ಚಾಮರಾಜನಗರ: ಶುಕ್ರವಾರ ಬೆಳ್ಳಂಬೆಳಗ್ಗೆ ದಂಪತಿಗೆ ಹುಲಿ (Tiger) ರಾಯನ ದರ್ಶನವಾಗಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ವಲಯದ ಮೂಳೆಹೊಳೆ ಬಳಿ ಹುಲಿ ಪ್ರತ್ಯಕ್ಷವಾಗಿದೆ. ದಂಪತಿ ಕೇರಳ (Kerala) ದಿಂದ ಕರ್ನಾಟಕಕ್ಕೆ ಕಾರಿನಲ್ಲಿ ಬರುವಾಗ ದಾರಿ ಮಧ್ಯೆ ಹುಲಿ ಕಾಣಿಸಿಕೊಂಡಿದೆ. ಇದನ್ನೂ ಓದಿ: ನಿಮ್ಮ ಮುಖ್ಯಮಂತ್ರಿಯನ್ನು ನೀವೇ ಆರಿಸಿ – ಗುಜರಾತ್ನಲ್ಲಿ ಕೇಜ್ರಿವಾಲ್ ಅಭಿಯಾನ
ಹುಲಿಯನ್ನು ಕಂಡು ದಂಪತಿ ಗಾಬರಿಗೊಂಡಿದ್ದಾರೆ. ಅಲ್ಲದೆ ಕೂಡಲೇ ತಮ್ಮ ಮೊಬೈಲ್ ನಲ್ಲಿ ಹುಲಿಯ ಫೋಟೋ ಹಾಗೂ ವೀಡಿಯೋ ಸೆರೆಹಿಡಿದಿದ್ದಾರೆ. ಹುಲಿ ರಸ್ತೆ ದಾಟಿ ಕಾಡಿನೊಳಗೆ ಸಾಗುವ ದೃಶ್ಯ ಕ್ಯಾಮರದಲ್ಲಿ ಸೆರೆಯಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.