Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಳೆ ಚಿಕ್ಕಬಳ್ಳಾಪುರದಲ್ಲಿ ಯುವ ಕೋವಿಡ್ ಲಸಿಕಾ ಮೇಳ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ನಾಳೆ ಚಿಕ್ಕಬಳ್ಳಾಪುರದಲ್ಲಿ ಯುವ ಕೋವಿಡ್ ಲಸಿಕಾ ಮೇಳ

Chikkaballapur

ನಾಳೆ ಚಿಕ್ಕಬಳ್ಳಾಪುರದಲ್ಲಿ ಯುವ ಕೋವಿಡ್ ಲಸಿಕಾ ಮೇಳ

Public TV
Last updated: January 4, 2022 7:21 pm
Public TV
Share
3 Min Read
DC LATHA 2
SHARE

ಚಿಕ್ಕಬಳ್ಳಾಪುರ : 15 ರಿಂದ 18 ವರ್ಷದ ಒಳಗಿನ ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಲು ಅವರು ಓದುತ್ತಿರುವ ಶಾಲಾ ಕಾಲೇಜುಗಳಲ್ಲಿಯೇ ನಾಳೆ ಲಸಿಕಾ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ನಿನ್ನೆ ಮತ್ತು ಇಂದು ಕೋವಿಡ್ ಲಸಿಕೆ ಪಡೆಯದೇ ಬಾಕಿ ಉಳಿದಿರುವ ವಿವಿಧ ಶಾಲಾ ಕಾಲೇಜುಗಳ 15 ವರ್ಷಕ್ಕೂ ಮೇಲ್ಪಟ್ಟ ಮಕ್ಕಳೆಲ್ಲರನ್ನು ಜನವರಿ 5 ರಂದೇ ಕೋವಿಡ್ ಲಸಿಕಾಕರಣದ ವ್ಯಾಪ್ತಿಗೆ ಒಳಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ಜಿಲ್ಲಾಧಿಕಾರಿಗಳ ಕಾರ್ಯಾಲಯದ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಯುವ ಕೋವಿಡ್ ಲಸಿಕಾ ಮೇಳ ಆಯೋಜನೆಯ ಪೂರ್ವ ಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ಅವರು ಯುವ ಜನತೆಯನ್ನು ಲಸಿಕಾಕರಣದ ವ್ಯಾಪ್ತಿಗೆ ಒಳಪಡಿಸಿ ಕೋವಿಡ್‍ನಿಂದ ಸಂಪೂರ್ಣ ರಕ್ಷಣೆಗೆ ತರಲು ಜಿಲ್ಲೆಯಲ್ಲಿ ಲಸಿಕಾ ಮೇಳವನ್ನು ಹಮ್ಮಿಕೊಳ್ಳುವಂತೆ ನಿರ್ದೇಶಿಸಿದ್ದಾರೆ. ಅದರಂತೆ ಜಿಲ್ಲೆಯಾದ್ಯಂತ ವಿವಿಧ ಶಾಲಾ ಕಾಲೇಜುಗಳಲ್ಲಿ 70ಕ್ಕೂ ಹೆಚ್ಚು ಸತ್ರ(Sessioಟಿs)ಗಳೊಂದಿಗೆ ಜನವರಿ 5ರಂದು ಕೋವಿಡ್ ಯುವ ಲಸಿಕಾ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆಗೆ ಟಫ್‍ರೂಲ್ಸ್ ಅನ್ವಯ – ಬಿಜೆಪಿಯಿಂದ ಷಡ್ಯಂತ್ರ ಎಂದ ಕಾಂಗ್ರೆಸ್‌

