾಡಿತು. ಇಲಿಗಳ ಹತ್ಯೆ ಮಾಡಿದಾಗ ಈ ರೊಗವು ಮತ್ತಷ್ಟು ಕಡಿಮೆಯಾಯಿತು.

ಪ್ಲೇಗ್ ಆಯ್ತು, ಕೊರೊನಾ ಆಯ್ತು. ಈ ಕರಾಳತೆಯಿಂದ ಜನರು ಹೊರಬಂದು ನಿಟ್ಟುಸಿರು ಬಿಡುವ ಹೊತ್ತಿನಲ್ಲೇ ಹೆಚ್3ಎನ್2 ವೈರಸ್ ಭೀತಿ ಆವರಿಸಿದೆ. ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾರ್ಗಸೂಚಿಯನ್ನು ಹೊರಡಿಸಿದ್ದು, ಜನತೆಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಇದನ್ನೂ ಓದಿ: PublicTV Explainer: ಕರಗುತ್ತಿವೆ ಹಿಮಸರೋವರಗಳು – ಭಾರತ, ಪಾಕಿಸ್ತಾನದ ಜನರಿಗೆ ಕಾದಿದೆ ಪ್ರವಾಹದ ಅಪಾಯ!

TAGGED:CoronaH3N2plaguewhoಕೊರೊನಾಪ್ಲೇಗ್ಸಾಂಕ್ರಾಮಿಕ ರೋಗಹೆಚ್3ಎನ್2
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

Pradeep Eshwar
Bengaluru City

ಉದ್ಯೋಗಾಂಕ್ಷಿಗಳು ಬಿಜೆಪಿ ಮಾತು ಕೇಳಿ FIR ಹಾಕಿಸಿಕೊಳ್ಳಬೇಡಿ: ಪ್ರದೀಪ್ ಈಶ್ವರ್

Public TV
By Public TV
11 minutes ago
Chikkaballapura Resort Death
Chikkaballapur

ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಮಹಿಳೆ ದಾರುಣ ಸಾವು

Public TV
By Public TV
37 minutes ago
PM Narendra Modi greeted by Israeli Prime Minister Benjamin Netanyahu on landing in Israel
Latest

ವಿಮಾನ ನಿಲ್ದಾಣಕ್ಕೆ ತೆರಳಿ ಮೋದಿಯನ್ನು ಸ್ವಾಗತಿಸಿದ ಇಸ್ರೇಲ್‌ ಪ್ರಧಾನಿ ನೆತನ್ಯಾಹು

Public TV
By Public TV
46 minutes ago
Health Minister Dinesh Gundu Rao Defends Using Urdu For Governemnt Invitation
Latest

ಉರ್ದುವಿನಲ್ಲಿ ಸರ್ಕಾರಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಿದ್ರೆ ತಪ್ಪೇನು? – ದಿನೇಶ್‌ ಗುಂಡೂರಾವ್‌

Public TV
By Public TV
2 hours ago
HD Devegowda
Bengaluru City

ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಬಗ್ಗೆ ಬಿಜೆಪಿ ತೀರ್ಮಾನ ಮಾಡಲಿ: ದೇವೇಗೌಡ

Public TV
By Public TV
2 hours ago
Pradeep Eshwar 5
Bengaluru City

ಆರೋಗ್ಯ ಇಲಾಖೆ ಕಾರ್ಯಕ್ರಮದಲ್ಲಿ ಉರ್ದು ಬಳಕೆ ಮಾಡಿದ್ರೆ ಖಂಡಿಸುತ್ತೇನೆ: ಪ್ರದೀಪ್ ಈಶ್ವರ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?