Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 12 ಹೊಸ ಪ್ರಕರಣ, ಮೈಸೂರಿನಲ್ಲಿ ಮತ್ತೆ 7 ಮಂದಿಗೆ ಕೊರೊನಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 12 ಹೊಸ ಪ್ರಕರಣ, ಮೈಸೂರಿನಲ್ಲಿ ಮತ್ತೆ 7 ಮಂದಿಗೆ ಕೊರೊನಾ

Bengaluru City

12 ಹೊಸ ಪ್ರಕರಣ, ಮೈಸೂರಿನಲ್ಲಿ ಮತ್ತೆ 7 ಮಂದಿಗೆ ಕೊರೊನಾ

Public TV
Last updated: April 6, 2020 7:45 pm
Public TV
Share
3 Min Read
Corona 1 1
SHARE

– ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 163ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 163ಕ್ಕೆ ಏರಿದ್ದು, ಕಳೆದ 24 ಗಂಟೆಯಲ್ಲಿ 12 ಹೊಸ ಕೊರೊನಾ ಸೊಂಕಿತ ಪ್ರಕರಣ ವರದಿಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

12 ಕೊರೊನಾ ಸೋಂಕಿತ ಪ್ರಕರಣದಲ್ಲಿ 7 ಮಂದಿ ಮೈಸೂರು, ಇಬ್ಬರು ಬಾಗಲಕೋಟೆ, ಒಬ್ಬರು ಕೇರಳ, ಒಬ್ಬರು ಬೆಂಗಳೂರು, ಒಬ್ಬರು ಬೆಂಗಳೂರು ಗ್ರಾಮಂತರಕ್ಕೆ ಸೇರಿದವರಾಗಿದ್ದಾರೆ. ಈವರೆಗೆ ದಾಖಲಾದ 163 ಸೊಂಕಿತರಲ್ಲಿ 9 ಮಂದಿ ಕೇರಳ ಮೂಲದವರಾಗಿದ್ದು, ಸದ್ಯ ಕರ್ನಾಟಕದಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

Corona Virus 6

ಇಂದಿನ ಹೊಸ ಪ್ರಕರಣದಿಂದಾಗಿ ಮೈಸೂರು ಜಿಲ್ಲೆಯಲ್ಲಿ 35 ಮಂದಿಗೆ ಕೊರೊನಾ ಬಂದಿದ್ದರೆ ಬೆಂಗಳೂರು ನಗರದಲ್ಲಿ 59 ಮಂದಿಗೆ ಕೊರೊನಾ ಬಂದಿದೆ.

ರೋಗಿ 152 – ಬೆಂಗಳೂರಿನ 32 ವರ್ಷದ ಪುರುಷ. ರೋಗಿ 43 ಹಾಗೂ ರೋಗಿ 44 ಅವರ ಮಗ. ಈ ಇಬ್ಬರು ರೋಗಿಗಳ ಜೊತೆ ಇವರು ಪ್ರಾಥಮಿಕ ಸಂಪರ್ಕ ಹೊಂದಿದ್ದರು. ಇವರಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರೋಗಿ 153 – ಕೇರಳ ಮೂಲದ 62 ವರ್ಷದ ವೃದ್ಧೆ. ಜರ್ಮನಿಗೆ ಪ್ರಯಾಣ ಮಾಡಿರುವ ಹಿನ್ನೆಲೆ ಇದ್ದು, ಕೇರಳ ಮೂಲದ ರೋಗಿ 106 ಹಾಗೂ ಕ್ವಾರಂಟೈನ್ ಅಲ್ಲಿರುವ ರೋಗಿ 133 ಜೊತೆ ಸಂಪರ್ಕ ಹೊಂದಿದ್ದರು. ಈವರಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

karnataka corona case april 06

ರೋಗಿ 154 – ಮೈಸೂರಿನ 20 ವರ್ಷದ ಯುವಕ. ರೋಗಿ 104 ಅವರ ಸಹೋದರ. ರೋಗಿ ಜೊತೆ ಸಂಪರ್ಕ ಹೊಂದಿದ್ದನು. ಈತನನ್ನು ಮೈಸೂರಿನ ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ಕೊಡಲಾಗುತ್ತಿದೆ.

