Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ಇಂದು ದಣಿದಿದ್ದಾರೆ, ನಾಳೆ ನಿವೃತ್ತಿ ಆಗ್ತಾರೆ – ಜೈರಾಮ್‌ ರಮೇಶ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿ ಇಂದು ದಣಿದಿದ್ದಾರೆ, ನಾಳೆ ನಿವೃತ್ತಿ ಆಗ್ತಾರೆ – ಜೈರಾಮ್‌ ರಮೇಶ್‌

Latest

ಮೋದಿ ಇಂದು ದಣಿದಿದ್ದಾರೆ, ನಾಳೆ ನಿವೃತ್ತಿ ಆಗ್ತಾರೆ – ಜೈರಾಮ್‌ ರಮೇಶ್‌

Public TV
Last updated: August 15, 2025 6:33 pm
Public TV
Share
4 Min Read
pm modi 79th Independence Day
SHARE

ನವದೆಹಲಿ: 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪು ಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ (PM Modi) ಮಾಡಿದ ಸ್ವಾತಂತ್ರ್ಯ ದಿನಾಚರಣೆಯ ಭಾಷಣವನ್ನ ವಿಪಕ್ಷವಾದ ಕಾಂಗ್ರೆಸ್‌ ಟೀಕಿಸಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ವನ್ನು ಸಮಾಧಾನಪಡಿಸಲು, ಮೋದಿ ಸ್ವಾತಂತ್ರ್ಯೋತ್ಸವದ ಭಾಷಣವನ್ನ ರಾಜಕೀಯಗೊಳಿಸಿದ್ದಾರೆ ಕಿಡಿ ಕಾರಿವೆ.

The PM’s speech from the ramparts of the Red Fort today was stale, hypocritical, insipid, and troubling.

The same recycled slogans about Viksit Bharat, Atmanirbhar Bharat, and “Sabka Saath, Sabka Vikas” have been heard year after year with little to show in terms of measurable…

— Jairam Ramesh (@Jairam_Ramesh) August 15, 2025

ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ (Jairam Ramesh) ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಸುದೀರ್ಘ ಪೋಸ್ಟ್‌ವೊಂದನ್ನ ಹಂಚಿಕೊಂಡಿದ್ದಾರೆ. ಮೋದಿ ಭಾಷಣವನ್ನ ಅರ್ಥಹೀನ, ಹಳಸಿದ, ನೀರಸ ಹಾಗೂ ಬೂಟಾಟಿಕೆ ಎಂದು ಕರೆದಿದ್ದಾರೆ. ಇದರೊಂದಿಗೆ ಎಸ್ಪಿ ನಾಯಕ ಅಖಿಲೇಶ್‌ ಯಾದವ್‌, ಅಸಾದುದ್ದೀನ್‌ ಓವೈಸಿ ಸೇರಿದಂತೆ ಹಲವರು ಮೋದಿ ಭಾಷಣ ಖಂಡಿಸಿದ್ದಾರೆ. ಇದನ್ನೂ ಓದಿ: ರೈತರ ಕಾವಲಿಗೆ ನಾನು ತಡೆ ಗೋಡೆಯಂತೆ ನಿಂತಿದ್ದೇನೆ – ಕೆಂಪು ಕೋಟೆಯಿಂದ ಟ್ರಂಪ್‌ಗೆ ಮೋದಿ ಖಡಕ್ ಸಂದೇಶ

भारतीय लोकतंत्र का आधार निष्पक्ष चुनाव है। डॉ अंबेडकर ने 15 जून 1949 को संविधान सभा में कहा था कि — “Franchise is a most fundamental things in a democracy. No person who is entitled to be brought into the electoral rolls….should be excluded merely as a result of prejudice….”… pic.twitter.com/ekYtlRDnLM

— Mallikarjun Kharge (@kharge) August 15, 2025

ಆರ್‌ಎಸ್‌ಎಸ್‌ ಸಮಾಧಾನಪಡಿಸಲು ಕೆಂಪು ಕೋಟೆ ಭಾಷಣ
2024ರ ಲೋಕಸಭಾ ಫಲಿತಾಂಶಗಳ ನಂತರ ನಿರ್ಣಾಯಕವಾಗಿ ದುರ್ಬಲಗೊಂಡಿರುವ ಪ್ರಧಾನಿ ಮೋದಿ, ತಮ್ಮ ಅಧಿಕಾರಾವಧಿಯ ವಿಸ್ತರಣೆಗಾಗಿ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಸಮಾಧಾನಪಡಿಸಲು ಕೆಂಪು ಕೋಟೆ (Red Fort) ಭಾಷಣವನ್ನ ಬಳಸಿಕೊಂಡಿದ್ದಾರೆ. ಪ್ರಧಾನಿಯವರ ಇಂದಿನ ಭಾಷಣದ ಅತ್ಯಂತ ತೊಂದರೆದಾಯಕ ಅಂಶವೆಂದರೆ, ಕೆಂಪುಕೋಟೆಯಿಂದ ಆರ್‌ಎಸ್‌ಎಸ್‌ನ ಹೆಸರನ್ನು ಉಲ್ಲೇಖಿಸಿರುವುದಾಗಿದೆ. ಇದು ಸಾಂವಿಧಾನಿಕ, ಜಾತ್ಯತೀತ ಗಣರಾಜ್ಯದ ಚೈತನ್ಯದ ಸ್ಪಷ್ಟ ಉಲ್ಲಂಘನೆಯಾಗಿದೆ. ಮುಂದಿನ ತಿಂಗಳು ಪ್ರಧಾನಿ ಮೋದಿ 75ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಆರ್‌ಎಸ್‌ಎಸ್‌ನ ಉಲ್ಲೇಖ ಅಧಿಕಾರದಲ್ಲಿ ಮುಂದುವರೆಯುವ ಹತಾಶ ಪ್ರಯತ್ನವಲ್ಲದೇ ಬೇರೇನೂ ಅಲ್ಲ ಎಂದಿದ್ದಾರೆ. ಇದನ್ನೂ ಓದಿ: ಸತತ 12ನೇ ಧ್ವಜಾರೋಹಣ, 103 ನಿಮಿಷ ಸುದೀರ್ಘ ಭಾಷಣ – ಇಂದಿರಾ ಗಾಂಧಿ ದಾಖಲೆ ಮುರಿದ ಮೋದಿ

ಅಲ್ಲದೇ ಚುನಾವಣಾ ಆಯೋಗದಂತಹ ನಮ್ಮ ಮೂಲಭೂತ ಸಾಂವಿಧಾನಿಕ ಸಂಸ್ಥೆಗಳ ಪತನಕ್ಕೆ ಪ್ರಧಾನಿಯೇ ಕಾರಣ ಮತ್ತು ಮಾಸ್ಟರ್ ಮೈಂಡ್ ಆಗಿದ್ದರೂ, ಏಕತೆ, ಸೇರ್ಪಡೆ ಮತ್ತು ಪ್ರಜಾಪ್ರಭುತ್ವದ ಕುರಿತು ಪ್ರಧಾನಿಯವರು ದೀರ್ಘ ಭಾಷಣ ಮಾಡಿದ್ದಾರೆ. ಚುನಾವಣಾ ಪ್ರಕ್ರಿಯೆಯ ವಿಶ್ವಾಸಾರ್ಹತೆಯ ಕುರಿತು ವಿರೋಧ ಪಕ್ಷದ ನಾಯಕರು ಎತ್ತಿದ ಮೂಲಭೂತ ಪ್ರಶ್ನೆಗಳಿಗೆ ಇನ್ನೂ ಉತ್ತರಿಸಿಲ್ಲ. ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮೂಲಕ ಲಕ್ಷಾಂತರ ಮತದಾರರನ್ನು ಮತದಾನದಿಂದ ವಂಚಿತಗೊಳಿಸಲಾಗುತ್ತಿದೆ ಎಂದು ಆಕ್ಷೇಪಿಸಿದ್ದಾರೆ. ಇದನ್ನೂ ಓದಿ: 12 ಸ್ವಾತಂತ್ರ್ಯ ಸಂಭ್ರಮಗಳಲ್ಲಿ ಭಾಗಿ; 2014-2025ರ ವರೆಗೆ ಮೋದಿ ಪೇಟ, ವಿಭಿನ್ನ ಲುಕ್‌ ನೋಡಿ..

ಸ್ವಾತಂತ್ರ್ಯ ದಿನವು ಒಂದು ದೃಷ್ಟಿಕೋನ, ಪ್ರಾಮಾಣಿಕತೆ ಮತ್ತು ಸ್ಫೂರ್ತಿಯ ಕ್ಷಣವಾಗಿರಬೇಕು. ಆದರೆ ಇಂದಿನ ಭಾಷಣವು ಸ್ವ-ಪ್ರಶಂಸೆ ಮತ್ತು ಆಯ್ದ ಕಥೆಗಳ ಮಂದ ಮಿಶ್ರಣವಾಗಿತ್ತು. ದೇಶದ ಆಳವಾದ ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ ಬಿಕ್ಕಟ್ಟು ಮತ್ತು ವೇಗವಾಗಿ ಬೆಳೆಯುತ್ತಿರುವ ಆರ್ಥಿಕ ಅಸಮಾನತೆಯ ಬಗ್ಗೆ ಯಾವುದೇ ಪ್ರಾಮಾಣಿಕ ಉಲ್ಲೇಖವಿರಲಿಲ್ಲ ಎಂದು ಟೀಕಿಸಿದರಲ್ಲದೇ ಕೊನೆಯಲ್ಲಿ ಪ್ರಧಾನಿ ಇಂದು ದಣಿದಂತೆ ಕಾಣುತ್ತಿದ್ದರು. ಅವರು ಶೀಘ್ರದಲ್ಲೇ ನಿವೃತ್ತರಾಗಲಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: Photo Gallery | ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ – ʻಆಪರೇಷನ್ ಸಿಂಧೂರʼ ಪ್ರತಿಬಿಂಬ

ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?
ಈ ಕುರಿತು ಪಕ್ಷದ ಪ್ರಧಾನ ಕಚೇರಿಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ದಾರ್ಶನಿಕ ನಾಯಕರು ಬಲವಾದ ಭಾರತಕ್ಕೆ ಅಡಿಪಾಯ ಹಾಕಿದ್ದಾರೆ. ಆದರೆ ಬಿಜೆಪಿ ಅಧಿಕಾರದಲ್ಲಿ ಉಳಿಯಲು ಯಾವುದೇ ಮಟ್ಟದ ಅನೈತಿಕತೆಗೆ ಇಳಿಯಲು ಸಿದ್ಧವಾಗಿದೆ. ಭಾರತದ ಸ್ವಾತಂತ್ರ್ಯ ಹೋರಾಟದ ಕಥೆಯು ಕಾಂಗ್ರೆಸ್ಸಿನ ಕಥೆಗೆ ಸಮಾನಾರ್ಥಕವಾಗಿದೆ. ಆದರೆ ಸ್ವಾತಂತ್ರ್ಯ ವೀರರು ದೇಶಕ್ಕಾಗಿ ಕಂಡ ಕನಸು ಈಗ ಮತ್ತಷ್ಟು ದೂರ ಸರಿಯುತ್ತಿದೆ. ಬಿಜೆಪಿ ಅಧಿಕಾರದಲ್ಲಿ ಉಳಿಯಲು ಅನೈತಿಕ ಮಾರ್ಗವನ್ನು ಅನುಸರಿಸುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹರಿಹಾಯ್ದರು. ಇದನ್ನೂ ಓದಿ: ವರ್ಷಕ್ಕೆ 5 ಸಾವಿರ ಉಳಿತಾಯ – ವಾರ್ಷಿಕ ಟೋಲ್‌ ಪಾಸ್‌ | ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ಮೋದಿ ಭಾಷಣದಲ್ಲಿ ಹೇಳಿದ್ದೇನು?
ಇಂದು ನಾನು ಒಂದು ವಿಷಯವನ್ನು ಬಹಳ ಹೆಮ್ಮೆಯಿಂದ ಉಲ್ಲೇಖಿಸಲು ಬಯಸುತ್ತೇನೆ. 100 ವರ್ಷಗಳ ಹಿಂದೆ, ಒಂದು ಸಂಸ್ಥೆ ಹುಟ್ಟಿಕೊಂಡಿತು ರಾಷ್ಟ್ರೀಯ ಸ್ವಯಂಸೇವಕ ಸಂಘ. ರಾಷ್ಟ್ರಕ್ಕೆ 100 ವರ್ಷಗಳ ಸೇವೆ ಬಹಳ ಹೆಮ್ಮೆಯ ಸುವರ್ಣ ಪುಟವಾಗಿದೆ. ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣದ ಸಂಕಲ್ಪದೊಂದಿಗೆ, 100 ವರ್ಷಗಳ ಕಾಲ ತಾಯಿ ಭಾರತಿಯ ಕಲ್ಯಾಣದ ಗುರಿಯೊಂದಿಗೆ, ಲಕ್ಷಾಂತರ ಸ್ವಯಂಸೇವಕರು ಮಾತೃಭೂಮಿಯ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಸೇವೆ, ಸಮರ್ಪಣೆ, ಸಂಘಟನೆ ಮತ್ತು ಸಾಟಿಯಿಲ್ಲದ ಶಿಸ್ತು ಇದರ ಗುರುತಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘವು ವಿಶ್ವದ ಅತಿದೊಡ್ಡ ಎನ್‌ಜಿಒ (ಸರ್ಕಾರೇತರ ಸಂಸ್ಥೆ) ಆಗಿದೆ. 100 ವರ್ಷಗಳ ಸಮರ್ಪಣೆಯ ಇತಿಹಾಸವನ್ನ ಹೊಂದಿದೆ. ಇಂದು ಕೆಂಪು ಕೋಟೆಯಿಂದ, ರಾಷ್ಟ್ರ ಸೇವೆಗೆ 100 ವರ್ಷಗಳ ಕಾಲ ಕೊಡುಗೆ ನೀಡಿದ ಎಲ್ಲಾ ಸ್ವಯಂಸೇವಕರನ್ನು ನಾನು ಗೌರವಯುತವಾಗಿ ಸ್ಮರಿಸುತ್ತೇನೆ ಎಂದು ಹೇಳಿದ್ದರು.

