ಆಪರೇಷನ್ ಸಿಂಧೂರ | ಬೆಂಗ್ಳೂರಿನ ಚಿನ್ನಸ್ವಾಮಿ ಸ್ಟೇಡಿಯಂನ ಸುತ್ತ ಪೊಲೀಸರ ಹದ್ದಿನ ಕಣ್ಣು

Public TV
1 Min Read
Chinnaswamy Stadium

ಬೆಂಗಳೂರು: ಆಪರೇಷನ್ ಸಿಂಧೂರ(Operation Sindoor) ಪ್ರತೀಕಾರದ ಬೆನ್ನಲ್ಲೇ ದೇಶಾದ್ಯಂತ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಇದೀಗ ಐಪಿಎಲ್ ಮ್ಯಾಚ್ ಹಿನ್ನೆಲೆ ಚಿನ್ನಸ್ವಾಮಿ ಸ್ಟೇಡಿಯಂನ(Chinnaswamy Stadium) ಸುತ್ತಲೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

Chinnaswamy Stadium

ಪ್ರಮುಖ ಸ್ಥಳಗಳು ಹಾಗೂ ಜನಕೇಂದ್ರಿತ ಸ್ಥಳಗಳಲ್ಲಿ ಟೈಟ್ ಸೆಕ್ಯುರಿಟಿ ಮಾಡಿಕೊಳ್ಳುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇದೀಗ ಪೊಲೀಸರು ಎಲ್ಲಾ ಕಡೆಗಳಲ್ಲಿ ಹೆಚ್ಚಿನ ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ. ಇದನ್ನೂ ಓದಿ: ಐಪಿಎಲ್‌ನಿಂದ ಪಡಿಕ್ಕಲ್ ಔಟ್ – ಮತ್ತೊಬ್ಬ ಕನ್ನಡಿಗನಿಗೆ ಮಣೆ ಹಾಕಿದ ಆರ್‌ಸಿಬಿ

ಐಪಿಎಲ್ ಮ್ಯಾಚ್ ಹಿನ್ನೆಲೆ ಚಿನ್ನಸ್ವಾಮಿ ಸ್ಟೇಡಿಯಂನ ಪ್ರತೀ ಗೇಟ್ ಬಳಿಯೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಮೂರು ಪಾಳಿಗಳಲ್ಲಿ 70ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೇ 13ರಂದು ಆರ್‌ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಪಂದ್ಯ ನಡೆಯಲಿದೆ.

Share This Article