ಅಮರಾವತಿ: ತಾಯಿಯ ಅಕ್ರಮ ಸಂಬಂಧದಿಂದ ಬೇಸತ್ತ ಮಗಳೊಬ್ಬಳು ಆತನಿಗೆ ತಕ್ಕ ಪಾಠ ಕಲಿಸಿದ ಘಟನೆಯೊಂದು ಆಂಧ್ರಪ್ರದೇಶದ ಬಪಟ್ಟಾ ಜಿಲ್ಲೆಯ ತುಮ್ಮಲಪಾಲಂನಲ್ಲಿ ನಡೆದಿದೆ.
ರಾಮಚಂದ್ರ ರೆಡ್ಡಿ ಎಂಬಾತ 2 ವರ್ಷಗಳ ಹಿಂದೆ ಗುಂಟೂರು ಜಿಲ್ಲೆ ತೆನಾಲಿಯ ರೈಲ್ವೆ ನಿಲ್ದಾಣದಲ್ಲಿ ಕೂಲಿ ಕೆಲ ಮಾಡುತ್ತಿದ್ದನು. ಈ ವೇಳೆ ಮಹಿಳೆಗೆ ಈತನ ಪರಿಚಯವಾಗಿತ್ತು. ಈ ಪರಿಚಯವು ಇಬ್ಬರ ಪ್ರೇಮಕ್ಕೆ ತಿರುಗಿತ್ತು. ಕ್ರಮೇಣ ಇಬ್ಬರೂ ಜೊತೆಗೂಡಿ ಮದ್ಯ ಸೇವಿಸುತ್ತಿದ್ದು, ಅದರ ಅಮಲಿನಲ್ಲಿ ಇಬ್ಬರ ನಡುವೆ ದೈಹಿಕ ಸಂಪರ್ಕ ಕೂಡ ನಡೆದಿತ್ತು.
ಆದರೆ ಇತ್ತ ಮಹಿಳೆಗೆ ಈಗಾಗಲೇ ಮದುವೆಯಾಗಿದ್ದು, ಮಗಳು ಕೂಡ ಇದ್ದಾಳೆ. ಆದರೂ ರಾಮಚಂದ್ರ ಜೊತೆ ಅಕ್ರಮ ಸಂಬಂಧವನ್ನು ಹೊಂದಿದ್ದಳು. ತಾಯಿಯ ಈ ನಡವಳಿಕೆ ಮಗಳಿಗೆ ಇಷ್ಟವಾಗುತ್ತಿರಲಿಲ್ಲ. ಹೀಗಾಗಿ ತಾಯಿ-ಮಗಳ ಮಧ್ಯೆ ಇದೇ ವಿಚಾರಕ್ಕೆ ಆಗಾಗ ಜಗಳವಾಗುತಿತ್ತು.
ಒಟ್ಟಾರೆ ತಾಯಿಯ ಅಕ್ರಮ ಸಂಬಂಧವನ್ನು ನೋಡಿ ನೋಡಿ ಸಾಕಾಗಿದ್ದ ಮಗಳು ಒಮದು ಐಡಿಯಾ ಹುಡುಕಿಯೇ ಬಿಟ್ಟಳು. ಅದೇನೆಂದರೆ ರಾತ್ರಿ ಪ್ರಿಯಕರನ ಜೊತೆ ತಾಯಿ ಮಲಗಿದ್ದ ಸಂದರ್ಭದಲ್ಲಿ ಮಗಳು ತಕ್ಕ ಪಾಠ ಕಲಿಸಲು ರೆಡಿಯಾಗಿದ್ದಳು. ಅಂತೆಯೇ ಇಬ್ಬರೂ ಗಾಢ ನಿದ್ದೆಯಲ್ಲಿದ್ದ ಸಂದರ್ಭದಲ್ಲಿ ಮಗಳು ಹರಿತವಾದ ಬ್ಲೇಡ್ ತೆಗೆದುಕೊಂದು ರೆಡ್ಡಿಯ ಮರ್ಮಾಂಗವನ್ನೇ ಕತ್ತರಿಸಿದಳು. ಇದನ್ನೂ ಓದಿ: ಮೊಬೈಲ್ ಜಾಸ್ತಿ ಬಳಸಬೇಡ ಅಂದಿದ್ದಕ್ಕೆ ಯುವತಿ ಆತ್ಮಹತ್ಯೆ
ಇತ್ತ ಮರ್ಮಾಂಗ ಕಳೆದುಕೊಂಡ ರೆಡ್ಡಿ ಜೋರಾಗಿ ಕಿರುಚಿಕೊಂಡಿದ್ದಾನೆ. ನಂತರ ಆತನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಆತನನ್ನು ಬೇರೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸದ್ಯ ಈ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.