ಬೆಂಗಳೂರು: ಹಬ್ಬದ ಸಂಭ್ರಮದಲ್ಲಿ ಮಧ್ಯರಾತ್ರಿ ಮಾರಕಾಸ್ತ್ರ ಹಿಡಿದು ವ್ಹೀಲಿಂಗ್ ಮಾಡಿದ್ದ ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ.
ಇದೇ ತಿಂಗಳ 13ರಂದು ಮಧ್ಯರಾತ್ರಿ ಶಬ್ ಎ ಬಾರತ್ ಹಬ್ಬದ ಪ್ರಯುಕ್ತ 25ಕ್ಕೂ ಹೆಚ್ಚು ಮಂದಿ ಕೆಜಿ ಹಳ್ಳಿಯ ನೂರ್ ಮಸೀದಿ ಬಳಿ ಸೇರಿದ್ದರು. ಈ ವೇಳೆ ರೀಲ್ಸ್ ಹುಚ್ಚಿಗಾಗಿ ಅರ್ಫಾತ್, ಸಾಹಿಲ್ ಸೇರಿದಂತೆ ಇನ್ನಿತರರು ಸೇರಿ ವ್ಹೀಲಿಂಗ್ ಪ್ಲ್ಯಾನ್ ಮಾಡಿದ್ದಾರೆ.ಇದನ್ನೂ ಓದಿ: ಅಮೆರಿಕದ ಎಫ್ಬಿಐಗೆ ಗುಜರಾತ್ ಮೂಲದ ಕಾಶ್ ಪಟೇಲ್ ಬಾಸ್ – ನೇಮಕವಾದ ಬೆನ್ನಲ್ಲೇ ಬಿಗ್ ವಾರ್ನಿಂಗ್
Advertisement
Advertisement
ಪ್ಲ್ಯಾನ್ ಮಾಡಿದ ಪುಂಡರ ಗ್ಯಾಂಗ್ ಕೆಜಿ ಹಳ್ಳಿಯ ಮೇನ್ರೋಡ್ನಲ್ಲಿ ತ್ರಿಬಲ್ ರೈಡಿಂಗ್ನಲ್ಲಿ ಹೋಗಿದ್ದಾರೆ. ಅಲ್ಲಿಂದ ಹೊಸಕೋಟೆ ಟೋಲ್ವರೆಗೂ ಹೋಗಿ ಮತ್ತೆ ಅದೇ ರೀತಿ ಕೆಜಿ ಹಳ್ಳಿಗೆ ವಾಪಸ್ ಆಗಿದ್ದಾರೆ. ಏರಿಯಾಗಳಲ್ಲಿ ರ್ಯಾಶ್ ಡ್ರೈವ್ ಮಾಡ್ತಿದ್ದ ಟೀಂ ಆ ಮಧ್ಯರಾತ್ರಿ ಲಾಂಗ್ ಹಿಡಿದು ವ್ಹೀಲಿಂಗ್ ಮಾಡಿತ್ತು.
Advertisement
ಬೆಂಗಳೂರಿನಲ್ಲಿ ಪೊಲೀಸರ ಭಯವೇ ಇಲ್ಲ
ರಾಜಧಾನಿಯಲ್ಲಿ ಮಿತಿಮೀರಿದ ಪುಂಡರ ಹಾವಳಿ – ಮಧ್ಯರಾತ್ರಿ ಮಾರಕಾಸ್ತ್ರ ಹಿಡಿದು ಬೈಕ್ ವ್ಹೀಲಿಂಗ್ https://t.co/IAseq1MzJA#Bengaluru #BikeWheeling #KRPuram #BengaluruPolice pic.twitter.com/HFCXflAMBg
— PublicTV (@publictvnews) February 20, 2025
Advertisement
ಹಬ್ಬದ ಪ್ರಯುಕ್ತ ಪೂರ್ವ ವಿಭಾಗದಲ್ಲಿ ಹೆಚ್ಚು ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಿಕೊಳ್ಳಲಾಗಿತ್ತು. ಆದರೂ ಕೂಡ ಪುಂಡರ ಗ್ಯಾಂಗ್ ಮಾರಕಾಸ್ತ್ರ ಹಿಡಿದು ರ್ಯಾಶ್ ಡ್ರೈವ್ ಮಾಡಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ತಮ್ಮ ಫೇಸ್ಬುಕ್ ಪೇಜ್ನಲ್ಲಿ ಪೋಸ್ಟ್ ಮಾಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಬೆಂಗಳೂರು ಪೊಲೀಸರ ವಿರುದ್ಧ ಟೀಕೆ ವ್ಯಕ್ತವಾಗಿತ್ತು.
ಸದ್ಯ ಐದು ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸ್ ಕಮಿಷನರ್, ಉಳಿದವರಿಗಾಗಿ ಹುಡುಕಾಟ ನಡೆಸುವಂತೆ ಸೂಚನೆ ನೀಡಿದ್ದು, ತನಿಖೆ ಮುಂದುವರೆದಿದೆ. ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಹೆಬ್ಬಾಳ್ಕರ್ ಅಪಘಾತ ಕೇಸ್ – ಗುದ್ದಿ ಪರಾರಿಯಾದ ಕ್ಯಾಂಟರ್ಗಾಗಿ ತೀವ್ರ ಹುಡುಕಾಟ