ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರಸಂಘಟನೆಯ ಇಬ್ಬರು ಪ್ರಮುಖ ಉಗ್ರರನ್ನು ಭಾರತೀಯ ಸೇನೆ ಶುಕ್ರವಾರ ಬೆಳಗ್ಗೆ ಶೋಪಿಯನ್ ಜಿಲ್ಲೆಯಲ್ಲಿ ಹೊಡೆದುರುಳಿಸಿದೆ. ಸಾವನ್ನಪ್ಪಿದ ಇಬ್ಬರು ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರಸಂಘಟನೆಯ ಕಮಾಂಡರ್ ಬುರ್ಹಾನ್ ವಾನಿಯ ಸಹಚರರು ಎಂದು ಗುರುತಿಸಲಾಗಿದೆ.
- Advertisement 2
ಸಾವನ್ನಪ್ಪಿದ ಉಗ್ರರನ್ನು ತಾರಿಕ್ ಮಾಲ್ವಿ ಮತ್ತು ಲತೀಫ್ ಟೈಗರ್ ಎಂದು ಗುರುತಿಸಲಾಗಿದೆ. ಈ ಹಿಂದೆ ಉಗ್ರ ಬುರ್ಹಾನ್ ವಾನಿಯನ್ನು ಸೇನೆ ಹತ್ಯೆ ಮಾಡಿತ್ತು. ಹತ್ಯೆಯಾದ ಬಳಿಕ ಬುರ್ಹಾನ್ ವಾನಿ ತನ್ನ ಸ್ನೇಹಿತರ ಜೊತೆಗಿದ್ದ ಫೋಟೋ ವೈರಲ್ ಆಗಿತ್ತು. ಅಷ್ಟೇ ಅಲ್ಲದೇ ಈ ಗುಂಪಿಗೆ ಬುರ್ಹಾನ್ ಬ್ರಿಗೇಡ್ ಎಂದು ಹೆಸರನ್ನು ಇಟ್ಟುಕೊಂಡಿದ್ದ. ಈ ಫೋಟೋದಲ್ಲಿ 11 ಮಂದಿಯನ್ನು ಸೇನೆ ಹತ್ಯೆ ಮಾಡಿದ್ದು ಈಗ ಕೊನೆಯವನಾಗಿ ಲತೀಫ್ ಹತ್ಯೆಯಾಗಿದ್ದಾನೆ. ಈ ಮೂಲಕ ಬುರ್ಹಾನ್ ವಾನಿಯ ಬ್ರಿಗೇಡ್ ಕಾಶ್ಮೀರದಲ್ಲಿ ನಿರ್ಮೂಲನೆಯಾಗಿದೆ.
- Advertisement 3
- Advertisement 4
ಶೋಪಿಯಾನ್ ಜಿಲ್ಲೆಯ ಇಮಾಮ್ ಸಾಹಿಬ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿದ್ದಾರೆ ಎನ್ನುವ ಖಚಿತ ಮಾಹಿತಿಯ ಮೇರೆಗೆ ಭಾರತೀಯ ಸೇನೆಯ 34 ಆರ್ಆರ್ ಮತ್ತು ವಿಶೇಷ ಕಾರ್ಯಾಚರಣೆ ಗುಂಪು (ಎಸ್ಒಜಿ) ಜಂಟಿ ಕಾರ್ಯಾಚರಣೆ ನಡೆಸಿತ್ತು. ಈ ಕಾರ್ಯಾಚರಣೆಯಲ್ಲಿ ಉಗ್ರರು ಮತ್ತು ಸೇನೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ ಮತ್ತು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ.
ಶೋಪಿಯಾನ್ ಜಿಲ್ಲೆಯು ಲೋಕಸಭಾ ಚುನಾವಣೆಯಲ್ಲಿ ಅನಂತನಾಗ್ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಈ ಕ್ಷೇತ್ರದಲ್ಲಿ ಮೇ 6ಕ್ಕೆ ಐದನೇ ಹಂತದಲ್ಲಿ ಚುನಾವಣೆ ನಡೆಯಲಿದೆ.