– ಹೃದಯಹೀನ ಸರ್ಕಾರ ಮಾಫಿಯಾ ಆಡಳಿತಕ್ಕೆ ಮುಕ್ತ ಸ್ವಾತಂತ್ರ ಕೊಟ್ಟಿದೆ ಎಂದು ಕಿಡಿ
ಕೋಲ್ಕತ್ತಾ: ಹೃದಯ ಹೀನ ತೃಣಮೂಲ ಕಾಂಗ್ರೆಸ್ಗೆ ಜನ ಸದ್ಯದಲ್ಲೇ ತಕ್ಕ ಪಾಠ ಕಲಿಸುತ್ತಾರೆ. 15 ವರ್ಷಗಳ ʻಮಹಾ ಜಂಗಲ್ ರಾಜ್ʼ ಯುಗವನ್ನ ಕೊನೆಗೊಳಿಸುತ್ತಾರೆ. ಏಕೆಂದ್ರೆ ಬಿಜೆಪಿ ಮಾತ್ರ ಬಂಗಾಳ ಅಭಿವೃದ್ಧಿಯ ಬಗ್ಗೆ ನಿಜವಾದ ಕಾಳಜಿ ಹೊಂದಿದೆ ಎಂಬುದು ಗೊತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದರು.
ಬಂಗಾಳದ ಹೂಗ್ಲಿಯ ಸಿಂಗೂರಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ನಿಜವಾದ ಬದಲಾವಣೆಯನ್ನ ಜನ ಬಯಸಿದ್ದಾರೆ, ಅದಕ್ಕಾಗಿ ಎಲ್ಲಾ ವರ್ಗದ ಜನರು ಒಟ್ಟುಗೂಡಿದ್ದಾರೆ ಎಂದರು. ಇದನ್ನೂ ಓದಿ: ಭಾರತದ Gen Z ಬಿಜೆಪಿ ಮೇಲೆ ನಂಬಿಕೆ ಇಟ್ಟಿದೆ: ಪ್ರಧಾನಿ ಮೋದಿ
কংগ্ৰেছ দলটো সকলো ঠাইতে নাকচ হৈ আহিছে।
উন্নয়নৰ কোনো স্পষ্ট এজেণ্ডা নথকাৰ বাবে মহাৰাষ্ট্ৰৰ মুখ্য নগৰসমূহত অনুষ্ঠিত হোৱা নিৰ্বাচনত তেওঁলোক সম্পূৰ্ণৰূপে পৰাস্ত হৈছে।
এনে কংগ্ৰেছ দলে কাজিৰঙা বা অসমৰ কল্যাণৰ বাবে কেতিয়াও কার্যকৰীভাৱে কাম কৰিব নোৱাৰে। pic.twitter.com/itmSVGoiGB
— Narendra Modi (@narendramodi) January 18, 2026
ಬಿಜೆಪಿ ಆಡಳಿತದಲ್ಲಿ ಬಂಗಾಳಿಗೆ ಪ್ರಾದೇಶಿಕ ಭಾಷೆಯ ಪ್ರಾಮುಖ್ಯತೆ ನೀಡಲಾಯಿತು. ದುರ್ಗಾ ಪೂಜೆಗೆ ಯುನೆಸ್ಕೋ ಪಟ್ಟಿಯಲ್ಲಿ ಸ್ಥಾನ ಸಿಗುವಂತೆ ಮಾಡಲಾಯಿತು. ದೆಹಲಿಯ ಕರ್ತವ್ಯ ಪಥ್ನಲ್ಲಿರುವ ಇಂಡಿಯಾ ಗೇಟ್ ಮುಂಭಾಗ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನೂ ಸ್ಥಾಪಿಸಲಾಯಿತು. ಆದ್ರೆ ಟಿಎಂಸಿ ಕಾಂಗ್ರೆಸ್ ಸರ್ಕಾರದೊಂದಿಗೆ ಮೈತ್ರಿ ಮಾಡಿಕೊಂಡಿದ್ದಾಗ ಇದ್ಯಾವುದನ್ನೂ ಮಾಡಲಿಲ್ಲ ಎಂದು ಕಿಡಿ ಕಾರಿದರು. ಇದನ್ನೂ ಓದಿ: ಟ್ರಂಪ್ಗೆ ತಿರುಗೇಟು – ಸದ್ದಿಲ್ಲದೇ ಅಮೆರಿಕದ ವಸ್ತುಗಳಿಗೆ 30% ತೆರಿಗೆ ಹಾಕಿದ ಭಾರತ
ಟಿಎಂಸಿ ದ್ವೇಷ ಜನರ ಮೇಲೆ ಪರಿಣಾಮ ಬೀರುತ್ತಿದೆ
