ಸಾಮಾನ್ಯವಾಗಿ ಬಿಗ್ ಬಾಸ್ (Bigg Boss) ಮನೆಯಲ್ಲಿ ಪ್ರೇಮ ಸಲ್ಲಾಪಗಳೇ ಕೇಳಿ ಬರುವುದು ಕಾಮನ್. ಸಣ್ಣಪುಟ್ಟ ಮನಸ್ತಾಪ, ಕಿರಿಕಿರಿ ನಡುವೆಯೂ ತೀರಾ ಹೊಡೆದಾಡಿಕೊಳ್ಳುವ ಮಟ್ಟಕ್ಕೆ ಯಾರೂ ಹೋಗುವುದಿಲ್ಲ. ಹಾಗೊಂದು ವೇಳೆ ತೀರಾ ಅತಿರೇಕಗಳು ನಡೆದಾಗ ಅಂತಹ ಸ್ಪರ್ಧಿಗಳನ್ನು ಮನೆಯಿಂದ ಹೊರ ಹಾಕಲಾಗತ್ತೆ. ಈ ಹಿಂದಿ ಪ್ರಥಮ್ (Pratham)ಮೇಲೆ ಹುಚ್ಚ ವೆಂಕಟ್ (Venkat) ಹಲ್ಲೆ ಮಾಡಿದಾಗ, ವೆಂಕಟ್ ಅವರನ್ನು ಮನೆಯಿಂದ ಆಚೆ ಕಳುಹಿಸಲಾಗಿತ್ತು. ಅದು ಬಿಗ್ ಬಾಸ್ ನಿಯಮ. ಇದೀಗ ಅಂತಹದ್ದೇ ಘಟನೆ ತಮಿಳು ಬಿಗ್ ಬಾಸ್ ನಿಂದ ಬಂದಿದೆ.
ಕಿರುತೆರೆ ಲೋಕದ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಆಗಿರುವುದರಿಂದ, ಬಿಗ್ ಬಾಸ್ ಮನೆಯಲ್ಲಿ ಇರುವವರು ಎಚ್ಚರಿಕೆಯಿಂದ ಇರಬೇಕಾಗತ್ತೆ. ಆದರೆ, ತಮಿಳಿನಲ್ಲಿ ಅದೆಲ್ಲವನ್ನೂ ಗಾಳಿಗೆ ತೂರಿ ಕಿತ್ತಾಡಿಕೊಂಡಿದ್ದಾರೆ ಬಿಗ್ ಬಾಸ್ ಮನೆಯ ಸದಸ್ಯರಾದ ಅಜೀಂ ಮತ್ತು ಆಯೇಷಾ. ಈ ಗಲಾಟೆ ಯಾವ ಮಟ್ಟಿಕ್ಕೆ ಹೋಗಿದೆ ಎಂದರೆ, ಜಗಳ ಹಿಂಸಾಚಾರಕ್ಕೆ ತಿರುಗಿದ್ದು, ಶೋ ಮೇಲೆ ಭಾರೀ ಆಕ್ರೋಶ ಕೂಡ ವ್ಯಕ್ತವಾಗುತ್ತಿದೆ. ಇದನ್ನೂ ಓದಿ:ಜ್ಯೂ.ಎನ್ಟಿಆರ್ ಭೇಟಿ ಮಾಡಿ ಕಣ್ಣೀರಿಟ್ಟ ಜಪಾನ್ ಫ್ಯಾನ್ಸ್
ತಮಿಳಿನಲ್ಲಿ (Tamil) ಬಿಗ್ ಬಾಸ್ ಸೀಸನ್ 6 ಶುರುವಾಗಿದೆ. ಕಮಲ್ ಹಾಸನ್ ಈ ರಿಯಾಲಿಟಿ ಶೋ ನಡೆಸಿಕೊಡುತ್ತಾರೆ. ಎರಡು ವಾರಗಳಿಂದ ಸ್ಪರ್ಧಿಗಳ ಸಖತ್ ಮನರಂಜನೆಯನ್ನೇ ಕೊಡುತ್ತಿದ್ದರು. ಆದರೆ, ಎರಡು ದಿನಗಳ ಹಿಂದೆ ಅಜೀಂ (Azim) ಮತ್ತು ಆಯೇಷಾ (Ayesha) ನಡುವಿನ ಕಿತ್ತಾಟ ತಾರಕಕ್ಕೇರಿ, ಅನಾಹುತವೇ ನಡೆದು ಹೋಗಿದೆ. ಮಹಿಳಾ ಸ್ಪರ್ಧಿಗಳನ್ನು ಅಜೀಂ ಕೆಟ್ಟ ಭಾಷೆಯಿಂದ ನಿಂದಿಸಿದ ಎನ್ನುವ ಕಾರಣಕ್ಕಾಗಿ ಆಯೇಷಾ ಸಿಟ್ಟಿಗೆದ್ದಿದ್ದಾರೆ. ಕೋಪದಿಂದ ಶೂ (Shoo) ತಗೆದು ಅಜೀಂ ಮೇಲೆ ಎಸೆದಿದ್ದಾರೆ.
ತಮಿಳು ಬಿಗ್ ಬಾಸ್ ಮನೆಯಲ್ಲಿ ಈ ಘಟನೆ ಭಾರೀ ಆಘಾತವನ್ನು ಮೂಡಿಸಿದೆ. ಮನೆಯ ಸದಸ್ಯರು ದಂಗಾಗಿದ್ದಾರೆ. ಆಯೇಷಾ ಬೇರೆ ರೀತಿಯಲ್ಲಿ ಹೇಳಬಹುದಿತ್ತು ಎಂದೂ ಕೆಲವರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಆದರೆ, ಆಯೇಷಾ ಮಾತ್ರ ತಮ್ಮ ನಿರ್ಧಾರ ಸರಿ ಇದೆ ಎಂದೇ ವಾದಿಸುತ್ತಿದ್ದಾರೆ. ಇಂಥದ್ದೊಂದು ಘಟನೆ ನಡೆಯಬಾರದಿತ್ತು, ನಡೆದು ಹೋಗಿದೆ. ವಾರಾಂತ್ಯದ ಎಪಿಸೋಡ್ ನಲ್ಲಿ ಕಮಲ್ ಹಾಸನ್ ಈ ಘಟನೆಯ ಬಗ್ಗೆ ಏನು ಹೇಳುತ್ತಾರೆ, ಯಾವ ನಿರ್ಧಾರ ತಗೆದುಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕು.