– ಸಿಡಿಲಿಗೆ ಬಲಿಯಾದ ಎತ್ತು
ಬಳ್ಳಾರಿ: ವಿಜಯನಗರ (Vijayanagara) ಜಿಲ್ಲೆಯ ಹಲವೆಡೆ ಸುರಿದ ಗುಡುಗು ಸಹಿತ ಭಾರಿ ಮಳೆಗೆ (Rain) ಹಲವು ಅವಾಂತರ ಸೃಷ್ಟಿಯಾಗಿವೆ. ಮಳೆಯಿಂದ ಜಿಲ್ಲೆಯ ಕೆಲವೆಡೆ ಪಪ್ಪಾಯ (Papaya), ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳು ಹಾಳಾಗಿವೆ. ಮತ್ತೊಂದೆಡೆ ಸಿಡಿಲಿಗೆ ಜಮೀನನಲ್ಲಿ ಕಟ್ಟಿ ಹಾಕಿದ್ದ ಎತ್ತು ಬಲಿಯಾಗಿದೆ.
ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮರದೇವರಗುಡ್ಡ ಗ್ರಾಮದಲ್ಲಿ ಮಳೆಗೆ ಪಪ್ಪಾಯ, ಅಡಿಕೆ ಸೇರಿ ತೋಟಗಾರಿಕೆ ಬೆಳೆ ಸಂಪೂರ್ಣ ನಾಶವಾಗಿದೆ. ಕಟಾವಿಗೆ ಬಂದಿದ್ದ ಪಪ್ಪಾಯ ಬೆಳೆ ಕಳೆದುಕೊಂಡು ರೈತರು ಕಂಗಾಲಾಗಿದ್ದಾರೆ. ರೈತ ಬೀರಪ್ಪ ತನ್ನ 4 ಎಕರೆ ಜಮೀನಿನಲ್ಲಿ, ಲಕ್ಷಾಂತರ ಹಣ ಖರ್ಚು ಮಾಡಿ ಪಪ್ಪಾಯ ಬೆಳೆದಿದ್ದ. ಇದೀಗ ಲಕ್ಷಾಂತರ ಮೌಲ್ಯದ ಬೆಳೆ ಕಳೆದುಕೊಂಡಿರುವ ರೈತ ದಿಕ್ಕು ತೋಚದಂತಾಗಿದ್ದಾನೆ. ಇದನ್ನೂ ಓದಿ: ಸಂಪುಟ ಪುನಾರಚನೆ ಸುಳಿವು ಇದೆ: ಪರಮೇಶ್ವರ್
ಇನ್ನೊಂದೆಡೆ ಕೂಡ್ಲಿಗಿ ತಾಲೂಕಿನ ಗುಣಸಾಗರ ಗ್ರಾಮದಲ್ಲಿ ರೈತ ಈರಣ್ಣ ಎನ್ನುವವರಿಗೆ ಸೇರಿದ್ದ ಎತ್ತು ಸಿಡಿಲಿಗೆ ಬಲಿಯಾಗಿದೆ. ಜಮೀನಿನಲ್ಲಿ ಎತ್ತುಗಳನ್ನ ಕಟ್ಟಿ ಹಾಕಿದ್ದ ವೇಳೆ ಸಿಡಿಲಿಗೆ ಇಂದು ಎತ್ತು ಮೃತಪಟ್ಟಿದೆ. ಕೆಲವು ಅವಾಂತರಗಳ ನಡುವೆಯೂ ಜಿಲ್ಲೆಯಲ್ಲಿ ಸುರಿದ ಉತ್ತಮ ಮಳೆ ರೈತರಲ್ಲಿ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಇದನ್ನೂ ಓದಿ: ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ

