Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಡಿಕೆಶಿ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ: ಬೊಮ್ಮಾಯಿ

Public TV
Last updated: January 8, 2025 3:46 pm
Public TV
Share
2 Min Read
Basavaraj Bommai 1
SHARE

– ಸಿಎಂ ಭ್ರಷ್ಟಾಚಾರ ನಿಯಂತ್ರಿಸಲು ಮುಂದಾದ್ರೆ ಕುರ್ಚಿಗೆ ಕಂಟಕವಾಗೋ ಆತಂಕ ಎಂದ ಮಾಜಿ ಸಿಎಂ

ಬೆಂಗಳೂರು: ಡಿಕೆ ಶಿವಕುಮಾರ್ (DK Shivakumar) ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳಬೇಗುದಿ ಆರಂಭದಿಂದಲೂ ಇದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಯಾವಾಗ ಒಡೆಯುತ್ತದೆ ಎನ್ನುವ ಪ್ರಶ್ನೆ ನಿರ್ಮಾಣವಾಗಿದ್ದು, ಕಾಲ ಸನ್ನಿಹಿತವಾಗಿದೆ. ಇದು ನಿರೀಕ್ಷಿತ ಬೆಳವಣಿಗೆ, ಇದರಲ್ಲಿ ಬಹಳ ಮುಖ್ಯ ವಿಚಾರ ಡಿಕೆಶಿ ಅವರ ಸಹನೆ, ಅವರು ತಮ್ಮ ವ್ಯಕ್ತಿತ್ವಕ್ಕೆ ವಿರುದ್ಧವಾಗಿ ಬಹಳ ಸಹನೆ ಪ್ರದರ್ಶನ ಮಾಡುತ್ತಿದ್ದಾರೆ. ಅದು ಅವರ ಮುತ್ಸದ್ದಿತನವೋ? ಹೈಕಮಾಂಡ್ ಸೂಚನೆಯೋ ನೋಡಬೇಕು. ಅವರ ಸಹನೆಯ ಕಟ್ಟೆ ಯಾವಾಗ ಒಡೆಯುತ್ತದೆ ಅನ್ನುವುದು ಮುಖ್ಯವಾಗುತ್ತದೆ. ಪ್ರಕ್ರಿಯೆ ಆರಂಭವಾಗಿದ್ದು, ಕಾಲ ಯಾವಾಗ ಬರುತ್ತದೆ ಎಂದು ನೋಡಬೇಕು ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ಡಿನ್ನರ್ ಸಭೆ ರದ್ದಾಗಿಲ್ಲ, ಪ್ರಧಾನ ಕಾರ್ಯದರ್ಶಿ ಕರೆ ಮೇರೆಗೆ ಮುಂದೂಡಿಕೆಯಷ್ಟೇ – ಯಾರ ವಿರೋಧವೂ ಇಲ್ಲ: ಪರಮೇಶ್ವರ್

ಕಾಂಗ್ರೆಸ್ ಮೇಲಿನ ಕಮಿಷನ್ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಸರ್ಕಾರ ಎಲ್ಲದರಲ್ಲಿ ಕಮಿಷನ್, ಭ್ರಷ್ಟಾಚಾರ ನಡೆಸುತ್ತಿದೆ. ಇದರಿಂದ ಜನ ಹೈರಾಣಾಗಿದ್ದಾರೆ. ಅಬಕಾರಿ ಗುತ್ತಿಗೆದಾರರು, ಪಿಡಬ್ಲ್ಯೂಡಿ, ನೀರಾವರಿ ಇಲಾಖೆಯ ಗುತ್ತಿಗೆದಾರರು ಕಷ್ಟ ಅನುಭವಿಸುತ್ತಿದ್ದಾರೆ. ಜನಸಾಮಾನ್ಯರು ರೋಸಿ ಹೋಗಿದ್ದಾರೆ. ಮಧ್ಯಮ ವರ್ಗದವರು ಹೈರಾಣಾಗಿದ್ದಾರೆ. ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಒಂದು ಸೈಟ್ ತೆಗೆದುಕೊಳ್ಳಲಾಗದ ವಾತಾವರಣವನ್ನು ಸರ್ಕಾರ ನಿರ್ಮಾಣ ಮಾಡಿದೆ. ಎಸ್‌ಸಿ, ಎಸ್ಟಿ ಬೋರ್‌ವೆಲ್‌ಗಳಿಗೂ ಕಮಿಷನ್ ಪಡೆಯುತ್ತಿದ್ದಾರೆ. ಭ್ರಷ್ಟಾಚಾರ ಪದೇ ಪದೇ ಮುನ್ನೆಲೆಗೆ ಬರುತ್ತಿದೆ. ಇದನ್ನು ಸಿಎಂ ನಿರಾಕರಿಸಿರಬಹುದು, ಅವರಿಗೆ ಹಿಡಿತ ಕೈತಪ್ಪಿರಬಹುದು, ಅವರೇ ಭಾಗಿಯಾಗಿರಬಹುದು ಅಥವಾ ಅದರ ಬಗ್ಗೆ ಮಾತನಾಡಿದರೆ ಅಧಿಕಾರಕ್ಕೆ ಧಕ್ಕೆ ಬರುತ್ತದೆ ಎನ್ನುವ ಭಾವನೆ ಮೂಡಿದೆ. ಸರ್ಕಾರದಲ್ಲಿ ಒಂದೊಂದು ಇಲಾಖೆಯಲ್ಲಿ ಒಂದೊಂದು ರೀತಿಯ ಪರ್ಸೆಂಟ್ ಕಮಿಷನ್ ಇದೆ. ಇಷ್ಟೇ ಇದೆ ಅಂತ ಹೇಳಲು ಆಗುವುದಿಲ್ಲ. ಆದರೆ, ಕುಮಾರಸ್ವಾಮಿಯವರು ಹೇಳಿರುವುದು ಭ್ರಷ್ಟಾಚಾರ ಮಿತಿಮೀರಿದೆ ಎಂದು ಕಿಡಿಕಾಡಿದರು.

ಕಾಂಗ್ರೆಸ್‌ನಲ್ಲಿ ಡಿನ್ನರ್ ಮೀಟಿಂಗ್‌ಗಳು ಅವರ ಆಂತರಿಕ ವಿಚಾರ, ಈ ಬಗ್ಗೆ ಹೆಚ್ಚು ವಿಶ್ಲೇಷಣೆ ಮಾಡುವುದಿಲ್ಲ. ಆದರೆ, ಆಡಳಿತ ಯಂತ್ರ ಕುಸಿದಿದೆ. ಇದರಿಂದ ಸಾಮಾನ್ಯ ಜನರು ತೊಂದರೆ ಅನುಭವಿಸುವಂತಾಗಿದೆ. ತಾಯಂದಿರು ಸಾಯುತ್ತಿದ್ದಾರೆ. ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸರಿಯಾಗಿ ದೊರೆಯುತ್ತಿಲ್ಲ. ಅಂಗನವಾಡಿ ಕಾರ್ಯಕರ್ತರು ಸರಿಯಾಗಿ ಗೌರವಧನ ಪಡೆಯುತ್ತಿಲ್ಲ. ನಾವು ಪ್ರತಿಪಕ್ಷವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್ ದೆಹಲಿಯಲ್ಲಿ ಮಹಿಳೆಯರಿಗೆ ಪ್ಯಾರಿದೀದಿ ಯೋಜನೆ ಘೋಷಣೆ ಮಾಡಿರುವುದರಿಂದ ಅಲ್ಲಿನ ಜನರು ನಂಬುವುದಿಲ್ಲ. ಈಗಾಗಲೇ ಗ್ಯಾರಂಟಿ ಹೆಸರಿನಲ್ಲಿ ಹಿಮಾಚಲ ಪ್ರದೇಶ, ತೆಲಂಗಾಣ, ಕರ್ನಾಟಕವನ್ನು ದಿವಾಳಿ ಮಾಡಿದ್ದಾರೆ. ಅವರು ಅಧಿಕಾರಕ್ಕೆ ಬಂದರೆ ದೆಹಲಿಯನ್ನೂ ದಿವಾಳಿ ಮಾಡುತ್ತಾರೆ. ಹೀಗಾಗಿ ಜನರು ಕಾಂಗ್ರೆಸನ್ನು ನಂಬುವುದಿಲ್ಲ ಎಂದರು.

