Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೃಷಿ ಕ್ಷೇತ್ರ ಹಾಳುಗೆಡವಿದ್ದೇ ಮೋದಿ ಸಾಧನೆ: ಸಿದ್ದು ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೃಷಿ ಕ್ಷೇತ್ರ ಹಾಳುಗೆಡವಿದ್ದೇ ಮೋದಿ ಸಾಧನೆ: ಸಿದ್ದು ಕಿಡಿ

Bengaluru City

ಕೃಷಿ ಕ್ಷೇತ್ರ ಹಾಳುಗೆಡವಿದ್ದೇ ಮೋದಿ ಸಾಧನೆ: ಸಿದ್ದು ಕಿಡಿ

Public TV
Last updated: June 4, 2022 5:36 pm
Public TV
Share
3 Min Read
SIDDU MODI
SHARE

ಬೆಂಗಳೂರು: ಕೃಷಿ ಕ್ಷೇತ್ರವನ್ನು ಸಂಪೂರ್ಣ ಹಾಳುಗೆಡವಿ ಅದನ್ನು ಕಾರ್ಪೊರೇಟ್ ಬಂಡವಾಳಗಾರರ ಕಾಲಿಗೆ ತಳ್ಳಿರುವುದೇ ಪ್ರಧಾನಿ ನರೇಂದ್ರ ಮೋದಿ ಅವರ 8 ವರ್ಷದ ಸಾಧನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿರುವ ಅವರು, ಕಳೆದ 8 ವರ್ಷಗಳಲ್ಲಿ ಮೋದಿಯವರು ಹೇಳಿದ ಸುಳ್ಳುಗಳಿಗೆ ಲೆಕ್ಕವೇ ಇಲ್ಲ. ಅವುಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವುದೂ ಸೇರಿದೆ. ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಘೋಷಣೆ ಮಾಡಿದ್ದ ಮೋದಿ ಅದನ್ನು ಸಂಪೂರ್ಣ ಹಾಳುಗೆಡವಿದ್ದಾರೆ. ಇದನ್ನೂ ಓದಿ: ಪರಿಷ್ಕೃತ ಪಠ್ಯ ರದ್ದು ಮಾಡಿ, ರೋಹಿತ್ ಚಕ್ರತೀರ್ಥರನ್ನು ವಜಾಗೊಳಿಸಬೇಕು – ಸಿದ್ದರಾಮಯ್ಯ ಆಗ್ರಹ

Agriculture loan

ನ್ಯಾಷನಲ್ ಮಾದರಿ ಸಮೀಕ್ಷೆ ಪ್ರಕಾರ 2015-16 ರಲ್ಲಿ ಪ್ರತಿ ರೈತ ಕುಟುಂಬದ ವಾರ್ಷಿಕ ಆದಾಯ 96,703 ರೂಪಾಯಿಗಳಷ್ಟಿತ್ತು ಎಂದು ಅಂದಾಜಿಸಲಾಗಿದೆ. ಅಂದರೆ ಒಂದು ಕೃಷಿ ಕುಟುಂಬದ ತಿಂಗಳ ಸರಾಸರಿ ಆದಾಯ 8,000 ರೂಪಾಯಿ ಎಂದಾಯಿತು. ಈ 8 ಸಾವಿರ ರೂಪಾಯಿಗಳಲ್ಲಿ ಸರಾಸರಿ ಶೇ.43 ರಷ್ಟು ಕೂಲಿಯಿಂದ ಬರುತ್ತಿದೆ ಎಂದು ವರದಿಗಳು ಹೇಳುತ್ತಿವೆ. ಇದನ್ನೂ ಓದಿ: ಬೀದರ್ ಪ್ರವೇಶಕ್ಕೆ ಪ್ರಮೋದ್ ಮುತಾಲಿಕ್, ಆಂದೋಲನ ಶ್ರೀಗಳಿಗೆ ಬ್ಯಾನ್

MDK Agriculture Farmers 6

2022 ರಲ್ಲಿ ಇದು ದ್ವಿಗುಣಗೊಳ್ಳಬೇಕಾದರೆ 2015-16ರ ಬೆಲೆಗಳಲ್ಲಿ ಲೆಕ್ಕ ಹಾಕಿದರೆ ಸರಾಸರಿ ಪ್ರತಿ ರೈತ ಕುಟುಂಬದ ತಿಂಗಳ ಆದಾಯ 16,000 ರೂಪಾಯಿಗಳಿಗೆ ಏರಿಕೆಯಾಗಬೇಕು. ವರ್ಷಕ್ಕೆ 1,72,694 ರೂಪಾಯಿಗಳಷ್ಟಾಗಬೇಕು. ಇಂದಿನ ಬೆಲೆಗಳಲ್ಲಿ, ಹಣದುಬ್ಬರ ಸೇರಿಸಿ ಲೆಕ್ಕ ಹಾಕಿದರೆ 2.5 ರಿಂದ 2.8 ಲಕ್ಷ ರೂಪಾಯಿಗಳಾಗಬೇಕು ಅಥವಾ ತಿಂಗಳಿಗೆ 22 ರಿಂದ 25 ಸಾವಿರ ರೂಪಾಯಿಗಳಾಗಬೇಕು ಎಂದು ತಜ್ಞರು ಹೇಳುತ್ತಿದ್ದಾರೆ. ರೈತರ ಆದಾಯ ದ್ವಿಗುಣಗೊಳ್ಳಬೇಕಾಗಿದ್ದರೆ 2016 ರಿಂದಲೆ ನಿರಂತರವಾಗಿ ಕೃಷಿ ಕ್ಷೇತ್ರದ ಬೆಳವಣಿಗೆ ಪ್ರತಿ ವರ್ಷ ಸುಮಾರು ಶೇ.10.5 ರಷ್ಟು ಇರಬೇಕಿತ್ತು. ಆದರೆ ವಾಸ್ತವವಾಗಿ ಬೆಳವಣಿಗೆಯಾಗಿದ್ದು ಕೇವಲ ಶೇ.2.88 ರಷ್ಟು ಮಾತ್ರ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

NARENDRA MODI

2019-20 ರಲ್ಲಿ ಎನ್‌ಎಸ್‌ಎಸ್‌ಒ ಹಲವು ಆಯಾಮಗಳಲ್ಲಿ ಸಮೀಕ್ಷೆ ಮಾಡಿತು. ಆದರೆ ಸಮೀಕ್ಷೆಯ ವರದಿಗಳನ್ನು ಗುಪ್ತವಾಗಿ ಪರಿಶೀಲಿಸಿದ ಕೇಂದ್ರ ಸರ್ಕಾರಕ್ಕೆ, ಆ ವರದಿಯು ತನಗೆ ವ್ಯತಿರಿಕ್ತವಾಗಿದೆ ಎಂದಬು ಪರಿಗಣಿಸಿಯೇ ವರದಿ ಬಿಡುಗಡೆ ಮಾಡಲಿಲ್ಲ. ಆದರೂ ಮಾಧ್ಯಮಗಳಿಗೆ ವರದಿ ಸೋರಿಕೆಯಾಯಿತು. ಸರ್ಕಾರದ ಡೇಟಾ ನೋಡಿದರೂ ಕೂಡ ಮನಮೋಹನಸಿಂಗ್ ಅವರ ಯುಪಿಎ ಅವಧಿಯಲ್ಲಿ ಕೃಷಿಯ ಜಿವಿಎ ಬೆಳವಣಿಗೆ ದರ ಸರಾಸರಿ ಶೇ. 4.6 ಕ್ಕಿಂತ ಹೆಚ್ಚಿಗೆ ಇತ್ತು. ಮೋದಿಯವರ ಕಾಲದಲ್ಲಿ ಕೇವಲ ಶೇ. 3.3ಕ್ಕೆ ಇಳಿಕೆಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