TAGGED:congressJairam Rameshnarendra modiRed Fortrssಆರ್‍ಎಸ್‍ಎಸ್ಕಾಂಗ್ರೆಸ್ಕೆಂಪುಕೋಟೆಜೈರಾಮ್ ರಮೇಶ್ನರೇಂದ್ರ ಮೋದಿ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Chandru Lamani 2
Districts

11 ಲಕ್ಷ ಕಮಿಷನ್‌ಗೆ ಬೇಡಿಕೆ – 2 ದಿನಗಳ ಹಿಂದೆಯೇ ಆಡಿಯೋದಲ್ಲಿ ಸಿಕ್ಕಿಬಿದ್ದಿದ್ದ ಚಂದ್ರು ಲಮಾಣಿ!

Public TV
By Public TV
6 minutes ago
Chandru Lamani BJP MLA
Crime

5 ಲಕ್ಷ ಕಮಿಷನ್‌ ಪಡೆಯುವಾಗ ಲಾಕ್‌ – ʻಲೋಕಾʼ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ

Public TV
By Public TV
37 minutes ago
Dinesh Gundu Rao 4
Bengaluru City

ರೋಗಿಗಳಿಗೆ ತೊಂದರೆ ಆಗದಂತೆ MRI, CT ಸ್ಕ್ಯಾನಿಂಗ್ ವ್ಯವಸ್ಥೆ: ದಿನೇಶ್ ಗುಂಡೂರಾವ್

Public TV
By Public TV
41 minutes ago
Ranjitha
Chikkamagaluru

ಹೋಂ ಸ್ಟೇಯಲ್ಲಿ ಯುವತಿ ಅನುಮಾನಾಸ್ಪದ ಸಾವು – ನಾಲ್ಕು ತಿಂಗಳ ಬಳಿಕ ಮಾಲೀಕನ ವಿರುದ್ಧ ಎಫ್‌ಐಆರ್‌

Public TV
By Public TV
43 minutes ago
Mohammad Siraj 1
Cricket

ಸೂಪರ್‌-8 ಗೂ ಮುನ್ನ ಟೀಂ ಇಂಡಿಯಾಕ್ಕೆ ಗಾಯದ ಚಿಂತೆ – ಪ್ರಾಕ್ಟೀಸ್‌ ವೇಳೆ ಪಾಂಡ್ಯ ಮಾಡಿದ್ದೇನು?

Public TV
By Public TV
46 minutes ago
snehamayi krishna
Bengaluru City

20 ಗಂಟೆಗಳ ವಿಚಾರಣೆ ಬಳಿಕ ಸ್ನೇಹಮಯಿ ಕೃಷ್ಣರನ್ನ ಬಿಟ್ಟು ಕಳಿಸಿದ ಸೈಬರ್ ಕ್ರೈಂ ಪೊಲೀಸರು

Public TV
By Public TV
53 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?