– ಕಂಠೀರವ ಸ್ಟುಡಿಯೋಗೆ ಅಭಿಮಾನಿಗಳ ದಂಡು
ಬೆಂಗಳೂರು: ಅಕ್ಟೋಬರ್ 29 ಕನ್ನಡಿಗರಿಗೆ ಭರಿಸಲಾಗದ ನೋವು ಕೊಟ್ಟ ದಿನ. ಚಿತ್ರರಂಗಕ್ಕೆ ತುಂಬಲಾರದ ನಷ್ಟವಾದ ದಿನ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Powerstar PunnethRajKumar) ದೈಹಿಕವಾಗಿ ದೂರವಾಗಿ ಎರಡು ವರ್ಷ ಆಗ್ತಿದೆ. ಕಂಠೀರವ ಸ್ಟೂಡಿಯೋದಲ್ಲಿ ಏನೇನು ನಡೆಯಲಿದೆ.
ಪವರ್ ಸ್ಟಾರ್ ಪುಣ್ಯ ಸ್ಮರಣೆಗೆ ಅಭಿಮಾನಿ ಬಳಗ ಸಜ್ಜಾಗಿದೆ. ನಮ್ಮ ಪವರ್ ಸ್ಟಾರ್ ನಮ್ಮ ಜೊತೆಯಲ್ಲಿದ್ದಾರೆ ಅಂತ ಅವರು ಇಷ್ಟಪಡುತ್ತಿದ್ದ ಕೆಲಸಗಳನ್ನ ಮಾಡುತ್ತಿದ್ದಾರೆ. ಎರಡನೇ ವರ್ಷದ ಪುಣ್ಯಸ್ಮರಣೆಗೆ ಅಪ್ಪು ಸ್ಮಾರಕ ರೆಡಿಯಾಗಿದೆ. ಅನ್ನದಾನ, ರಕ್ತದಾನ, ನೇತ್ರದಾನದ ಕ್ಯಾಂಪ್ ಮಾಡುತ್ತಿದ್ದಾರೆ ಅಭಿಮಾನಿಗಳು. ದೂರದ ಊರುಗಳಿಂದ ಅಭಿಮಾನಿ ದೇವರುಗಳು ಅಪ್ಪುನ ನೋಡಲು ಈಗಾಗ್ಲೇ ಹೊರಟಿದ್ದಾರೆ. ಅಪ್ಪು ನಮನ ಮತ್ತು ಪ್ರೀತಿಯ ಧ್ಯಾನ ಮಾಡಲು ಮಧ್ಯರಾತ್ರಿಯಿಂದ ಶುರುವಾಗಿದೆ. ಇದನ್ನೂ ಓದಿ: ನವೆಂಬರ್ 1ಕ್ಕೆ ಗುಡ್ ನ್ಯೂಸ್ ಕೊಡ್ತಾರಾ ಯಶ್?: ಟೈಟಲ್-ಟೀಸರ್ ರಿಲೀಸ್
ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ದೊಡ್ಮನೆ ಸದಸ್ಯರು ಅಪ್ಪು ಸ್ಮಾರಕಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಲಿದ್ದಾರೆ. ಕುಟುಂಬದವರ ಪೂಜೆ ಬಳಿಕ ಅಭಿಮಾನಿ ದೇವರುಗಳು ಅಪ್ಪುಗೆ ನಮಿಸಲಿದ್ದಾರೆ. ಕೈ ಮುಗಿದು ಸ್ಮರಿಸಲಿದ್ದಾರೆ. ಹಬ್ಬದಂತೆ ಜನ ಆ ಜಾಗದಲ್ಲಿ ಸೇರುತ್ತಾರೆ. ಹೂವು ಹಾಕಿ ಅಲಂಕಾರ ಮಾಡಿ ಕಣ್ಣುತುಂಬಿಕೊಳ್ತಾರೆ. ಅಪ್ಪು ನೀನು ನಮ್ಮನ್ನ ಬಿಟ್ಟು ಹೋಗಿದ್ದು ಮೋಸ ಮೋಸ ಮೋಸ ಅಂತ ಜನ ಇಂದಿಗೂ ಕೊರಗ್ತಾರೆ. ಅಪ್ಪು ಅಮರ ಅವರ ನೆನಪು ಅಜರಾಮರ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]