SIDDARAMAIAH

ಇಷ್ಟೆಲ್ಲಾ ಆದರೂ ಮೋದಿ ಅವರ ಸರ್ಕಾರ ಜಾಹಿರಾತು ಕೊಟ್ಟು ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ. ಕೃಷಿಕರ ಉಳಿವಿಗಾಗಿ ಎಂಎಸ್‌ಪಿ ಹೆಚ್ಚಿಸಿದ್ದೇವೆ ಎಂದು ಹೇಳುತ್ತಾರೆ. ಇದನ್ನೂ ಓದಿ: ಹಿಂದೂಗಳ ರಕ್ಷಣೆ ಹೆಸರಲ್ಲಿ ಅಧಿಕಾರಕ್ಕೇರಿ, ಹಿಂದೂ ವಿರೋಧಿ ವರ್ತನೆ ಸರಿಯಲ್ಲ: ಮುತಾಲಿಕ್

ಮನಮೋಹನಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರ 2004 ರಿಂದ 2013-14ರ ವೇಳೆಗೆ ಹಲವಾರು ಕೃಷಿ ಉತ್ಪನ್ನಗಳಿಗೆ ಶೇ.204ರ ವರೆಗೆ ಬೆಂಬಲ ಬೆಲೆ ಹೆಚ್ಚಿಸಿದ್ದರು. ಭತ್ತದ ಮೇಲೆ ನೀಡುವ ಎಂಎಸ್‌ಪಿ ಶೇ.126 ರಷ್ಟು ಹೆಚ್ಚು ಮಾಡಿದ್ದರು. ಮೋದಿಯವರು ಈ 8 ವರ್ಷಗಳಲ್ಲಿ ಭತ್ತದ ಎಂಎಸ್‌ಪಿ ಯನ್ನು ಶೇ.44 ರಷ್ಟು ಹೆಚ್ಚಿಸಿದ್ದಾರೆ ಎಂದು ಹೇಳಿದ್ದಾರೆ.

Siddaramaiah

ತೊಗರಿಯ ಬೆಂಬಲ ಬೆಲೆಯನ್ನು ಮನಮೋಹನಸಿಂಗರು ಶೇ.204 ರಷ್ಟು ಹೆಚ್ಚಿಸಿದ್ದರೆ ಮೋದಿಯವರು ಶೇ.44 ರಷ್ಟು ಹೆಚ್ಚಿಸಿದ್ದಾರೆ. ಬಿಳಿ ಜೋಳದ ಮೇಲೆ ಶೇ.178 ರಷ್ಟು ಹೆಚ್ಚಿಸಿದ್ದರೆ ಮೋದಿಯವರ ಸರ್ಕಾರ ಕೇವಲ ಶೇ.78 ರಷ್ಟು ಹೆಚ್ಚಿಸಿದೆ. ಶೇಂಗಾ ಪರಿಸ್ಥಿತಿಯೂ ಅಷ್ಟೆ ಯುಪಿಎ ಸರ್ಕಾರ ಶೇ.163 ರಷ್ಟು ಹೆಚ್ಚಿಸಿತ್ತು. ಬಿಜೆಪಿ ಸರ್ಕಾರ ಕೇವಲ ಶೇ. 31.5 ರಷ್ಟು ಹೆಚ್ಚಿಸಿದೆ. ಹೆಸರು ಕಾಳಿನ ಮೇಲಿನ ಎಂಎಸ್‌ಪಿಯನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ಶೇ.196 ರಷ್ಟು ಹೆಚ್ಚಿಸಿದ್ದರೆ ಬಿಜೆಪಿ ಸರ್ಕಾರ ಕೇವಲ ಶೇ.56 ರಷ್ಟು ಹೆಚ್ಚಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಕಳೆದ ವರ್ಷದವರೆಗೆ 47 ಲಕ್ಷ ರೈತ ಕುಟುಂಬಗಳಿಗೆ ತಿಂಗಳಿಗೆ ನೀಡಿದ್ದು ಕೇವಲ 166 ರೂಪಾಯಿ ಮಾತ್ರ. ಇದು ಬಿಜೆಪಿಯವರ ಸಾಧನೆ. ಕೃಷಿಕರ ಆದಾಯ 8 ವರ್ಷಗಳಲ್ಲಿ ದ್ವಿಗುಣಗೊಳ್ಳುವ ಬದಲು ಅವರ ಸಾಲದ ಪ್ರಮಾಣ ದ್ವಿಗುಣಗೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

TAGGED:agriculturebjpcongressgdpnarendra modiprime ministersiddaramaiahಕಾಂಗ್ರೆಸ್ಕೃಷಿಜಿಡಿಪಿನರೇಂದ್ರಮೋದಿಪ್ರಧಾನ ಮಂತ್ರಿಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Dhurandhar Movie
ದುರಂಧರ್ ಚಿತ್ರ ಕಂಡು ಕಣ್ಣು ಕೆಂಪು ಮಾಡಿಕೊಂಡ ಪಾಕಿಸ್ತಾನ..ಏನ್ ಕಾರಣ?
Cinema Latest Top Stories
Premi Movie 2
`ಪ್ರೇಮಿ’ಗಾಗಿ ಮೊದಲ ಹಾಡು ಬಿಡುಗಡೆ
Cinema Latest Sandalwood
MB Khazima
ವಿಶ್ವ ಚಾಂಪಿಯನ್ ಖಾಜಿಮಾ ಬಯೋಪಿಕ್‌ಗೆ ಚಾಲನೆ
Cinema Latest Sandalwood South cinema Top Stories
Dhruva sarja
ರಂಗನತಿಟ್ಟು ಪಕ್ಷಿಧಾಮದ ಕಾರ್ಮಿಕರಿಗೆ ಧ್ರುವ ಸಹಾಯಹಸ್ತ – ರಿಯಲ್‌ ಹೀರೋ ಅಂದ್ರು ಫ್ಯಾನ್ಸ್‌
Cinema Latest Sandalwood Top Stories

You Might Also Like

DK Shivakumar 4
Bengaluru City

Video | ದೆಹಲಿಗೆ ಬಂದಿಳಿದ ಡಿಕೆಶಿ – ಸೋನಿಯಾ ಗಾಂಧಿ ಭೇಟಿ ಬಗ್ಗೆ ಗುಟ್ಟು ಬಿಟ್ಟುಕೊಡದ ಡಿಸಿಎಂ

Public TV
By Public TV
5 hours ago
New Year
Bengaluru City

ನ್ಯೂ ಇಯರ್‌ ಪಾರ್ಟಿಗೆ ಪಬ್‌ ಬುಕ್‌ ಮಾಡೋ ಮುನ್ನ ಎಚ್ಚರ – ಏಕೆ ಗೊತ್ತೇ?

Public TV
By Public TV
5 hours ago
Lionel Messi 2 1
Latest

ರಾಹುಲ್‌ ಗಾಂಧಿಗೆ ತನ್ನ ಜೆರ್ಸಿ ಗಿಫ್ಟ್‌ – ಸಿಎಂ ರೆಡ್ಡಿ ಜೊತೆ ಫುಟ್ಬಾಲ್ ಆಡಿದ ಮೆಸ್ಸಿ

Public TV
By Public TV
5 hours ago
Lionel Messi
Latest

1 ಗಂಟೆಯ ಕಾರ್ಯಕ್ರಮ, 22 ನಿಮಿಷಕ್ಕೆ ಮೆಸ್ಸಿ ಹೊರಟಿದ್ದೇಕೆ? – ಇಲ್ಲಿದೆ ಅಸಲಿ ಕಾರಣ

Public TV
By Public TV
6 hours ago
MB Patil
Bengaluru City

ಮಂಗಳೂರು, ವಿಜಯಪುರದಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ: ಎಂಬಿ ಪಾಟೀಲ್

Public TV
By Public TV
7 hours ago
UDF vs BJP
Latest

ತಿರುವನಂತಪುರಂ ಪಾಲಿಕೆಯಲ್ಲಿ ಬಿಜೆಪಿ ಕಮಾಲ್ – ಗ್ರಾಪಂ, ಬ್ಲಾಕ್‌, ಪುರಸಭೆಯಲ್ಲಿ ಯುಡಿಎಫ್‌ ಮೈತ್ರಿಕೂಟಕ್ಕೆ ದೊಡ್ಡ ಜಯ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?