ಬೆಂಗಳೂರು: 15 ಸಾವಿರ ಶಿಕ್ಷಕರ ನೇಮಕಾತಿ ಪರೀಕ್ಷೆ ನಿಗಧಿಯಾಗಿರುವಂತೆ ಮೇ 21, 22 ರಂದು ನಡೆಯಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಪರೀಕ್ಷಾ ಸಿದ್ಧತೆ ಕುರಿತು ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ, ಪಿಎಸ್ಐ ಮತ್ತು ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮದ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಯಾವುದೇ ಪರೀಕ್ಷೆ ಅಕ್ರಮ ಆಗದಂತೆ ಕ್ರಮವಹಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: MBP ನನ್ನ ಸ್ನೇಹಿತರು, ಬೇಕೆಂದಾಗ ಭೇಟಿ ಮಾಡ್ತೀನಿ: ಡಿಕೆಶಿಗೆ ಅಶ್ವಥ್ ನಾರಾಯಣ ತಿರುಗೇಟು
ಪ್ರತಿ ಜಿಲ್ಲೆಗಳಲ್ಲಿ ಡಿಸಿ, ಸಿಇಓ, ಎಸ್ಪಿ ನೇತೃತ್ವದಲ್ಲಿ ಕಮಿಟಿ ರಚನೆ ಮಾಡಲಾಗಿದ್ದು, ಸಂಪೂರ್ಣ ಜವಾಬ್ದಾರಿ ಅವರಿಗೇ ನೀಡಲಾಗಿದೆ. ಶಿಕ್ಷಕರ ಪರೀಕ್ಷೆಗೆ 1,06,083 ಅಭ್ಯರ್ಥಿಗಳು ನೋಂದಣಿಯಾಗಿದ್ದು, ರಾಜ್ಯದ 435 ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಚಿಕ್ಕೋಡಿ ಜಿಲ್ಲೆಯೊಂದರಲ್ಲೇ 11 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿರೋದ್ರಿಂದ ಅತಿ ಹೆಚ್ಚು ಪರೀಕ್ಷಾ ಕೇಂದ್ರಗಳು ಇವೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ಸಿದ್ದು ಆಪ್ತರ ಮೇಲೆ ಅನುಮಾನ ಪಟ್ಟಿದ್ದಾರಾ ಡಿಕೆಶಿ?
ಏನಿದೇ ಮಾರ್ಗಸೂಚಿಯಲ್ಲಿ?
- ಪರೀಕ್ಷಾ ಕೇಂದ್ರಗಳಲ್ಲಿ ಎರಡು ರೀತಿ ಪರಿಶೀಲನಾ ವ್ಯವಸ್ಥೆ.
- ಮೊಲದು ಪೊಲೀಸರಿಂದ, ಬಳಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ
- ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಮೊಬೈಲ್, ವಾಚ್, ಎಲೆಕ್ಟ್ರಾನಿಕ್ ಉಪಕರಣಗಳ ನಿಷೇಧ
- ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಒಂದು ಗಂಟೆ ಮುಂಚೆ ಬರಬೇಕು.
- ಪ್ರತಿ ಕೇಂದ್ರಕ್ಕೂ ಶಿಕ್ಷಣ ಇಲಾಖೆಯಿಂದಲೇ ಗಡಿಯಾರ ವ್ಯವಸ್ಥೆ
- ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಕೆ.
- ಸಿಸಿ ಟಿವಿ ಮಾನಿಟರ್ ಮಾಡಲು ವಿಶೇಷ ತಂಡ ರಚನೆ.
- ಒಂದು ಕೊಠಡಿಗೆ 20 ಅಭ್ಯರ್ಥಿಗಳು ಕೂರಲು ಅವಕಾಶ
- ಪರೀಕ್ಷೆಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟ
- ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಮೆಟಲ್ ಡಿಟೆಕ್ಟಿವ್ ಅಳವಡಿಕೆಗೆ ಕ್ರಮ.
- ಪ್ರತಿ ಜಿಲ್ಲೆಗೆ ಡಿಸಿ, ಸಿಇಓ, ಎಸ್ಪಿ ನೇತೃತ್ವದಲ್ಲಿ ಸಮಿತಿ ನೇಮಕ. ಪರೀಕ್ಷೆ ಸಂಪೂರ್ಣ ಜವಾಬ್ದಾರಿ ಈ ಸಮಿತಿಗೆ.
- ಪ್ರತಿ ಜಿಲ್ಲೆಗಳಲ್ಲಿ ಸ್ಕ್ವಾರ್ಡ್ ವ್ಯವಸ್ಥೆ ಇರಲಿದೆ.
- ಪರೀಕ್ಷೆಗೆ ಖಾಸಗಿ ಶಾಲಾ ಕೊಠಡಿಗಳ ಬಳಕೆ, ಆ ಶಾಲಾ ಶಿಕ್ಷಕರನ್ನು ಎಕ್ಸಾಂಗೆ ಬಳಸಿಕೊಳ್ಳೊಲ್ಲ.
- ಪ್ರತಿ ಕೇಂದ್ರಕ್ಕೂ ತಹಶಿಲ್ದಾರರ್ ಮೇಲ್ಪಟ್ಟ ಅಧಿಕಾರಿಗಳ ನೇಮಕ ಮಾಡಲಾಗಿದೆ.
- ಪ್ರತಿ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