ಉಡುಪಿಯಲ್ಲಿ ವರುಣನ ಆರ್ಭಟ ಶುರು!

Public TV
1 Min Read
udp raining

ಉಡುಪಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದ್ದು, ಕಳೆದ 15 ದಿನಗಳಿಂದ ವರುಣನ ಆರ್ಭಟ ಉಡುಪಿ ಜಿಲ್ಲೆಯಾದ್ಯಂತ ಕೊಂಚ ಕಡಿಮೆಯಾಗಿತ್ತು ಆದರೆ ಇಂದು ಬೆಳಗ್ಗೆಯಿಂದಲೇ ಭಾರೀ ಮಳೆಯಾಗುತ್ತಿದೆ.

ನಗರದಾದ್ಯಂತ ಮುಂಜಾನೆ ಮಳೆಯಾಗಿದ್ದರಿಂದ ಸಂಚಾರಕ್ಕೆ ಸಮಸ್ಯೆಯಾಗಿದ್ದು, ಕಾರ್ಕಳ, ಕುಂದಾಪುರ, ಕಾಪುವಿನಲ್ಲಿ ವಿಪರೀತ ಮಳೆಯಾಗಿದೆ. ಬೈಂದೂರಿನ ಕೆಲವೆಡೆ ಮಳೆಯಾಗಿದ್ದು, ತಗ್ಗು ಪ್ರದೇಶದ ಗದ್ದೆಗಳಿಗೆ ನೀರು ಹರಿದಿದೆ.

ಜಿಲ್ಲೆಯಾದ್ಯಂತ ಕಾರ್ಮೋಡ ಮುಸುಕಿದ ವಾತಾವರಣವಿದ್ದು, ಮುಂದಿನ ಎರಡು ದಿನ ಭಾರೀ ಮಳೆಯಾಗಬಹುದು. ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಾದ ಹೆಬ್ರಿ, ಕೊಲ್ಲೂರು, ಮುಟ್ಲುಪಾಡಿಯಲ್ಲಿ ಅತೀ ಹೆಚ್ಚು ಮಳೆ ಸುರಿಯುತ್ತಿದೆ. ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದೆ. ಅರಬ್ಬೀ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳುವ ಮೀನುಗಾರರಿಗೆ ಜಿಲ್ಲಾಡಳಿತ ಮುಂಜಾಗೃತಾ ಕ್ರಮವಾಗಿ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

vlcsnap 2018 08 10 14h56m18s266

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕೂಡ ಮಳೆಯ ಅಬ್ಬರ ಮುಂದುವರಿದಿದ್ದು, ಕುಕ್ಕೆ ಸುಬ್ರಹ್ಮಣ್ಯ ಬಳಿಯ ಹೊಸಮಠ ಸೇತುವೆ 3ನೇ ದಿನವೂ ಮುಳುಗಡೆಯಾಗಿದೆ. ಉಪ್ಪಿನಂಗಡಿ-ಸುಬ್ರಹ್ಮಣ್ಯ ಸಂಪರ್ಕಿಸುವ ರಾಜ್ಯ ಹೆದ್ದಾರಿಯ ಹೊಸ್ಮಠ ಸೇತುವೆ, ಸುಬ್ರಹ್ಮಣ್ಯ ಕ್ಷೇತ್ರದ ಸ್ನಾನಘಟ್ಟವೂ ಮುಳುಗಡೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸುಳ್ಯದಲ್ಲಿ ಮಳೆ ಕಡಿಮೆಯಾಗಿದ್ದು, ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿದಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

Share This Article
Leave a Comment

Leave a Reply

Your email address will not be published. Required fields are marked *