ಟಿಎಂಸಿಗೆ ಬಿಜೆಪಿ ಮೇಲೆ ದ್ವೇಷ ಇದೆ. ಆದ್ರೆ ಬಿಜೆಪಿಯೊಂದಿಗಿನ ತನ್ನ ದ್ವೇಷವು ಪಶ್ಚಿಮ ಬಂಗಾಳದ ಜನರ ಮೇಲೆ ಬೀರುತ್ತಿದೆ. ಟಿಎಂಸಿಗೆ ಮೋದಿ ಮತ್ತು ಬಿಜೆಪಿಯೊಂದಿಗೆ ಭಿನ್ನ ಇರಬಹುದು, ಆದ್ರೆ ಇದು ರಾಜ್ಯದ ಅಭಿವೃದ್ಧಿ ಮೇಲೆ ಪರಿಣಾಮ ಬೀರುತ್ತಿದೆ. ಇಲ್ಲಿನ ಮೀನುಗಾರರ ಕಲ್ಯಾಣಕ್ಕಾಗಿ ಟಿಎಂಸಿ ಕೇಂದ್ರ ಬಿಜೆಪಿಯೊಂದಿಗೆ ಸಹಕರಿಸುತ್ತಿಲ್ಲ. ಆದ್ದರಿಂದ ಮೀನುಗಾರರು ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಪ್ರಯೋಜನಗಳನ್ನ ಪಡೆಯಲು ಸಾಧ್ಯವಾಗುತ್ತಿಲ್ಲ. ಇದರೊಂದಿಗೆ ಪಿಎಂ ಶ್ರೀ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನೂ ಮಮತಾ ಬ್ಯಾನರ್ಜಿ ಸರ್ಕಾರ ನಿರಾಕರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
Electrifying atmosphere at the rally in Singur! The massive support for the BJP speaks volumes against TMC’s misgovernance and politics of fear.@BJP4Bengal https://t.co/pKk2GdG8rd
— Narendra Modi (@narendramodi) January 18, 2026
ಟಿಎಂಸಿ ʻಮಹಾ ಜಂಗಲ್ ರಾಜ್ʼ ಆಡಳಿತದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ. ಅಕ್ರಮ ಒಳನುಸುಳುವಿಕೆ, ಮಾಫಿಯಾ ಆಡಳಿತಕ್ಕೆ ಮುಕ್ತ ಸ್ವಾತಂತ್ರ್ಯ ನೀಡಲಾಗಿದೆ. ಟಿಎಂಸಿ ಅಧಿಕಾರದಲ್ಲಿ ಇರೋವರೆಗೆ ಯುವಕರಿಗೆ ಗುಣಮಟ್ಟದ ಶಿಕ್ಷಣ, ಉದ್ಯೋಗ ಸಿಗೋದಿಲ್ಲ. ಬಂಗಾಳ ಜನರ ಹಿತಾಸಕ್ತಿಗೆ ವಿರುದ್ಧವಾಗಿ ವರ್ತಿಸಿದ್ದಕ್ಕಾಗಿ ಟಿಎಂಸಿ ಸರ್ಕಾರವನ್ನ ಶಿಕ್ಷಿಸಲೇಬೇಕು. ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿ ಡಬಲ್ ಎಂಜಿನ್ ಸರ್ಕಾರವನ್ನ ಅಧಿಕಾರಕ್ಕೆ ತರಬೇಕು ಎಂದು ಕರೆ ನೀಡಿದರು. ಇದನ್ನೂ ಓದಿ: ದೆಹಲಿ, ಹರಿಯಾಣದಲ್ಲಿ ಪ್ರತ್ಯೇಕ ಅಪಘಾತ – ಮೂವರು ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ
ಅಕ್ರಮ, ಅತ್ಯಾಚಾರಕ್ಕೆ ಬ್ರೇಕ್
ಬಿಜೆಪಿಗೆ ನೀವು ಹಾಕುವಂತಹ ಒಂದು ಮತ ಸಂದೇಶ್ ಖಾಲಿಯಂತಹ ಘಟನೆಗಳು ಮತ್ತೆ ಸಂಭವಿಸದಂತೆ ನೋಡಿಕೊಳ್ಳುತ್ತೆ. ಅಲ್ಲದೇ ಕಾಲೇಜುಗಳಲ್ಲಿ ಅತ್ಯಾಚಾರ, ಹಿಂಸಾಚಾರದಂತಹ ಘಟನೆಗಳಿಗೆ ಕಡಿವಾಣ ಹಾಕಲಿದೆ ಬಿಜೆಪಿ. ನೂರಾರು ಶಿಕ್ಷಕರು ಉದ್ಯೋಗದಿಂದ ವಂಚಿತರಾಗುವುದನ್ನು ತಡೆಯುತ್ತದೆ ಎಂದು ಎಂದು ಭರವಸೆ ನೀಡಿದರು.

