Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು ಮಹಾ ಕುಂಭಮೇಳದ ಕಡೆಯ ದಿನ – ಕೋಟ್ಯಂತರ ಜನರಿಂದ ಪುಣ್ಯಸ್ನಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಂದು ಮಹಾ ಕುಂಭಮೇಳದ ಕಡೆಯ ದಿನ – ಕೋಟ್ಯಂತರ ಜನರಿಂದ ಪುಣ್ಯಸ್ನಾನ

Latest

ಇಂದು ಮಹಾ ಕುಂಭಮೇಳದ ಕಡೆಯ ದಿನ – ಕೋಟ್ಯಂತರ ಜನರಿಂದ ಪುಣ್ಯಸ್ನಾನ

Public TV
Last updated: February 26, 2025 8:13 am
Public TV
Share
3 Min Read
maha kumbha mela
SHARE

– ಈವರೆಗೂ 64 ಕೋಟಿ ಜನರಿಂದ ಅಮೃತಸ್ನಾನ

ಪ್ರಯಾಗ್‌ರಾಜ್: ವಿಶ್ವದ ಅತಿದೊಡ್ಡ ಧಾರ್ಮಿಕ ಸಮಾವೇಶ ಮಹಾ ಕುಂಭಮೇಳ ಇಂದು ಅಂತ್ಯವಾಗಲಿದೆ. ಜನವರಿ 13 ರಿಂದ ಆರಂಭವಾಗಿದ್ದ ಈ ಧಾರ್ಮಿಕ ಹಬ್ಬ ಇಂದು ಶಿವರಾತ್ರಿಯೊಂದಿಗೆ (Maha Shivaratri) ಅಂತ್ಯವಾಗಲಿದೆ. ಈವರೆಗೂ 64 ಕೋಟಿ ಜನರು ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ. ಹಲವು ಅಡೆತಡೆಗಳ ನಡುವೆ ಮಹಾ ಕುಂಭಮೇಳ (Maha Kumbh Mela) ಹೊಸ ದಾಖಲೆ ಸೃಷ್ಟಿಸಿದೆ.

144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳ ಇಂದು ಮುಕ್ತಾಯವಾಗಲಿದೆ. ಪ್ರಪಂಚದಲ್ಲೇ ಇದೇ ಮೊದಲ ಬಾರಿಗೆ ಇಷ್ಟು ಜನ ಸೇರಿ ಹೊಸ ದಾಖಲೆ ನಿರ್ಮಾಣವಾಗಿದೆ. ಜೊತೆಗೆ ಶತಮಾನದಲ್ಲೇ ಅತ್ಯಂತ ಅಪರೂಪದ ಧಾರ್ಮಿಕ ಘಟನೆಯಾಗಿದ್ದು, ಇಂದು ಮಹಾಶಿವರಾತ್ರಿಯ ಅಂತಿಮ ಪುಣ್ಯ ಸ್ನಾನ ನಡೆಯುತ್ತಿದೆ. ಇದನ್ನೂ ಓದಿ: ಅಮೆರಿಕ | ಲಿವರ್‌ಮೋರ್‌ನ ಶಿವ-ವಿಷ್ಣು ದೇವಾಲಯದಲ್ಲಿ ನಿತ್ಯ ಆರಾಧನೆ

Maha Kumbh Mela 2

ಪ್ರಯಾಗರಾಜ್‌ನ ತ್ರಿವೇಣಿ ಸಂಗಮದಲ್ಲಿ ಮಹಾಶಿವರಾತ್ರಿಯ ಶುಭದಿನವಾದ ಇಂದು ಕೋಟ್ಯಂತರ ಭಕ್ತರು ಇಂದು ಪುಣ್ಯಸ್ನಾನ ಮಾಡುತ್ತಿದ್ದಾರೆ. ಈ ಬಾರಿ ಮಹಾಶಿವರಾತ್ರಿಯ ಶುಭ ಸಮಯದಲ್ಲಿ ಭಕ್ತರು ಸಂಗಮದಲ್ಲಿ ಪವಿತ್ರ ಸ್ನಾನ ಶುರು ಮಾಡಿದ್ದಾರೆ. ಮಕರ ರಾಶಿಯಲ್ಲಿ ಚಂದ್ರನ ಸಂಚಾರದೊಂದಿಗೆ ಶಿವ ಭಕ್ತರು ಪರಿಘ ಯೋಗದ ಸಮಯದಲ್ಲಿ ಸಂಗಮದಲ್ಲಿ ಸ್ನಾನ ಮಾಡುವ ಮೂಲಕ ಕೊನೆಯ ಸ್ನಾನ ಮಹೋತ್ಸವದ ಪುಣ್ಯ ಗಳಿಸುತ್ತಿದ್ದಾರೆ. ಇದನ್ನೂ ಓದಿ: ಶಿವರಾತ್ರಿ ವಿಶೇಷ: ಹಿಂದೂಗಳ ಆದ್ಯ ತೀರ್ಥಕ್ಷೇತ್ರ – ಮಾರಿಷಸ್‌ನ ಮಂಗಲ ಮಹಾದೇವ ಶಿವಾಲಯ!

ಪಂಚಾಂಗದ ಪ್ರಕಾರ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಚತುರ್ದಶಿ ಇಂದು ಬೆಳಗ್ಗೆ 11:08ಕ್ಕೆ ಪ್ರಾರಂಭವಾಗಿ ಗುರುವಾರ ಬೆಳಗ್ಗೆ 08:54ರವರೆಗೆ ಇರಲಿದೆ. ಮಹಾಶಿವರಾತ್ರಿಯಂದು ಸ್ನಾನ ಮಾಡಲು ಶುಭ ಸಮಯ ನಾಳೆ ಬೆಳಗ್ಗೆ 9 ಗಂಟೆಯವರೆಗೆ ಇರಲಿದೆ. ಇಂದು ಮಹಾಶಿವರಾತ್ರಿಯ ದಿನದಂದು ಬ್ರಹ್ಮ ಮುಹೂರ್ತವು ಬೆಳಗ್ಗೆ 05:09ಕ್ಕೆ ಪ್ರಾರಂಭವಾಗಿದ್ದು ಸಂಜೆ 5:59ಕ್ಕೆ ಕೊನೆಗೊಳ್ಳುತ್ತದೆ. ಇಂದು ಮಹಾ ಕುಂಭಮೇಳದ ಕೊನೆಯ ಸ್ನಾನವು ಮಹಾ ಶಿವರಾತ್ರಿಯ ದಿನದಂದು ಬ್ರಹ್ಮ ಮುಹೂರ್ತದಲ್ಲಿ ಪ್ರಾರಂಭವಾಗಿದ್ದು, ಬ್ರಹ್ಮ ಮುಹೂರ್ತದ ಸಮಯದಲ್ಲಿ ಸಂಗಮ ಸ್ನಾನ ಮಾಡುವುದು ವಿಶೇಷವಾಗಿ ಫಲಪ್ರದವಾಗಿದೆ. ಈ ದಿನದಂದು ಪೂಜೆ ಮಾಡುವುದರಿಂದ ಶಿವನ ವಿಶೇಷ ಆಶೀರ್ವಾದ ಸಿಗುತ್ತದೆ ಎಂಬ ನಂಬಿಕೆ ಇದೆ. ಇದನ್ನೂ ಓದಿ: ಮಹಾ ಶಿವರಾತ್ರಿ: ಆಡಂಬರವಿಲ್ಲ, ಅಲಂಕಾರ ಪ್ರಿಯನಲ್ಲ.. ಭಕ್ತಿಯಿಂದ ಭಜಿಸಿ ಶಿವನ

Maha Kumbh Mela Prayagraj

ಅತಿದೊಡ್ಡ ಧಾರ್ಮಿಕ ಸಭೆಯ ಭಾಗವಾಗಲು ಪ್ರಯಾಗ್‌ರಾಜ್‌ಗೆ ಭಕ್ತರ ದಂಡೇ ಹರಿದು ಬರುತ್ತಿದೆ. ರೈಲುಗಳು, ವಿಮಾನಗಳು ಮತ್ತು ರಸ್ತೆ ಮಾರ್ಗಗಳು ತುಂಬಿ ತುಳುಕುತ್ತಿವೆ. ಶಿವರಾತ್ರಿಯ ದಿನದಂದು ಪವಿತ್ರ ಸ್ನಾನ ಮಾಡಲು ಭಕ್ತರ ಅನುಕೂಲಕ್ಕಾಗಿ ಮಾಡಲಾದ ವಿಶೇಷ ವ್ಯವಸ್ಥೆಗಳ ಭಾಗವಾಗಿ, ಅಧಿಕಾರಿಗಳು ಲಕ್ನೋ ಮತ್ತು ಪ್ರತಾಪ್‌ಗಢದಿಂದ ಬರುವ ಯಾತ್ರಾರ್ಥಿಗಳಿಗೆ ಫಾಫಮೌ ಘಾಟ್ ಅನ್ನು ಗೊತ್ತುಪಡಿಸಿದ್ದಾರೆ. ಆದರೆ ಅರೈಲ್ ಘಾಟ್ ಅನ್ನು ರೇವಾನ್, ಬಂದಾ, ಚಿತ್ರಕೂಟ ಮತ್ತು ಮಿರ್ಜಾಪುರದ ಜನರಿಗೆ ಕಾಯ್ದಿರಿಸಲಾಗಿದೆ. ಕೌಶಂಬಿಯಿಂದ ಬರುವ ಭಕ್ತರಿಗಾಗಿ ಸಂಗಮ್ ಘಾಟ್ ಅನ್ನು ಗೊತ್ತುಪಡಿಸಲಾಗಿದೆ. ಇದನ್ನೂ ಓದಿ:  ಶಿವನ ಕಣ್ಣೀರಿಂದಲೇ ಶಿವಾಲಯವಾದ ಕಥೆ – ಪಾಕಿಸ್ತಾನದ ಕಟಾಸ್‌ ರಾಜ್‌ಬಗ್ಗೆ ನಿಮಗೆಷ್ಟು ಗೊತ್ತು?

ಭದ್ರತಾ ವ್ಯವಸ್ಥೆಗಳ ವಿಷಯದಲ್ಲಿ, ಇಡೀ ಮೇಳ ಪ್ರದೇಶದಲ್ಲಿ ಯಾವುದೇ ವಾಹನಗಳನ್ನು ಅನುಮತಿಸಲಾಗುತ್ತಿಲ್ಲ. ಆದರೆ ಪಾಸ್‌ಗಳನ್ನು ಹೊಂದಿರುವ ವಾಹನಗಳಿಗೆ ಮಾತ್ರ ಗೊತ್ತುಪಡಿಸಿದ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲುಗಡೆ ಮಾಡಲು ಅವಕಾಶವಿರುತ್ತದೆ. ಪ್ರಯಾಗ್‌ರಾಜ್‌ಗೆ ಹೋಗುವ ಎಲ್ಲಾ ಪ್ರಮುಖ ಹೆದ್ದಾರಿಗಳು ಮತ್ತು ಮಾರ್ಗಗಳಲ್ಲಿ ಮೋಟಾರ್ ಬೈಕ್‌ಗಳಲ್ಲಿ ಪೊಲೀಸರ 40 ತಂಡಗಳನ್ನು ನಿಯೋಜಿಸಲಾಗಿದೆ. ಸುಗಮ ಮತ್ತು ಸುರಕ್ಷಿತ ಸಂಚಾರಕ್ಕಾಗಿ, ಮಾರ್ಗ ಬದಲಾವಣೆಗಳನ್ನು ರಚಿಸಲಾಗಿದೆ. ಇದನ್ನೂ ಓದಿ: ಪಂಚಾಯತ್ ದುಡ್ಡಲ್ಲಿ ಗ್ರಾ.ಪಂ ಸದಸ್ಯರ ಮಹಾ ಕುಂಭಮೇಳ ಟ್ರಿಪ್ ಆರೋಪ – ಪ್ರವಾಸದ ಮಧ್ಯೆ ಉಪಾಧ್ಯಕ್ಷೆ ಪುತ್ರನ ಸಾವು

