ಕೊಪ್ಪಳ: ವಿದ್ಯಾರ್ಥಿನಿಯರಿಗೆ ರಕ್ಷಣೆ ನೀಡಬೇಕಿದ್ದ ವಸತಿ ನಿಲಯದ ಮೇಲ್ವಿಚಾರಕನೇ ಕಿರುಕುಳ ನೀಡಿರುವ ಪ್ರಕರಣ ಕೊಪ್ಪಳದಲ್ಲಿ ಬೆಳಕಿಗೆ ಬಂದಿದೆ.
ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ತಾವರಗೇರ ಪಟ್ಟಣದಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಮೇಲ್ವಿಚಾರಕ ಅರವಿಂದ ಹಡಪದ ವಿರುದ್ಧ ಇಂತಹ ಗಂಭೀರ ಆರೋಪ ಕೇಳಿ ಬಂದಿದೆ. ಇದು ಬಾಲಕಿಯರ ವಸತಿ ನಿಲಯವಾಗಿದ್ದು, ವಿದ್ಯಾರ್ಥಿನಿಯರಿಗೆ ವಿನಾಃಕಾರಣ ಕಿರುಕುಳ ನೀಡುತ್ತಾನೆ ಎಂಬ ಆರೋಪಗಳು ಕೇಳಿ ಬಂದಿವೆ.
ಪರೋಕ್ಷವಾಗಿ ಶಿಕ್ಷಕರ ಜೊತೆ ತಳುಕು ಹಾಕಿ ಮಾತಾಡುತ್ತಾರೆ. ಪರವಾನಗಿ ಇಲ್ಲದೇ ನಮ್ಮ ಕೋಣೆಗೆ ಅನಾವಶ್ಯಕವಾಗಿ ಬರುತ್ತಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಈ ಬಗ್ಗೆ ಪಾಲಕರು ಅಧಿಕಾರಿಗಳಿಗೆ ಸಾಕಷ್ಟು ಮನವಿ ನೀಡಿದರೂ ಪ್ರಯೋಜನವಾಗಿಲ್ಲ.
ಗುರುವಾರ ಮಧ್ಯಾಹ್ನ ಮಾಧ್ಯಮ ಪ್ರತಿನಿಧಿಗಳು ಶಾಲೆಗೆ ತೆರಳಿ ಈ ಬಗ್ಗೆ ವಿದ್ಯಾರ್ಥಿಗಳಿಂದ ಮಾಹಿತಿ ಪಡೆಯುತ್ತಿದ್ದಂತೆಯೇ ಸಮಾಜ ಕಲ್ಯಾಣ ಇಲಾಖೆ ಎಚ್ಚೆತ್ತುಕೊಂಡಿದೆ. ಗುರುವಾರ ಸಂಜೆ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ರೇಣುಕಾನಂದಸ್ವಾಮಿ ಮೇಲ್ವಿಚಾರಕ ಅರವಿಂದರನ್ನು ವರ್ಗಾವಣೆ ಮಾಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv