Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಲ್ಲರನ್ನೂ ಪ್ರೀತಿಸುವುದು, ಒಟ್ಟಿಗೆ ಬಾಳುವುದು ಮಾನವೀಯತೆಯ ಗುರುತು – ಕ್ರೈಸ್ತ ನಮನ ಕಾರ್ಯಕ್ರಮದಲ್ಲಿ ಗೆಹ್ಲೋಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಲ್ಲರನ್ನೂ ಪ್ರೀತಿಸುವುದು, ಒಟ್ಟಿಗೆ ಬಾಳುವುದು ಮಾನವೀಯತೆಯ ಗುರುತು – ಕ್ರೈಸ್ತ ನಮನ ಕಾರ್ಯಕ್ರಮದಲ್ಲಿ ಗೆಹ್ಲೋಟ್

Bengaluru City

ಎಲ್ಲರನ್ನೂ ಪ್ರೀತಿಸುವುದು, ಒಟ್ಟಿಗೆ ಬಾಳುವುದು ಮಾನವೀಯತೆಯ ಗುರುತು – ಕ್ರೈಸ್ತ ನಮನ ಕಾರ್ಯಕ್ರಮದಲ್ಲಿ ಗೆಹ್ಲೋಟ್

Public TV
Last updated: December 18, 2022 9:34 pm
Public TV
Share
3 Min Read
Thawar Chand Gehlot 5
SHARE

ಬೆಂಗಳೂರು: ಭಾರತೀಯ ಸಂಸ್ಕೃತಿಯು ಯಾವಾಗಲೂ ವಿಶ್ವ ಸಹೋದರತ್ವ, ವಿಶ್ವ ಶಾಂತಿ, ಸಮಾನತೆ ಮತ್ತು ಸೌಹಾರ್ದತೆಯನ್ನು ಪ್ರೇರೇಪಿಸುತ್ತದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ಹೇಳಿದರು.

ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಫಾರ್ ಹ್ಯೂಮನ್ ರೈಟ್ಸ್ ಆಯೋಜಿಸಿದ್ದ ಕ್ರೈಸ್ತ ನಮನ (Krista Namama) ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಪ್ರಪಂಚದ ಅತ್ಯಂತ ಹಳೆಯ ನಾಗರಿಕತೆಗಳಲ್ಲಿ ಒಂದಾಗಿದೆ. ವಿವಿಧ ಧರ್ಮಗಳು, ಸಂಪ್ರದಾಯಗಳು ಮತ್ತು ಪದ್ಧತಿಗಳ ವಿಶಿಷ್ಟ ಸಂಯೋಜನೆಯಾಗಿದೆ. ಹಬ್ಬಗಳ ದೇಶ ಎಂದು ಕರೆಯಲ್ಪಡುವ ವಿಶ್ವದ ಏಕೈಕ ದೇಶ ಭಾರತ. ವಿವಿಧ ಧರ್ಮದ ಜನರು ಇಲ್ಲಿ ವಾಸಿಸುತ್ತಿದ್ದಾರೆ. ಪ್ರತಿಯೊಂದು ಧರ್ಮದ ಜನರು ತಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳ ಪ್ರಕಾರ ಹಬ್ಬವನ್ನು ಆಚರಿಸುತ್ತಾರೆ ಎಂದರು.

 

Thawar Chand Gehlot 2 1ಇಲ್ಲಿನ ಹಬ್ಬಗಳು ಭಾರತದ ವೈವಿಧ್ಯತೆ ಮತ್ತು ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಸಾರವನ್ನು ಪ್ರತಿಬಿಂಬಿಸುತ್ತವೆ. ಇವು ರಾಷ್ಟ್ರೀಯ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಪ್ರಾಮುಖ್ಯತೆಯನ್ನು ಹೊಂದಿವೆ. ಸಮಾಜವನ್ನು ಸಂಘಟಿತವಾಗಿಡುವಲ್ಲಿ ಧರ್ಮ ಮತ್ತು ಸಂಸ್ಕೃತಿಯು ಪ್ರಮುಖ ಪಾತ್ರವನ್ನು ಹೊಂದಿದೆ. ಧರ್ಮವು ಯಾವುದೇ ವ್ಯಕ್ತಿಯ ಮೇಲೆ ಧಾರ್ಮಿಕವಾಗಿ, ಸಾಮಾಜಿಕವಾಗಿ ಮತ್ತು ಆಧ್ಯಾತ್ಮಿಕವಾಗಿ ಪರಿಣಾಮ ಬೀರುತ್ತದೆ ಮತ್ತು ಅದೇ ಸಮಯದಲ್ಲಿ ಧರ್ಮವು ಸಮಾಜದಲ್ಲಿ ಒಗ್ಗಟ್ಟಿನ ಭಾವನೆಯನ್ನು ನೀಡುತ್ತದೆ ಎಂದು ಅಭಿಪ್ರಾಯಪಟ್ಟರು.