DC LATHA 1

40 ಸಾವಿರಕ್ಕೂ ಹೆಚ್ಚಿನ ಗುರಿ
ಜನವರಿ 3 ರಿಂದ 15 ರವರೆಗೂ 18 ವರ್ಷದ ಒಳಗಿನ ಲಸಿಕೆ ಪಡೆಯಲು ಅರ್ಹರಿರುವ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯವನ್ನು ಭರದಿಂದ ನಡೆಸಲಾಗುತ್ತಿದೆ. ಜಿಲ್ಲೆಯಾದ್ಯಂತ ಈ ವಯೋಮಾನದ 65,648 ಮಕ್ಕಳಿದ್ದು, ಈ ಪೈಕಿ ಜನವರಿ 3ರಂದು ಜಿಲ್ಲೆಯಾದ್ಯಂತ ಸುಮಾರು 7 ಸಾವಿರ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ. ಇಂದು ಕೂಡ ಈ ಸಂಖ್ಯೆ ದ್ವಿಗುಣ ಆಗಲಿದೆ. ಇನ್ನುಳಿದ 40 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನಾಳೆಯ ಯುವ ಲಸಿಕಾ ಮೇಳದಲ್ಲಿ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಮನ್ವಯತೆಯೊಂದಿಗೆ ಯೋಜನೆ ರೂಪಿಸಿಕೊಂಡು ಆರೋಗ್ಯಾಧಿಕಾರಿಗಳ ಮಟ್ಟದಲ್ಲಿ ಜಿಲ್ಲೆಯಾದ್ಯಂತ ತಂಡಗಳನ್ನು ರಚಿಸಿಕೊಂಡು ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲಾ ಕಾಲೇಜುಗಳ ಎಲ್ಲ ಅರ್ಹ ವಿದ್ಯಾರ್ಥಿಗಳಿಗೆ ನಾಳೆಯೇ ಲಸಿಕಾಕರಣ ಮಾಡಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ಯಾರು ವಂಚಿತರಾಗಬಾರದು
ಜನವರಿ 5 ರಂದು ಶಾಲಾಕಾಲೇಜುಗಳಿಗೆ ಹಾಜರಾಗುವ ವಿದ್ಯಾರ್ಥಿಗಳೆಲ್ಲರಿಗೂ ಲಸಿಕೆ ನೀಡಲಾಗುವುದು. ಇನ್ನುಳಿದಂತೆ ಗೈರು ಹಾಜರಾಗುವ ಹಾಗೂ ಶಾಲೆಯಿಂದ ಹೊರಗುಳಿದಿರುವ 15 ವರ್ಷಕ್ಕೂ ಮೇಲ್ಪಟ್ಟ ಮಕ್ಕಳಿಗೂ ಸಹ ಒಂದೆರಡು ದಿನಗಳಲ್ಲಿ ಲಸಿಕೆ ನೀಡಲು ಅಧಿಕಾರಿಗಳು ಅಗತ್ಯ ಕ್ರಮ ರೂಪಿಸಿ ಲಸಿಕೆ ಹಾಕಿಸಬೇಕು ಎಂದರು. ಜಿಲ್ಲೆಯಲ್ಲಿ 15 ವರ್ಷಕ್ಕೂ ಮೇಲ್ಪಟ್ಟ ಯಾವುದೇ ಮಕ್ಕಳು ಲಸಿಕಾಕರಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ತಾಲೂಕು ಆರೋಗ್ಯಾಧಿಕಾರಿಗಳು, ಶಾಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ಮುಖ್ಯಸ್ಥರು, ಬಿಇಒಗಳು ಹೆಚ್ಚಿನ ನಿಗಾ ವಹಿಸಬೇಕು ಎಂದರು.

CORONA VACCINATION

ತ್ವರಿತವಾಗಿ ಎರಡೂ ಡೋಸ್ ಮುಗಿಸಿ
ಹದಿನೈದು ವರ್ಷಕ್ಕೂ ಮೇಲ್ಪಟ್ಟ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಗೈರು ಹಾಜರಾಗದಂತೆ ವಿದ್ಯಾರ್ಥಿಗಳ ಪೋಷಕರು ನಿಗಾ ವಹಿಸಿ ಮಕ್ಕಳಲ್ಲಿ ಧೈರ್ಯ ತುಂಬಿ ಶಾಲೆಗಳಿಗೆ ಕಳಿಸಿಕೊಡಬೇಕು ಎಂದು ಜಿಲ್ಲಾಧಿಕಾರಿಗಳು ಪೋಷಕರಲ್ಲಿ ಮನವಿ ಮಾಡಿದರು. ಮಕ್ಕಳಿಗೆ ಕೊರೊನಾ ಲಸಿಕೆಯನ್ನು ಪಡೆಯಲು ಅರಿವು ಮೂಡಿಸುವ ಜೊತೆಗೆ ಪೋಷಕರು ಮತ್ತು ಶಿಕ್ಷಕರು ಮಕ್ಕಳಿಗೆ ಪ್ರೇರೆಪಿಸಬೇಕಾಗಿದೆ ಎಂದು ಸಲಹೆ ನೀಡಿದರು. ಇದಲ್ಲದೆ 18 ವರ್ಷಕ್ಕೂ ಮೇಲ್ಪಟ್ಟ ಅರ್ಹರೆಲ್ಲರಿಗೆ 2ನೇ ಮತ್ತು ಮೊದಲನೇ ಡೋಸ್ ಲಸಿಕಾಕರಣವೂ ಎಂದಿನಂತೆ ಮುಂದುವರಿಯಲಿದೆ. ಒಟ್ಟಾರೆ 18 ವರ್ಷಕ್ಕೂ ಮೇಲ್ಪಟ್ಟ ಅರ್ಹರೆಲ್ಲರನ್ನು ತ್ವರಿತವಾಗಿ ಎರಡೂ ಡೋಸ್‍ಗಳ ಲಸಿಕಾಕರಣದ ವ್ಯಾಪ್ತಿಗೆ ಒಳಪಡಿಸುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹೆಚ್ಚಿನ ನಿಗಾವಹಿಸುವಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