ರೋಗಿ 155 – ಮೈಸೂರಿನ 37 ವರ್ಷದ ಪುರುಷ. ದೆಹಲಿಗೆ ಪ್ರಯಾಣ ಬೆಳೆಸಿರುವ ಹಿನ್ನೆಲೆ ಇದ್ದು, ಮೈಸೂರಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ.

ರೋಗಿ 156 – ಮೈಸೂರಿನ 57 ವರ್ಷದ ಪುರುಷ. ಇವರೂ ಕೂಡ ದೆಹಲಿಗೆ ಪ್ರಯಾಣ ಮಾಡಿರುವ ಹಿನ್ನೆಲೆ ಇದ್ದು, ಇವರಿಗೆ ಮೈಸೂರಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ನೀಡಲಾಗುತ್ತಿದೆ.

coronavirus

ರೋಗಿ 157 – ಮೈಸೂರಿನ 22 ವರ್ಷದ ಯುವಕ. ರಾಷ್ಟ್ರ ರಾಜಧಾನಿ ದೆಹಲಿಗೆ ಪ್ರಯಾಣ ಮಾಡಿರುವ ಹಿನ್ನೆಲೆ ಇದ್ದು, ಈತನನ್ನೂ ಕೂಡ ಮೈಸೂರಿನ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ.

ರೋಗಿ 158 – ಮೈಸೂರಿನ 26 ವರ್ಷದ ಯುವಕ. ಈತನ ವಿವರವನ್ನು ಕಲೆಹಾಕಲಾಗುತ್ತಿದ್ದು, ಮೈಸೂರಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ.

ರೋಗಿ 159 – ಮೈಸೂರಿನ 32 ವರ್ಷದ ಮಹಿಳೆ. ರೋಗಿ 52 ಅವರ ರೀತಿಯೇ ಇವರು ಕೂಡ ಫಾರ್ಮಸಿಟಿಕಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರನ್ನು ಮೈಸೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಿ ನಿಗಾ ವಹಿಸಲಾಗಿದೆ.

corona 14

ರೋಗಿ 160 – ಮೈಸೂರಿನ 35 ವರ್ಷದ ಪುರುಷ. ಇವರು ದುಬೈಗೆ ಪ್ರಯಾಣ ಮಾಡಿರುವ ಹಿನ್ನೆಲೆ ಹೊಂದಿದ್ದು, ಇವರಿಗೂ ಕೂಡ ಮೈಸೂರಿನ ಜಿಲ್ಲಾಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.

ರೋಗಿ 161 – ಬಾಗಲಕೋಟೆಯ 56 ವರ್ಷದ ಮಹಿಳೆ. ಇವರು ರೋಗಿ 125 ಅವರ ಪತ್ನಿ. ರೋಗಿ 125 ಅವರ ಜೊತೆ ಸಂಪರ್ಕದಲ್ಲಿದ್ದ ಕಾರಣ ಇವರಿಗೂ ಸೋಂಕು ತಗುಲಿದೆ. ಇವರಿಗೆ ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ.

ರೋಗಿ 162 – ಬಾಗಲಕೋಟೆಯ 58 ವರ್ಷದ ಪುರುಷ. ಇವರು ರೋಗಿ 125 ಅವರ ಸಹೋದರ. ರೋಗಿ 125 ಅವರ ಜೊತೆ ಸಂಪರ್ಕದಲ್ಲಿದ್ದ ಕಾರಣ ಇವರಿಗೂ ಸೋಂಕು ತಗುಲಿದ್ದು, ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಒಳಪಡಿಸಲಾಗಿದೆ.