ಧರ್ಮಾತ್ಮರು ಎಲ್ಲಾ ಧರ್ಮಗಳ ಸಮಾನತೆಯನ್ನು ನಂಬುತ್ತಾರೆ. ಅವರ ಅಭಿಪ್ರಾಯದಲ್ಲಿ, ಎಲ್ಲಾ ಧರ್ಮಗಳು ಸಮಾನ ಗೌರವಕ್ಕೆ ಅರ್ಹವಾಗಿವೆ. ಎಲ್ಲರನ್ನೂ ಪ್ರೀತಿಸುವುದು ಮತ್ತು ಒಟ್ಟಿಗೆ ಬಾಳುವುದು ಮಾನವೀಯತೆಯ ಗುರುತಾಗಿದೆ. ಒಬ್ಬರ ಸ್ವಂತ ಧರ್ಮವನ್ನು ಅನುಸರಿಸುವುದು ಮತ್ತು ಇತರ ಧರ್ಮಗಳನ್ನು ಗೌರವಿಸುವುದು ಎಲ್ಲಾ ಧರ್ಮಗಳ ಸಮಾನತೆಯಾಗಿದೆ. ಇದು ಲೋಕದ ಏಳಿಗೆಗೆ ದಾರಿಯಾಗಲಿದೆ ಎಂದು ತಿಳಿಸಿದರು.

ThawarChand Gehlot 1

ಯೇಸು ಕ್ರಿಸ್ತನು ತೋರಿಸಿದ ಈ ಪವಿತ್ರ ಮಾರ್ಗವನ್ನು ಅನುಸರಿಸುವ ಅವಶ್ಯಕತೆಯಿದೆ. ಸತ್ಯ, ಪ್ರೀತಿ ಮತ್ತು ಕರುಣೆಯಿಂದ ತುಂಬಿದ ಮಾರ್ಗವನ್ನು ಅನುಸರಿಸುವವನು ಖಂಡಿತವಾಗಿಯೂ ಆಶೀರ್ವದಿಸಲ್ಪಡುತ್ತಾನೆ. ಅದರ ಮೇಲೆ ನಿಜವಾದ ಹೃದಯದಿಂದ, ಪ್ರಾಮಾಣಿಕವಾಗಿ ನಡೆಯಬೇಕಾದ ಅವಶ್ಯಕತೆಯಿದೆ ಎಂದು ಹೇಳಿದರು. ಇದನ್ನೂ ಓದಿ: ಒಂದೇ ಏಟಿಗೆ ಎರಡು ಹಕ್ಕಿ – ಬಿಜೆಪಿ `ಸಾವರ್ಕರ್’ ಅಸ್ತ್ರ ಸೀಕ್ರೆಟ್ ಏನು?

ಇಂದು ಧಾರ್ಮಿಕ ಮತ್ತು ಸಾಂಸ್ಕೃತಿಕ ಜಾಗೃತಿಯ ಅಗತ್ಯ ಹೆಚ್ಚಿದ್ದು, ಇದರ ಜವಾಬ್ದಾರಿ ನಮ್ಮ ಯುವ ಪೀಳಿಗೆ ಮೇಲಿದೆ. ಯುವಕರು ಧರ್ಮ-ಆಧ್ಯಾತ್ಮಿಕತೆ ಮತ್ತು ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ಅದನ್ನು ಜಗತ್ತಿನಲ್ಲಿ ವಿಸ್ತರಿಸುವ ಕೆಲಸ ಮಾಡಬೇಕು. ನಮ್ಮ ತತ್ತ್ವಶಾಸ್ತ್ರ, ಧರ್ಮ-ಆಧ್ಯಾತ್ಮಿಕತೆ ಮತ್ತು ಸಂಸ್ಕೃತಿಯು ಅತ್ಯಂತ ಪುರಾತನವಾಗಿರುವುದರಿಂದ ಇಂದಿಗೂ ಪ್ರಸ್ತುತವಾಗಿದೆ, ಅವುಗಳನ್ನು ಅಳವಡಿಸಿಕೊಳ್ಳಲು ಮತ್ತು ಲೋಕಕಲ್ಯಾಣದ ದಿಕ್ಕಿನಲ್ಲಿ ಪಾಲುದಾರರಾಗಬೇಕು ಎಂದು ಯುವಪೀಳಿಗೆಗೆ ಕರೆ ನೀಡಿದರು.

Thawar Chand Gehlot 1 1

ಕ್ರಿಸ್‌ಮಸ್ ಆಚರಣೆಯನ್ನು ದೇಶ ಮತ್ತು ಪ್ರಪಂಚದಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈ ಹಬ್ಬವು ಎಲ್ಲರನ್ನು ಪ್ರೀತಿಸಿ, ಎಲ್ಲರಿಗೂ ಸೇವೆ ಸಲ್ಲಿಸಲು, ಎಲ್ಲರನ್ನು ಗೌರವಿಸಲು ನಮಗೆ ಸ್ಫೂರ್ತಿ ನೀಡುತ್ತದೆ. ಇದರಿಂದ ಪ್ರೇರಣೆ ಪಡೆದು ಸಮಾಜ ಬಾಂಧವರಾದ ನಾವೆಲ್ಲರೂ ದಾನ ಸೇವೆ, ಸಮಾಜ ಸೇವೆ, ಮಾನವ ಸೇವೆಯೊಂದಿಗೆ ದೇಶ ಸೇವೆ ಮಾಡುವ ಸಂಕಲ್ಪದಿಂದ ಕೆಲಸ ಮಾಡಬೇಕು ಎಂದು ಹೇಳಿದರು. ಇದನ್ನೂ ಓದಿ: ದತ್ತಪೀಠದ ಮಾರ್ಗದಲ್ಲಿ ಮೊಳೆ – ಕೋರ್ಟ್‍ಗೆ ಶರಣಾದ ಆರೋಪಿ

ಬೆಂಗಳೂರಿನ ಆರ್ಚ್ ಬಿಷಪ್ ಮತ್ತು ಆಲ್ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ನ ಅಧ್ಯಕ್ಷ ಡಾ. ಪೀಟರ್ ಮಕಾಡೊ, ಪ್ರಾಂತೀಯ ಸುಪೀರಿಯರ್, ಸಿಸ್ಟರ್ ಬೆನೆಡಿಕ್ಟ್ ಮೇರಿ ಜೋಸೆಫ್, ಎಸ್‌ಡಿಎ ಯ ರಾಷ್ಟ್ರೀಯ ಅಧ್ಯಕ್ಷ ಪೀಟರ್, ಮಲಂಕರ ಆರ್ಥೊಡಾಕ್ಸ್ ಸಿರಿಯನ್ ಚರ್ಚ್ನ ಮೆಟ್ರೋಪಾಲಿಟನ್ ಬಿಷಪ್ ಡಾ. ಅಬ್ರಹಾಂ, ಕಾರ್ಯದರ್ಶಿ ಫ್ರಾನ್ಸಿಸ್ ಗೇಬ್ರಿಯಲ್ ಲೋಬೋ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Live Tv
[brid partner=56869869 player=32851 video=960834 autoplay=true]

TAGGED:bengaluruthawar chand gehlotಕ್ರೈಸ್ತ ನಮನಥಾವರ್ ಚಂದ್ ಗೆಹ್ಲೋಟ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

rs 500
Latest

ನೀವು ಕ್ಯಾಶ್‌ನಲ್ಲಿ ವ್ಯವಹಾರ ಮಾಡ್ತೀರಾ? ಹಾಗಿದ್ರೆ ಹೊಸ ಬದಲಾವಣೆ ಓದಿ – ಇಲ್ದಿದ್ರೆ ಬೀಳುತ್ತೆ ಭಾರೀ ದಂಡ

Public TV
By Public TV
12 minutes ago
maharani university protest
Bengaluru City

ಮೂಲಭೂತ ಸೌಕರ್ಯಕ್ಕಾಗಿ ಮಹಾರಾಣಿ ವಿವಿಯಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆ

Public TV
By Public TV
16 minutes ago
Yatnal
Bagalkot

ಚರಂತಿಮಠ ಪ್ರಚಾರಕ್ಕೆ ಯತ್ನಾಳ್‌ ಎಂಟ್ರಿ – ಬಿಎಸ್‌ವೈ ಗ್ರೀನ್‌ ಸಿಗ್ನಲ್‌

Public TV
By Public TV
42 minutes ago
Drug Arrest bengaluru
Bengaluru City

ಬಟ್ಟೆ ಮಾರಾಟ ನೆಪದಲ್ಲಿ ಡ್ರಗ್ ಪೆಡ್ಲಿಂಗ್ – ನೈಜೀರಿಯಾ ಪ್ರಜೆ ಅರೆಸ್ಟ್, 2 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ

Public TV
By Public TV
56 minutes ago
kerala bjp manifesto
Latest

ಉಚಿತ ಎಲ್‌ಪಿಜಿ, ಏಮ್ಸ್ ಆಸ್ಪತ್ರೆ, ಬಡವರಿಗೆ 3,000 ರೂ. – ಕೇರಳಕ್ಕೆ ಬಿಜೆಪಿ ಚುನಾವಣಾ ಪ್ರಣಾಳಿಕೆ ಭರವಸೆಗಳು

Public TV
By Public TV
57 minutes ago
Railway Committee
Bellary

ಬಳ್ಳಾರಿ-ಸಿರುಗುಪ್ಪ-ಸಿಂಧನೂರು ನೂತನ ರೈಲ್ವೆ ಮಾರ್ಗದ ಅನುಮೋದನೆಗೆ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?