ಟಿಪ್ಪರ್‌ಗೆ ಕಾರು ಡಿಕ್ಕಿ- ಒಂದೇ ಕುಟುಂಬದ ನಾಲ್ವರ ದುರ್ಮರಣ

Public TV
1 Min Read
sarjapura police station

ಬೆಂಗಳೂರು: ಕಾರು ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ದುರಂತ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆ ಮತ್ತು ಸರ್ಜಾಪುರ ರಸ್ತೆಯಲ್ಲಿ ನಡೆದಿದೆ.

ಸರ್ಜಾಪುರ ರಸ್ತೆಯ ಕಾನ್ಪಿಡೆಂಟ್ ಅಪಾಟ್‌ರ್ಮೆಂಟ್‌ ಬಳಿ ಅಪಘತ ನಡೆದಿದೆ. ಅಂಜನಿ ಯಾದವ್(31), ನೇಹಾಯಾದವ್(28), ದ್ರುವ(2), ಶುಭ್ರ ಸಂತೋಷ್(29) ಮೃತ ದುರ್ದೈವಿಗಳು. ಸಂತೋಷ್(29), ಮಗಳು ಸಾನ್ವಿ(2) ಗಂಭೀರ ಗಾಯಗೊಂಡಿದ್ದಾರೆ.

ANE ACCIDENT

ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಜನಿ ಯಾದವ್ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದು, ಅವರೇ ಕಾರನ್ನು ಚಲಾಯಿಸುತ್ತಿದ್ದರು ಎನ್ನಲಾಗಿದೆ. ತಡರಾತ್ರಿ ಸ್ನೇಹಿತರೊಂದಿಗೆ ಊಟ ಮುಗಿಸಿ ಮನೆಗೆ ಬರುತ್ತಿದ್ದಾಗ ಎದುರುಗಡೆ ಬರುತ್ತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಕಾರಿನ ಅತೀ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಸರ್ಜಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share This Article