karnataka corona case april 06 isolated

ರೋಗಿ 163 – ಬೆಂಗಳೂರು ಗ್ರಾಮಾಂತರದ 43 ವರ್ಷದ ಪುರುಷ. ಇವರು ದೆಹಲಿಯಲ್ಲಿ ಮಾರ್ಚ್ 13ರಿಂದ 18ರವರೆಗೆ ನಡೆದಿದ್ದ ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗಿಯಾಗಿದ್ದರು. ಇವರಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈವರೆಗೆ ವರದಿಯಾದ 163 ಸೋಂಕಿತರಲ್ಲಿ 20 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 139 ಮಂದಿ ಇನ್ನೂ ಸೊಂಕಿನಿಂದ ಬಳಲುತ್ತಿದ್ದು, 4 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದ 25 ಜಿಲ್ಲೆಗಳಿಂದ ಇಂದು 47 ಮಂದಿ ಹೊಸ ಕೊರೊನಾ ಶಂಕಿತರನ್ನು ಪತ್ತೆಹಚ್ಚಲಾಗಿದ್ದು, ಶಂಕಿತರು ಯಾವ ಜಿಲ್ಲೆಯವರೋ ಆ ಜಿಲ್ಲಾಸ್ಪತ್ರೆಗಳಲ್ಲಿಯೇ ಅವರನ್ನು ಪ್ರತ್ಯೇಕವಾಗಿರಿಸಿ ನಿಗಾ ವಹಿಸಲಾಗಿದೆ. ಈವರೆಗೆ 333 ಮಂದಿ ಶಂಕಿತರನ್ನು ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿರಿಸಲಾಗಿತ್ತು, ಅವರಲ್ಲಿ ಇಂದು 120 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ.

TAGGED:bengaluruCoronavirushealth departmentInfectionkarnatakaPublic TVಆರೋಗ್ಯ ಇಲಾಖೆಕರ್ನಾಟಕಕೊರೊನಾ ವೈರಸ್ಪಬ್ಲಿಕ್ ಟಿವಿಬೆಂಗಳೂರುಸೋಂಕಿತರು
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

India vs Pakistan shake hands row
Cricket

ಮ್ಯಾಚ್‌ನಲ್ಲಿ ಪಾಕ್‌ ಆಟಗಾರರ ಜೊತೆ ಹ್ಯಾಂಡ್‌ಶೇಕ್‌ ಮಾಡ್ತೀರಾ?- ಪ್ರಶ್ನೆಗೆ ಸೂರ್ಯಕುಮಾರ್‌ ಹೇಳಿದ್ದೇನು?

Public TV
By Public TV
36 minutes ago
Noida Suicide
Crime

Valentine’s Day Tragedy – ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ

Public TV
By Public TV
42 minutes ago
Spa 1
Bidar

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ – ಐವರು ಯುವತಿಯರ ರಕ್ಷಣೆ, ಇಬ್ಬರು ಅರೆಸ್ಟ್

Public TV
By Public TV
1 hour ago
DK Shivakumar 9
Haveri

ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟು ಬರುತ್ತೆ, ಬರೆದಿಟ್ಟುಕೊಳ್ಳಿ: ಡಿಕೆಶಿ

Public TV
By Public TV
2 hours ago
Mahashivratri Fasting Vrat
Bengaluru City

Mahashivratri 2026: ಉಪವಾಸ ವ್ರತ ಹೇಗೆ ತೆಗೆದುಕೊಳ್ಳಬೇಕು?- ಯಾವಾಗ ಉಪವಾಸ ಮುರಿಯಬೇಕು?

Public TV
By Public TV
3 hours ago
Basavaraj Bommai
Bengaluru City

ಬಡವರ ತಲೆ ಮೇಲೆ ಆರ್ಥಿಕ ಭಾರ ಹೇರಿದ ಶೂನ್ಯ ಸಾಧನೆ ಸಮಾವೇಶ: ಬಸವರಾಜ ಬೊಮ್ಮಾಯಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?