ಬಿಜೆಪಿಯಲ್ಲೂ ಭೋಜನ ಕೂಟ ನಡೆಯುತ್ತಿದಿಯಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾವು ಆಗಾಗ ಒಟ್ಟಿಗೆ ಊಟ ಮಾಡುತ್ತೇವೆ. ಅದರಲ್ಲಿ ಮಹತ್ವ ಏನು ಇಲ್ಲ. ರಾಜ್ಯ ಬಿಜೆಪಿಯಲ್ಲಿನ ಗೊಂದಲಗಳ ಬಗ್ಗೆ ಪಕ್ಷದ ಹೈಕಮಾಂಡ್ ಗಮನ ಹರಿಸಿದೆ. ಈ ತಿಂಗಳಲ್ಲಿ ಸರಿ ಹೋಗಲಿದೆ. ಒಳ್ಳೆಯ ರೀತಿಯಲ್ಲಿ ಎಲ್ಲವೂ ಬಗೆಹರಿಯುವ ವಾತಾವರಣವನ್ನು ಹೈಕಮಾಂಡ್ ತೀರ್ಮಾನಿಸಲಿದೆ ಎಂದು ತಿಳಿಸಿದರು.ಇದನ್ನೂ ಓದಿ: ಭಯೋತ್ಪಾದನೆ ಜಾಗತಿಕ ಶಾಂತಿಗೆ ದೊಡ್ಡ ಬೆದರಿಕೆಯಾಗಿದೆ – ವಿದೇಶಾಂಗ ಸಚಿವ ಜೈಶಂಕರ್

TAGGED:Basavaraj Bommaibjpcm siddaramaiahcongressDK Shivakumarಕಾಂಗ್ರೆಸ್ಡಿಕೆ ಶಿವಕುಮಾರ್ಬಸವರಾಜ ಬೊಮ್ಮಾಯಿಬಿಜೆಪಿಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Kamal Haasan 2
ಕಮಲ್ ಹಾಸನ್ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ
1 hour ago
Shivarajkumar Kamal Haasan
ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ
9 hours ago
darshan 1
ವಿದೇಶಕ್ಕೆ ಶೂಟಿಂಗ್‌ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ – ಮೇ 30ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
12 hours ago
RASHMIKA
ಸೀರೆಯಲ್ಲಿ ಮಿಂಚು ಬಳ್ಳಿಯಂತೆ ಕಂಗೊಳಿಸಿದ ರಶ್ಮಿಕಾ – ವಿಜಯ್‌ ಕ್ಲಿಕ್‌ ಮಾಡಿದ್ದು ಅಂದ್ರು ಫ್ಯಾನ್ಸ್‌!
13 hours ago

You Might Also Like

Bhima River 1
Belgaum

ಭೀಮಾ ನದಿ ತೀರದಲ್ಲಿ ಪ್ರವಾಹದ ಆತಂಕ – ನದಿಗಿಳಿಯದಂತೆ ಜಿಲ್ಲಾಡಳಿತ ಸೂಚನೆ

Public TV
By Public TV
10 minutes ago
Hemavati River
Districts

ಹಾಸನದಲ್ಲಿ ತಗ್ಗಿದ ಮಳೆ ಅಬ್ಬರ – ಹೇಮಾವತಿ ಒಳಹರಿವಿನಲ್ಲಿ ಇಳಿಕೆ

Public TV
By Public TV
22 minutes ago
Snehamayi Krishna 2
Districts

MUDA Scam| ತನಿಖಾಧಿಕಾರಿ ಬದಲಾವಣೆಗೆ ನ್ಯಾಯಾಲಯಕ್ಕೆ ಅರ್ಜಿ

Public TV
By Public TV
33 minutes ago
elon musk and donald trump
Latest

ಟ್ರಂಪ್‌ ನೀತಿಯನ್ನು ಟೀಕಿಸಿದ ಬೆನ್ನಲ್ಲೇ DOGE ಮುಖ್ಯಸ್ಥ ಪಟ್ಟದಿಂದ ಇಳಿದ ಮಸ್ಕ್‌

Public TV
By Public TV
52 minutes ago
Chikkamagaluru murder
Chikkamagaluru

ಪತ್ನಿಯನ್ನು ಕೊಂದು ನಾಪತ್ತೆಯಾಗಿದ್ದ ಪತಿ, ಮುಳ್ಳಯ್ಯನಗಿರಿ ಕಾಡಿನಲ್ಲಿ ಬಂಧನ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 29-05-2025

Public TV
By Public TV
16 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?