ಚೆನ್ನೈ: ತಮಿಳುನಾಡು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮುನ್ನವೇ ತಂಜಾವೂರಿನಲ್ಲಿ ಚುನಾವಣೆ ಪ್ರಚಾರ ನಡೆಸುತ್ತಿಸದ್ದ ವೇಳೆ ಅಭ್ಯರ್ಥಿಯೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ತಂಜಾವೂರಿನ ಅಯ್ಯಂಪೇಟ್ಟೈ 9ನೇ ವಾರ್ಡ್ನಲ್ಲಿ ಈ ಘಟನೆ ನಡೆದಿದ್ದು, ಡಿಎಂಕೆಯಿಂದ ಸ್ಪರ್ಧಿಸಿದ್ದ ಅಭ್ಯರ್ಥಿ ಡಿಎಂ ಅನಸೂಯ ಅವರು ಚುನಾವಣಾ ಪ್ರಚಾರದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: Ranji Trophy: ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದ ಯಶ್ ಧುಲ್
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಇದೇ ಫೆಬ್ರವರಿ 19ರ ಶನಿವಾರ ನಡೆಯಲಿದ್ದು, ಇಂದು ಪ್ರಚಾರಕ್ಕೆ ಕೊನೆಯ ದಿನವಾಗಿತ್ತು ಮತ್ತು ಚುನಾವಣೆಯ ಫಲಿತಾಂಶವನ್ನು ಫೆಬ್ರವರಿ 22 ರಂದು ಪ್ರಕಟಿಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ನನ್ನ ಕಣ್ಣಿಗೆ ಸೇಬು ಹಣ್ಣಿನಂತೆ ಕಾಣುವಿರಿ, ಚಿಯರ್ಸ್ ಪಪ್ಪಾ: ರವೀನಾ ಟಂಡನ್