ಬೆಂಗಳೂರು: ತಿಗಳರಪಾಳ್ಯದ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದ್ದು, ಮಗ ಮಧುಸಾಗರ್ ನಿಂದಲೇ ತಂದೆ ಶಂಕರ್ ಕೊಲೆಗೆ ಸ್ಕೆಚ್ ನಡೆದಿತ್ತು ಎಂಬ ಮಾಹಿತಿಯೊಂದು ಹೊರಬಿದ್ದಿದೆ.
ಹೌದು. ಮಧುಸಾಗರ್ ಹಾಗೂ ಶಂಕರ್ ಫೈಟ್ಗೆ ಮತ್ತೊಂದು ಟ್ವಿಸ್ಟ್ ದೊರೆತಿದೆ. ಆತ್ಮಹತ್ಯೆಗೂ ಮುಂಚೆ ನಾಲ್ವರು ಡೆತ್ ನೋಟ್ ಬರೆದಿದ್ದರು. ಸದ್ಯ ಡೆತ್ ನೋಟ್ ನಲ್ಲಿರುವ ವಿಚಾರಗಳು ಒಂದೊಂದಾಗಿಯೇ ಹೊರಬರುತ್ತಿವೆ. ಇದನ್ನೂ ಓದಿ: ನಾಲ್ವರು ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- 9 ತಿಂಗಳ ಕಂದಮ್ಮನನ್ನು ಕತ್ತು ಹಿಸುಕಿ ಕೊಂದಿದ್ದ ತಾಯಿ
ಇತ್ತ ತಂದೆ ಶಂಕರ್ ಕೊಲೆಗೆ ಮಗ ಮಧುಸಾಗರ್ ಸ್ಕೆಚ್ ಹಾಕಿದ್ದ ಎಂಬುದು ಸದ್ಯದ ಮಾಹಿತಿ. ತನ್ನನ್ನು ಕೊಲೆ ಮಾಡಲು ಮಗ ಸ್ಕೆಚ್ ಹಾಕಿರುವ ವಿಚಾರವನ್ನು ಸ್ವತಃ ಶಂಕರ್ ಅವರು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ. ಸದ್ಯ ಶಂಕರ್ ಕೊಟ್ಟ ಈ ಮಾಹಿತಿಗೂ, ಸಿಕ್ಕ ಟೆಕ್ನಿಕಲ್ ಸಾಕ್ಷಿಗೂ ತಾಳೆಯಾಗುತ್ತಿರುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ನನ್ನ ಮಗ ಡೆತ್ ನೋಟ್ನಲ್ಲಿ ಹೇಳಿರುವುದೆಲ್ಲಾ ಸುಳ್ಳು: ಶಂಕರ್
ಸೆಪ್ಟೆಂಬರ್ 12 ರಂದು 10 ಲಕ್ಷ ಕೊಡ್ತೇನೆ ಬಾ ಅಂತ ಮಗ ಶಂಕರ್ ಗೆ ಮೆಸೇಜ್ ಹಾಕಿದ್ದ. ಮೆಸೇಜ್ಗೆ ರಿಪ್ಲೈ ಮಾಡದಿದ್ದಾಗ ಮಧುಸಾಗರ್ ತನ್ನ ತಂದೆಗೆ 3 ಬಾರಿ ಕಾಲ್ ಮಾಡಿದ್ದ. ಕೊನೆ ಕರೆ ವೇಳೆ ಕೊಲೆ ಮಾಡುವುದಾಗಿ ಬೆದರಿಸಿದ್ದ. ಅಮ್ಮ-ಅಕ್ಕಂದಿರು ಹೋದ್ಮೇಲೆ ಅಪ್ಪನನ್ನು ಬಿಡೋದ್ ಬೇಡ ಅಂತ ತೀರ್ಮಾನಿಸಿದ್ದ. ಮಗನ ಮಾತು ನಂಬಿ ನಾನು ಮನೆಗೆ ಹೋಗಿದ್ರೆ ಅಂದೇ ಕೊಲೆ ಆಗುತ್ತಿದ್ದೆ ಎಂದು ಹಲ್ಲೇಗೆರೆ ಶಂಕರ್ ಪೊಲೀಸರ ಮುಂದೆ ಹೇಳಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ಐವರು ಆತ್ಮಹತ್ಯೆ ಪ್ರಕರಣ- ಶಂಕರ್ ಮನೆಯಲ್ಲಿ 15 ಲಕ್ಷ ನಗದು, ಎರಡು ಕೆಜಿಯಷ್ಟು ಚಿನ್ನಾಭರಣ ಪತ್ತೆ