DC LATHA 3

ಮೇಳವನ್ನು ಯಶಸ್ವಿಗೊಳಿಸಿ
ಜಿಲ್ಲೆಯಲ್ಲಿ ಈವರೆಗೆ 18 ವರ್ಷಕ್ಕೂ ಮೇಲ್ಪಟ್ಟ ಜನರಿಗೆ ಲಸಿಕಾಕರಣ ಮಾಡಿದ ಮೆಗಾ ಲಸಿಕಾ ಮೇಳ, ಉತ್ಸವ ಹಾಗೂ ಅಭಿಯಾನಗಳಲ್ಲಿ ಜಿಲ್ಲೆಯ ಜನರು ಅತ್ಯುತ್ಸಾಹಿ ಸ್ಪಂದನಾಶೀಲರೂ ಎಂದು ಹೆಸರು ಪಡೆದು ಉತ್ತಮ ಸ್ಪಂದನೆ ನೀಡುವ ಮೂಲಕ ರಾಜ್ಯಮಟ್ಟದ ಪಟ್ಟಿಯಲ್ಲಿ ಹಲವು ಬಾರಿ ಪ್ರಥಮ ಸ್ಥಾನವನ್ನು ಚಿಕ್ಕಬಳ್ಳಾಪುರ ಜಿಲ್ಲೆ ಗಳಿಸಿತ್ತು. ಅದೇ ರೀತಿ 15 ವರ್ಷಕ್ಕೂ ಮೇಲ್ಪಟ್ಟ ಎಲ್ಲರೂ ಕೋವಿಡ್ ಲಸಿಕೆಯನ್ನು ಪಡೆಯುವ ಮೂಲಕ ಜನವರಿ 5ರ ಲಸಿಕಾ ಮೇಳವನ್ನು ಸಹ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಲ್ಲಿ ಕರೆ ನೀಡಿದರು.

TAGGED:ChikkaballapuraCoronavirusDistrict Collector R.Latavaccineಕೊರೊನಾ ವೈರಸ್ಚಿಕ್ಕಬಳ್ಳಾಪುರಜಿಲ್ಲಾಧಿಕಾರಿ ಆರ್.ಲತಾಲಸಿಕೆ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

ICC Mens T20 World Cup ind vs Namibia Jasprit Bumrahs stunning catch Axar Patel shocked
Cricket

ಬುಮ್ರಾ ಸ್ಟನ್ನಿಂಗ್‌ ಕ್ಯಾಚ್‌ – ಅಕ್ಷರ್‌ ಪಟೇಲ್‌ ಶಾಕ್‌!

Public TV
By Public TV
3 hours ago
kids died accident
Districts

ಶಾಲಾ ಬಸ್ ಹರಿದು ಮಕ್ಕಳು ಸಾವು – ಸ್ವಗ್ರಾಮದಲ್ಲಿ ನೆರವೇರಿದ ಅಂತ್ಯಕ್ರಿಯೆ

Public TV
By Public TV
4 hours ago
Ishan Kishan Hardik Pandya
Cricket

ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

Public TV
By Public TV
4 hours ago
DK Shivakumar Rahul Gandhi Sonia Gandhi 1 1
Bengaluru City

ಸಿಎಂ ಪಟ್ಟಕ್ಕೆ ಡಿಕೆಶಿ ಪಟ್ಟು – ಸೋನಿಯಾ, ರಾಹುಲ್‌ ಕೊಟ್ಟ ಅಭಯವೇನು?

Public TV
By Public TV
4 hours ago
Chikkamagaluru
Chikkamagaluru

2 ದಿನಗಳ ಬಳಿಕ ಮತ್ತೆ ಕಾಫಿನಾಡಲ್ಲಿ ಅಪರಿಚಿತ ಲಘು ವಿಮಾನ ಹಾರಾಟ

Public TV
By Public TV
5 hours ago
RCB 3
Bengaluru City

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ – ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ಸರ್ಕಾರ ಅನುಮತಿ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?