ಪ್ರಯಾಗ್‌ರಾಜ್ ಅನ್ನು ಸಂಪರ್ಕಿಸುವ ಏಳು ರಸ್ತೆ ಮಾರ್ಗಗಳಲ್ಲಿ ಹೆಚ್ಚುವರಿ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರ ಮಟ್ಟದ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ. ಕುಂಭಮೇಳದ ಕೊನೆಯ ದಿನ ಮಹಾಶಿವರಾತ್ರಿಯೊಂದಿಗೆ ಹೊಂದಿಕೆಯಾಗುವುದರಿಂದ, ನಗರದ ಎಲ್ಲಾ ಶಿವ ದೇವಾಲಯಗಳಿಗೆ ಭಕ್ತರಿಗೆ ಭೇಟಿ ನೀಡಲು ಅವಕಾಶ ನೀಡಲಾಗುತ್ತಿದೆ. ಅಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಈಗಾಗಲೇ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ರಾಷ್ಟ್ರೀಯ ವಿಜ್ಞಾನ ದಿನಾಚರಣೆ| ಶಾಲಾ, ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ: ಎನ್‌.ಎಸ್‌ ಭೋಸರಾಜು

ಮಹಾಕುಂಭದಲ್ಲಿ ಕಾಲ್ತುಳಿತ ಸಂಭವಿಸಿ 30 ಮಂದಿ ಸಾವನ್ನಪ್ಪಿದ್ದು ಮತ್ತು ಮೂರು ಬಾರಿ ಅಗ್ನಿ ಅವಘಡಗಳು ಸಂಭವಿಸಿದ್ದು ಹೊರತುಪಡಿಸಿ 45 ದಿನಗಳ ಮಹಾ ಕುಂಭ ಸಾಂಗಾವಾಗಿ ನಡೆದಿದೆ. ಇದನ್ನೂ ಓದಿ: ಮಹಾ ಶಿವರಾತ್ರಿಯಂದು ಉಪವಾಸ ಮಾಡುವುದ್ಯಾಕೆ?

TAGGED:Amrit Snanmaha kumbh melamaha shivaratriPrayagrajuttar pradeshಉತ್ತರಪ್ರದೇಶಪ್ರಯಾಗ್ರಾಜ್ಮಹಾ ಕುಂಭಮೇಳಮಹಾ ಶಿವರಾತ್ರಿ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

PG
Bengaluru City

ಬೆಂಗಳೂರು | ನಿಯಮ ಪಾಲಿಸದ 89 ಪಿಜಿಗಳಿಗೆ ದಂಡ!

Public TV
By Public TV
39 minutes ago
KSRTC BUS
Chikkamagaluru

ಬೆಂಗ್ಳೂರಿಂದ ಶೃಂಗೇರಿಗೆ ಹೊರಟಿದ್ದ ಎರಡು ಸರ್ಕಾರಿ ಬಸ್‌ಗಳು ಸೀಜ್‌!

Public TV
By Public TV
1 hour ago
Piyush Goyal
Latest

ಭಾರತದ ಜವಳಿ ಉತ್ಪನ್ನಗಳಿಗೂ ಅಮೆರಿಕದಲ್ಲಿ 0% ಸುಂಕ: ಪಿಯೂಷ್ ಗೋಯಲ್

Public TV
By Public TV
2 hours ago
Red Rose 4
Chikkaballapur

ಪ್ರೆಮಿಗಳ ದಿನಾಚರಣೆ – ಕೆಂಪು ಗುಲಾಬಿಗೆ ಭಾರೀ ಬೇಡಿಕೆ; ಚಿಕ್ಕಬಳ್ಳಾಪುರದಿಂದ ವಿದೇಶಗಳಿಗೂ ರಪ್ತು!

Public TV
By Public TV
2 hours ago
BNP BANGLA
Latest

Bangladesh Election Result | ಬಹುಮತದ ಗಡಿ ದಾಟಿದ ಬಿಎನ್‌ಪಿ – ಅಧಿಕೃತ ಘೋಷಣೆಯೊಂದೇ ಬಾಕಿ

Public TV
By Public TV
2 hours ago
Bangla
Latest

ಬಾಂಗ್ಲಾ ಚುನಾವಣೆ | ಎಲ್ಲಾ ಪಕ್ಷಗಳಿಗೂ ಹೊಸ ಆರಂಭ – ಇನ್ನಾದ್ರೂ ಬದಲಾಗುತ್ತಾ ದೇಶದ ಭವಿಷ್ಯ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?