ಬೆಂಗಳೂರು: ಮುಖ್ಯಮಂತ್ರಿ ಆಗ ಬಳಿಕ ಮೊದಲ ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಬರ್ತ್ ಡೇಯನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳದೇ ಇರಲು ನಿರ್ಧಾರ ಮಾಡಿದ್ದಾರೆ.
ಇಂದು ಹುಟ್ಟುಹಬ್ಬದ ಕಾರಣ ಸಾರ್ವಜನಿಕರು, ಅಭಿಮಾನಿಗಳು, ಕಾರ್ಯಕರ್ತರಿಗೆ ಸಿಎಂ ಸಿಗುವುದಿಲ್ಲ. ಇಡೀ ದಿನ ಸಿಎಂ ಕುಮಾರಸ್ವಾಮಿ ತಮ್ಮ ಕುಟುಂಬ ಜೊತೆ ಇರಲು ನಿರ್ಧಾರ ಮಾಡಿದ್ದಾರೆ. ಹೀಗಾಗಿ ಜೆಪಿ ನಗರದ ನಿವಾಸಕ್ಕೆ ಯಾರು ಬಾರದಂತೆ ಮನವಿ ಮಾಡಿದ್ದಾರೆ.
ಹಿತೈಷಿಗಳು, ಅಭಿಮಾನಿಗಳು ಬೆಳಗಾವಿ ಅಧಿವೇಶನದ ನಂತರ ಸಿಎಂರನ್ನ ಭೇಟಿ ಮಾಡಿ ಶುಭಾಶಯ ತಿಳಿಸಬಹುದಾಗಿದೆ. ಇದೇ ವೇಳೆ ಕಾರ್ಯಕರ್ತರು, ಅಭಿಮಾನಿಗಳು ಫ್ಲೆಕ್ಸ್, ಬ್ಯಾನರ್ ಅಳವಡಿಸದಿರುವಂತೆ ಸಿಎಂ ಮನವಿ ಮಾಡಿದ್ದಾರೆ. ಈ ಸಂಬಂಧ ಸಂದೇಶ ರವಾನೆ ಮಾಡಿರುವ ಸಿಎಂ ನಿಮ್ಮ ಶುಭ ಹಾರೈಕೆಗಳೇ ನನಗೆ ಶ್ರೀರಕ್ಷೆ, ಫ್ಲೆಕ್ಸ್ ಬ್ಯಾನರ್ ಅಳವಡಿಸಿ ಊರಿನ ಅಂದ ಹಾಳು ಮಾಡಬೇಡಿ. ಪರಿಸರ ಕಾಳಜಿ ಮೆರೆದಲ್ಲಿ ಅದೇ ಅತ್ಯುತ್ತಮ ಅಂತ ಸಂದೇಶ ರವಾನೆ ಮಾಡಿದ್ದಾರೆ.
ತಮ್ಮ ಮಗನ ಚಿತ್ರ ಸೀತಾರಾಮ ಕಲ್ಯಾಣದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಸಾಧ್ಯತೆ ಇದ್ದು, ಸೋಮಾವಾರ ಮಧ್ಯಪ್ರದೇಶ ಸಿಎಂ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ ಅಂತ ಸಿಎಂ ಕಚೇರಿಯಿಂದ ಪತ್ರಿಕಾ ಪ್ರಕಟಣೆ ಬಿಡುಗಡೆಯಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv